ಜಿಲ್ಲೆಗಳು

ಬಹುರೂಪಿ ರಾಷ್ಟ್ರೀಯ ರಂಗೋತ್ಸವದಲ್ಲಿ ‘ಚಿತ್ರಕಲಾ ಶಿಬಿರ’ಕ್ಕೆ ಚಾಲನೆ

ಮೈಸೂರು: ಯಾವುದೇ ಕಲಾವಿದ ಅಥವಾ ವಿಚಾರವಾದಿಗೆ ಅಭಿವ್ಯಕ್ತಿಸುವ ಸ್ವಾತಂತ್ರ್ಯವನ್ನು ದೇಶವು ನೀಡಿದೆ. ಆದರೆ, ನಮ್ಮ ನಂಬಿಕೆ, ಚಿಂತನೆಗಳ ಅಭಿವ್ಯಕ್ತಿಯು ಇನ್ನೊಬ್ಬರ ಹಕ್ಕು, ನಂಬಿಕೆಗೆ ಘಾಸಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

ನಗರದ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ರಂಗಾಯಣದಲ್ಲಿ ‘ಬಹುರೂಪಿ ರಾಷ್ಟ್ರೀಯ ರಂಗೋತ್ಸವ’ ಹಿನ್ನೆಲೆಯಲ್ಲಿ ಶನಿವಾರ ‘ಚಿತ್ರಕಲಾ ಶಿಬಿರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸುವ ಮುನ್ನ ಎಚ್ಚರಿಕೆ ಇರಬೇಕು. ಇನ್ನೊಬ್ಬರಿಗೆ ನೋವಾಗದಂತೆ ಅದನ್ನು ವ್ಯಕ್ತಪಡಿಸುವ ಸೂಕ್ಷ್ಮತೆ ಇರಬೇಕು. ಸಿಟ್ಟು ಬಂದಾಗ ಭಾವನೆಗಳನ್ನು ಕೆರಳಿಸುವಾಗೇ ವರ್ತಿಸಬಾರದು. ಬಹುತ್ವ ಹಾಗೂ ಉದಾರತತೆಯನ್ನು ಗೌರವಿಸುವುದು ಈ ನೆಲದ ಗುಣ ಎಂದರು. ಯುವ ಕಲಾವಿದರಿಗೆ ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು. ಹೊಸತನಕ್ಕೆ ತೆರೆದುಕೊಂಡಾಗ ಸವಾಲು ಇದ್ದೇ ಇರುತ್ತದೆ. ಸೋಲನ್ನು ಕಾಯುವವರು ನಮ್ಮೆದುರು ಇದ್ದೇ ಇರುತ್ತಾರೆ. ಅವೆಲ್ಲವನ್ನು ಮೀರಿ ನಡೆಯಬೇಕು. ರಂಗಾಯಣ ಕ್ರಿಯಾಶೀಲ ವೇದಿಕೆಯಾಗಿದ್ದು, ಅದನ್ನು ಯುವ ಉತ್ಸಾಹಿಗಳು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಂಗ ಕಲೆಯಲ್ಲಿ ತೊಡಗಿಸಿಕೊಂಡವರು ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗುತ್ತಾರೆ. ರಂಗಭೂಮಿಗೆ ಎಲ್ಲ ಕಡೆಯಿಂದಲೂ ಜ್ಞಾನ-ವಿಚಾರಗಳು ಹರಿದು ಬರುತ್ತವೆ. ಬಹುರೂಪಿ ರಂಗೋತ್ಸವಕ್ಕೆ ದೇಶದ ವಿವಿಧೆಡೆಗಳಿಂದ ಕಲಾವಿದರು, ತಂಡಗಳು ಬರುತ್ತಿದ್ದಾರೆ. ಎಲ್ಲರೊಂದಿಗೆ ಬೆರೆಯುವ ಅವಕಾಶ ಸಿಗುತ್ತಿದೆ ಎಂದರು.

ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಮಾತನಾಡಿ, ಎಲ್ಲವನ್ನು ಗೌರವಿಸುವುದೇ ಸವಾನತೆ. ಭಾರತೀಯತೆಯೇ ನಮ್ಮ ತಾಯಿ. ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಖ್ಯಾನ ಮಾಡುವವರು ಕೆಲವೊಂದನ್ನು ಮಾತ್ರ ಹೇಳಿ, ಇನ್ನೊಂದಷ್ಟನ್ನು ಹೇಳಬಾರದು ಎನ್ನುತ್ತಾರೆ. ಅದು ಕೂಡ ಅಭಿವ್ಯಕ್ತಿಗೆ ಧಕ್ಕೆ ಅಲ್ಲವೇ. ಅಭಿವ್ಯಕ್ತಿಯನ್ನು ಸಹಿಸದೇ ವಿರೋಧ ಮಾಡುವವರಿಗೆ ಸ್ವೀಕರಿಸುವ ಮನೋಭಾವವೇ ಇಲ್ಲ. ನಾಟಕ ನಿಲ್ಲಿಸಬೇಕೆಂದು ತಡೆ ಹಾಕುವುದು, ನಮ್ಮ ಹಕ್ಕಿನ ಮೇಲಿನ ಹಲ್ಲೆ ಆಗುವುದಿಲ್ಲವೇ? ನಿರ್ದಿಷ್ಟ ಧರ್ಮದ ಬಗ್ಗೆ ಮಾತ್ರ ಪ್ರಶ್ನಿಸಬೇಡಿ ಎನ್ನುವ ಜಾತ್ಯತೀತರು ಇದ್ದಾರೆ. ಭಾರತ ಮಾತೆಗೆ ಗೌರವ ನೀಡದ ‘ತುಕ್ಡೇ-ತುಕ್ಡೇ ಗ್ಯಾಂಗ್’ ಈಗಲೂ ಇದೆ ಎಂದರು.

ಚಿತ್ರ ಕಲಾವಿದ ಎಲ್.ಶಿವಲಿಂಗಪ್ಪ ಮಾತನಾಡಿ, ಸರ್ವ ಜನಾಂಗವನ್ನು ಒಳಗೊಂಡರೆ ಅದು ಭಾರತೀಯತೆ ಆಗುತ್ತದೆ. ವೈವಿಧ್ಯತೆ, ನಂಬಿಕೆಗಳನ್ನು ಕಾಪಾಡಿಕೊಳ್ಳಬೇಕು. ಎಲ್ಲವನ್ನು ಗ್ರಹಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳಬೇಕು. ಮನಸ್ಸು ವಿಶಾಲಗೊಳಿಸಿಕೊಳ್ಳಬೇಕು. ಆಗ ಮಾತ್ರ ಕಲಾವಿದ ಆಗುತ್ತಾನೆ ಎಂದರು.

ಶಿಬಿರದಲ್ಲಿ ಚಾಮರಾಜೇಂದ್ರ ದೃಶ್ಯಕಲಾ ಅಕಾಡೆಮಿಯು (ಕಾವಾ) ೨೨ ವಿದ್ಯಾರ್ಥಿಗಳು ಪಾಲ್ಗೊಂಡರು.
ರಂಗಾಯಣ ಉಪನಿರ್ದೇಶಕರಾದ ನಿರ್ಮಲಾ ಮಠಪತಿ, ಕಾವಾ ಆಡಳಿತಾಧಿಕಾರಿ ಎಚ್.ಎಂ.ಜಯಶಂಕರ್, ‘ಬಹುರೂಪಿ’ ಸಂಚಾಲಕ ಜಗದೀಶ್ ಮನವಾರ್ತೆ ಕಾರ್ಯಕ್ರಮದಲ್ಲಿ ಹಾಜರಿದ್ದರು.


ಎಂ.ಎಫ್.ಹುಸೇನ್ ಅವರು ದೇವತೆಗಳ ಬೆತ್ತಲೆ ಚಿತ್ರ ಬಿಡಿಸಿ ಅಭಿವ್ಯಕ್ತಿಯೆಂದರು. ಅದನ್ನು ವಿರೋಧಿಸದೇ ಭಾರತೀಯರು ಸಹಿಸಿಕೊಂಡರು. ಆದರೆ, ನಿರ್ದಿಷ್ಟ ಧರ್ಮದ ಮೇಲೆ ಅದೇ  ಮಾದರಿಯಲ್ಲಿ ಬರೆದಿದ್ದರೆ ತಲೆ ಉರುಳುತ್ತದೆ. ನಮ್ಮ ಭಾವ ನಾಶವಾಗಿ ಹೋಗುವ ಭಯ ಮನೆ ಮಾಡಿದ್ದು, ಅದು ಕುಕ್ಕರ್ ಬಾಂಬ್ ಮೂಲಕ ಅಡುಗೆ ಮನೆಯನ್ನೂ ಪ್ರವೇಶಿಸಿದೆ.

ಅಡ್ಡಂಡ ಸಿ.ಕಾರ್ಯಪ್ಪ, ನಿರ್ದೇಶಕರು, ರಂಗಾಯಣ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

35 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago