ಮೈಸೂರು: ಯಾವುದೇ ಕಲಾವಿದ ಅಥವಾ ವಿಚಾರವಾದಿಗೆ ಅಭಿವ್ಯಕ್ತಿಸುವ ಸ್ವಾತಂತ್ರ್ಯವನ್ನು ದೇಶವು ನೀಡಿದೆ. ಆದರೆ, ನಮ್ಮ ನಂಬಿಕೆ, ಚಿಂತನೆಗಳ ಅಭಿವ್ಯಕ್ತಿಯು ಇನ್ನೊಬ್ಬರ ಹಕ್ಕು, ನಂಬಿಕೆಗೆ ಘಾಸಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.
ನಗರದ ರಂಗಾಯಣದ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ರಂಗಾಯಣದಲ್ಲಿ ‘ಬಹುರೂಪಿ ರಾಷ್ಟ್ರೀಯ ರಂಗೋತ್ಸವ’ ಹಿನ್ನೆಲೆಯಲ್ಲಿ ಶನಿವಾರ ‘ಚಿತ್ರಕಲಾ ಶಿಬಿರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸುವ ಮುನ್ನ ಎಚ್ಚರಿಕೆ ಇರಬೇಕು. ಇನ್ನೊಬ್ಬರಿಗೆ ನೋವಾಗದಂತೆ ಅದನ್ನು ವ್ಯಕ್ತಪಡಿಸುವ ಸೂಕ್ಷ್ಮತೆ ಇರಬೇಕು. ಸಿಟ್ಟು ಬಂದಾಗ ಭಾವನೆಗಳನ್ನು ಕೆರಳಿಸುವಾಗೇ ವರ್ತಿಸಬಾರದು. ಬಹುತ್ವ ಹಾಗೂ ಉದಾರತತೆಯನ್ನು ಗೌರವಿಸುವುದು ಈ ನೆಲದ ಗುಣ ಎಂದರು. ಯುವ ಕಲಾವಿದರಿಗೆ ಮಾಡುವ ಕೆಲಸದಲ್ಲಿ ಶ್ರದ್ಧೆ ಇರಬೇಕು. ಹೊಸತನಕ್ಕೆ ತೆರೆದುಕೊಂಡಾಗ ಸವಾಲು ಇದ್ದೇ ಇರುತ್ತದೆ. ಸೋಲನ್ನು ಕಾಯುವವರು ನಮ್ಮೆದುರು ಇದ್ದೇ ಇರುತ್ತಾರೆ. ಅವೆಲ್ಲವನ್ನು ಮೀರಿ ನಡೆಯಬೇಕು. ರಂಗಾಯಣ ಕ್ರಿಯಾಶೀಲ ವೇದಿಕೆಯಾಗಿದ್ದು, ಅದನ್ನು ಯುವ ಉತ್ಸಾಹಿಗಳು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರಂಗ ಕಲೆಯಲ್ಲಿ ತೊಡಗಿಸಿಕೊಂಡವರು ಸಮಾಜದಲ್ಲಿ ದೊಡ್ಡ ವ್ಯಕ್ತಿಗಳಾಗುತ್ತಾರೆ. ರಂಗಭೂಮಿಗೆ ಎಲ್ಲ ಕಡೆಯಿಂದಲೂ ಜ್ಞಾನ-ವಿಚಾರಗಳು ಹರಿದು ಬರುತ್ತವೆ. ಬಹುರೂಪಿ ರಂಗೋತ್ಸವಕ್ಕೆ ದೇಶದ ವಿವಿಧೆಡೆಗಳಿಂದ ಕಲಾವಿದರು, ತಂಡಗಳು ಬರುತ್ತಿದ್ದಾರೆ. ಎಲ್ಲರೊಂದಿಗೆ ಬೆರೆಯುವ ಅವಕಾಶ ಸಿಗುತ್ತಿದೆ ಎಂದರು.
ರಂಗಾಯಣ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಮಾತನಾಡಿ, ಎಲ್ಲವನ್ನು ಗೌರವಿಸುವುದೇ ಸವಾನತೆ. ಭಾರತೀಯತೆಯೇ ನಮ್ಮ ತಾಯಿ. ಅಭಿವ್ಯಕ್ತಿ ಸ್ವಾತಂತ್ರ್ಯದ ವ್ಯಾಖ್ಯಾನ ಮಾಡುವವರು ಕೆಲವೊಂದನ್ನು ಮಾತ್ರ ಹೇಳಿ, ಇನ್ನೊಂದಷ್ಟನ್ನು ಹೇಳಬಾರದು ಎನ್ನುತ್ತಾರೆ. ಅದು ಕೂಡ ಅಭಿವ್ಯಕ್ತಿಗೆ ಧಕ್ಕೆ ಅಲ್ಲವೇ. ಅಭಿವ್ಯಕ್ತಿಯನ್ನು ಸಹಿಸದೇ ವಿರೋಧ ಮಾಡುವವರಿಗೆ ಸ್ವೀಕರಿಸುವ ಮನೋಭಾವವೇ ಇಲ್ಲ. ನಾಟಕ ನಿಲ್ಲಿಸಬೇಕೆಂದು ತಡೆ ಹಾಕುವುದು, ನಮ್ಮ ಹಕ್ಕಿನ ಮೇಲಿನ ಹಲ್ಲೆ ಆಗುವುದಿಲ್ಲವೇ? ನಿರ್ದಿಷ್ಟ ಧರ್ಮದ ಬಗ್ಗೆ ಮಾತ್ರ ಪ್ರಶ್ನಿಸಬೇಡಿ ಎನ್ನುವ ಜಾತ್ಯತೀತರು ಇದ್ದಾರೆ. ಭಾರತ ಮಾತೆಗೆ ಗೌರವ ನೀಡದ ‘ತುಕ್ಡೇ-ತುಕ್ಡೇ ಗ್ಯಾಂಗ್’ ಈಗಲೂ ಇದೆ ಎಂದರು.
ಚಿತ್ರ ಕಲಾವಿದ ಎಲ್.ಶಿವಲಿಂಗಪ್ಪ ಮಾತನಾಡಿ, ಸರ್ವ ಜನಾಂಗವನ್ನು ಒಳಗೊಂಡರೆ ಅದು ಭಾರತೀಯತೆ ಆಗುತ್ತದೆ. ವೈವಿಧ್ಯತೆ, ನಂಬಿಕೆಗಳನ್ನು ಕಾಪಾಡಿಕೊಳ್ಳಬೇಕು. ಎಲ್ಲವನ್ನು ಗ್ರಹಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳಬೇಕು. ಮನಸ್ಸು ವಿಶಾಲಗೊಳಿಸಿಕೊಳ್ಳಬೇಕು. ಆಗ ಮಾತ್ರ ಕಲಾವಿದ ಆಗುತ್ತಾನೆ ಎಂದರು.
ಶಿಬಿರದಲ್ಲಿ ಚಾಮರಾಜೇಂದ್ರ ದೃಶ್ಯಕಲಾ ಅಕಾಡೆಮಿಯು (ಕಾವಾ) ೨೨ ವಿದ್ಯಾರ್ಥಿಗಳು ಪಾಲ್ಗೊಂಡರು.
ರಂಗಾಯಣ ಉಪನಿರ್ದೇಶಕರಾದ ನಿರ್ಮಲಾ ಮಠಪತಿ, ಕಾವಾ ಆಡಳಿತಾಧಿಕಾರಿ ಎಚ್.ಎಂ.ಜಯಶಂಕರ್, ‘ಬಹುರೂಪಿ’ ಸಂಚಾಲಕ ಜಗದೀಶ್ ಮನವಾರ್ತೆ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಎಂ.ಎಫ್.ಹುಸೇನ್ ಅವರು ದೇವತೆಗಳ ಬೆತ್ತಲೆ ಚಿತ್ರ ಬಿಡಿಸಿ ಅಭಿವ್ಯಕ್ತಿಯೆಂದರು. ಅದನ್ನು ವಿರೋಧಿಸದೇ ಭಾರತೀಯರು ಸಹಿಸಿಕೊಂಡರು. ಆದರೆ, ನಿರ್ದಿಷ್ಟ ಧರ್ಮದ ಮೇಲೆ ಅದೇ ಮಾದರಿಯಲ್ಲಿ ಬರೆದಿದ್ದರೆ ತಲೆ ಉರುಳುತ್ತದೆ. ನಮ್ಮ ಭಾವ ನಾಶವಾಗಿ ಹೋಗುವ ಭಯ ಮನೆ ಮಾಡಿದ್ದು, ಅದು ಕುಕ್ಕರ್ ಬಾಂಬ್ ಮೂಲಕ ಅಡುಗೆ ಮನೆಯನ್ನೂ ಪ್ರವೇಶಿಸಿದೆ.
ಅಡ್ಡಂಡ ಸಿ.ಕಾರ್ಯಪ್ಪ, ನಿರ್ದೇಶಕರು, ರಂಗಾಯಣ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…