ಜಿಲ್ಲೆಗಳು

ಬಹುರೂಪಿ ರಾಷ್ಟ್ರೀಯ ರಂಗೋತ್ಸವದಲ್ಲಿ ‘ಚಿತ್ರಕಲಾ ಶಿಬಿರ’ಕ್ಕೆ ಚಾಲನೆ

ಮೈಸೂರು: ಯಾವುದೇ ಕಲಾವಿದ ಅಥವಾ ವಿಚಾರವಾದಿಗೆ ಅಭಿವ್ಯಕ್ತಿಸುವ ಸ್ವಾತಂತ್ರ್ಯವನ್ನು ದೇಶವು ನೀಡಿದೆ. ಆದರೆ, ನಮ್ಮ ನಂಬಿಕೆ, ಚಿಂತನೆಗಳ ಅಭಿವ್ಯಕ್ತಿಯು ಇನ್ನೊಬ್ಬರ ಹಕ್ಕು, ನಂಬಿಕೆಗೆ ಘಾಸಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

ನಗರದ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ರಂಗಾಯಣದಲ್ಲಿ ‘ಬಹುರೂಪಿ ರಾಷ್ಟ್ರೀಯ ರಂಗೋತ್ಸವ’ ಹಿನ್ನೆಲೆಯಲ್ಲಿ ಶನಿವಾರ ‘ಚಿತ್ರಕಲಾ ಶಿಬಿರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸುವ ಮುನ್ನ ಎಚ್ಚರಿಕೆ ಇರಬೇಕು. ಇನ್ನೊಬ್ಬರಿಗೆ ನೋವಾಗದಂತೆ ಅದನ್ನು ವ್ಯಕ್ತಪಡಿಸುವ ಸೂಕ್ಷ್ಮತೆ ಇರಬೇಕು. ಸಿಟ್ಟು ಬಂದಾಗ ಭಾವನೆಗಳನ್ನು ಕೆರಳಿಸುವಾಗೇ ವರ್ತಿಸಬಾರದು. ಬಹುತ್ವ ಹಾಗೂ ಉದಾರತತೆಯನ್ನು ಗೌರವಿಸುವುದು ಈ ನೆಲದ ಗುಣ ಎಂದರು. ಯುವ ಕಲಾವಿದರಿಗೆ ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು. ಹೊಸತನಕ್ಕೆ ತೆರೆದುಕೊಂಡಾಗ ಸವಾಲು ಇದ್ದೇ ಇರುತ್ತದೆ. ಸೋಲನ್ನು ಕಾಯುವವರು ನಮ್ಮೆದುರು ಇದ್ದೇ ಇರುತ್ತಾರೆ. ಅವೆಲ್ಲವನ್ನು ಮೀರಿ ನಡೆಯಬೇಕು. ರಂಗಾಯಣ ಕ್ರಿಯಾಶೀಲ ವೇದಿಕೆಯಾಗಿದ್ದು, ಅದನ್ನು ಯುವ ಉತ್ಸಾಹಿಗಳು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ರಂಗ ಕಲೆಯಲ್ಲಿ ತೊಡಗಿಸಿಕೊಂಡವರು ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗುತ್ತಾರೆ. ರಂಗಭೂಮಿಗೆ ಎಲ್ಲ ಕಡೆಯಿಂದಲೂ ಜ್ಞಾನ-ವಿಚಾರಗಳು ಹರಿದು ಬರುತ್ತವೆ. ಬಹುರೂಪಿ ರಂಗೋತ್ಸವಕ್ಕೆ ದೇಶದ ವಿವಿಧೆಡೆಗಳಿಂದ ಕಲಾವಿದರು, ತಂಡಗಳು ಬರುತ್ತಿದ್ದಾರೆ. ಎಲ್ಲರೊಂದಿಗೆ ಬೆರೆಯುವ ಅವಕಾಶ ಸಿಗುತ್ತಿದೆ ಎಂದರು.

ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಮಾತನಾಡಿ, ಎಲ್ಲವನ್ನು ಗೌರವಿಸುವುದೇ ಸವಾನತೆ. ಭಾರತೀಯತೆಯೇ ನಮ್ಮ ತಾಯಿ. ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಖ್ಯಾನ ಮಾಡುವವರು ಕೆಲವೊಂದನ್ನು ಮಾತ್ರ ಹೇಳಿ, ಇನ್ನೊಂದಷ್ಟನ್ನು ಹೇಳಬಾರದು ಎನ್ನುತ್ತಾರೆ. ಅದು ಕೂಡ ಅಭಿವ್ಯಕ್ತಿಗೆ ಧಕ್ಕೆ ಅಲ್ಲವೇ. ಅಭಿವ್ಯಕ್ತಿಯನ್ನು ಸಹಿಸದೇ ವಿರೋಧ ಮಾಡುವವರಿಗೆ ಸ್ವೀಕರಿಸುವ ಮನೋಭಾವವೇ ಇಲ್ಲ. ನಾಟಕ ನಿಲ್ಲಿಸಬೇಕೆಂದು ತಡೆ ಹಾಕುವುದು, ನಮ್ಮ ಹಕ್ಕಿನ ಮೇಲಿನ ಹಲ್ಲೆ ಆಗುವುದಿಲ್ಲವೇ? ನಿರ್ದಿಷ್ಟ ಧರ್ಮದ ಬಗ್ಗೆ ಮಾತ್ರ ಪ್ರಶ್ನಿಸಬೇಡಿ ಎನ್ನುವ ಜಾತ್ಯತೀತರು ಇದ್ದಾರೆ. ಭಾರತ ಮಾತೆಗೆ ಗೌರವ ನೀಡದ ‘ತುಕ್ಡೇ-ತುಕ್ಡೇ ಗ್ಯಾಂಗ್’ ಈಗಲೂ ಇದೆ ಎಂದರು.

ಚಿತ್ರ ಕಲಾವಿದ ಎಲ್.ಶಿವಲಿಂಗಪ್ಪ ಮಾತನಾಡಿ, ಸರ್ವ ಜನಾಂಗವನ್ನು ಒಳಗೊಂಡರೆ ಅದು ಭಾರತೀಯತೆ ಆಗುತ್ತದೆ. ವೈವಿಧ್ಯತೆ, ನಂಬಿಕೆಗಳನ್ನು ಕಾಪಾಡಿಕೊಳ್ಳಬೇಕು. ಎಲ್ಲವನ್ನು ಗ್ರಹಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳಬೇಕು. ಮನಸ್ಸು ವಿಶಾಲಗೊಳಿಸಿಕೊಳ್ಳಬೇಕು. ಆಗ ಮಾತ್ರ ಕಲಾವಿದ ಆಗುತ್ತಾನೆ ಎಂದರು.

ಶಿಬಿರದಲ್ಲಿ ಚಾಮರಾಜೇಂದ್ರ ದೃಶ್ಯಕಲಾ ಅಕಾಡೆಮಿಯು (ಕಾವಾ) ೨೨ ವಿದ್ಯಾರ್ಥಿಗಳು ಪಾಲ್ಗೊಂಡರು.
ರಂಗಾಯಣ ಉಪನಿರ್ದೇಶಕರಾದ ನಿರ್ಮಲಾ ಮಠಪತಿ, ಕಾವಾ ಆಡಳಿತಾಧಿಕಾರಿ ಎಚ್.ಎಂ.ಜಯಶಂಕರ್, ‘ಬಹುರೂಪಿ’ ಸಂಚಾಲಕ ಜಗದೀಶ್ ಮನವಾರ್ತೆ ಕಾರ್ಯಕ್ರಮದಲ್ಲಿ ಹಾಜರಿದ್ದರು.


ಎಂ.ಎಫ್.ಹುಸೇನ್ ಅವರು ದೇವತೆಗಳ ಬೆತ್ತಲೆ ಚಿತ್ರ ಬಿಡಿಸಿ ಅಭಿವ್ಯಕ್ತಿಯೆಂದರು. ಅದನ್ನು ವಿರೋಧಿಸದೇ ಭಾರತೀಯರು ಸಹಿಸಿಕೊಂಡರು. ಆದರೆ, ನಿರ್ದಿಷ್ಟ ಧರ್ಮದ ಮೇಲೆ ಅದೇ  ಮಾದರಿಯಲ್ಲಿ ಬರೆದಿದ್ದರೆ ತಲೆ ಉರುಳುತ್ತದೆ. ನಮ್ಮ ಭಾವ ನಾಶವಾಗಿ ಹೋಗುವ ಭಯ ಮನೆ ಮಾಡಿದ್ದು, ಅದು ಕುಕ್ಕರ್ ಬಾಂಬ್ ಮೂಲಕ ಅಡುಗೆ ಮನೆಯನ್ನೂ ಪ್ರವೇಶಿಸಿದೆ.

ಅಡ್ಡಂಡ ಸಿ.ಕಾರ್ಯಪ್ಪ, ನಿರ್ದೇಶಕರು, ರಂಗಾಯಣ.

andolanait

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

9 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

12 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

13 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

13 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

13 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

13 hours ago