ಮೈಸೂರು: ಶೃಂಗೇರಿಯಲ್ಲಿ ಈಚೆಗೆ ನಡೆದ ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಸ್ಪರ್ಧೆಯಲ್ಲಿ ಮೈಸೂರಿನ ಮಹರ್ಷಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿಜೇತರಾಗಿ ಬಹುಮಾನ ಪಡೆದುಕೊಂಡಿದ್ದಾರೆ.
ಶಾಲೆಯ ವಿದ್ಯಾರ್ಥಿಗಳಾದ ಶಿವಾನಿ ಎ.ಹೊಯ್ಸಳ, ಎಸ್.ರಾಘವೇಂದ್ರ ಆತ್ರೇಯ, ಎ.ಶ್ರೀರಂಗಪ್ರಭು, ಎಂ.ಎಲ್.ಶ್ರಾವಣಿ, ಪಿ.ಅನಿರುದ್ಧ, ಸಂಜೀವ್ ಜತೋಲಿಯ, ಡಿ.ಆರ್.ಸಂಜಿತ್ ಅವರು ಭಗವದ್ಗೀತೆಯ 18 ಅಧ್ಯಾಯಗಳ ಕಂಠಪಾಠ ಸ್ಪರ್ಧೆಯಲ್ಲಿ 700 ಶ್ಲೋಕಗಳನ್ನು ಸುಲಲಿತವಾಗಿ ಪಠಣ ಮಾಡಿ ಶ್ರೀಗಳಿಂದ ಆಶೀರ್ವಾದ ಪೂರಕವಾಗಿ ತಲಾ 21.000 ರೂ. ನಗದು ಬಹುಮಾನಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಈ ಎಲ್ಲ ವಿದ್ಯಾರ್ಥಿಗಳನ್ನು ಮತ್ತು ಯಶಸ್ಸಿಗೆ ಶ್ರಮಿಸಿದ ಸಂಸ್ಕೃತ ವಿಭಾಗದ ಶಿಕ್ಷಕರಾದ ಶೈಲಜಾ, ಎ.ಬಿ.ರಾಘವೇಂದ್ರ ಮತ್ತು ವಿಜಯಕುಮಾರ್ ಅವರನ್ನು ಮಹರ್ಷಿ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ವಿಶ್ವಸ್ಥ ಡಾ.ಭವಾನಿ ಶಂಕರ್, ಸಂಯೋಜಕ ತೇಜಸ್ ಬಿ.ಶಂಕರ್, ಸಂಸ್ಥೆಯ ಪ್ರಾಚಾರ್ಯ ಗೋಪಾಲ ಸ್ವಾಮಿ, ಎ.ಕುಮಾರ್ ಮತ್ತು ಸತೀಶ್ ಅಭಿನಂದಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…