ಜಿಲ್ಲೆಗಳು

ಬಹುರೂಪಿಗೆ ವಿಶೇಷ ಕಳೆ ತಂದ ಜನಪದ ಗಾಯನ

ಮಳವಳ್ಳಿ ಮಹದೇವಸ್ವಾಮಿ ಅವರ ಕಂಠ ಸಿರಿಗೆ ತಲೆದೂಗಿದ ಪ್ರೇಕ್ಷಕರು

ಮೈಸೂರು: ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ರಂಗಾಯಣದ ವನರಂಗದಲ್ಲಿ ಮಂಗಳವಾರ ಸಂಜೆ ನಡೆದ ಜನಪದೋತ್ಸವದಲ್ಲಿ ಖ್ಯಾತ ಗಾಯಕ ಡಾ.ಮಳವಳ್ಳಿ ಮಹಾದೇವಸ್ವಾಮಿ ಅವರು ಹರಿಸಿದ ಜನಪದ ಕಥನದ ಮೋಡಿ ಬಹುರೂಪಿಗೆ ಕಳೆ ತಂದಿತು.

ಮಳವಳ್ಳಿ ಮಹಾದೇವಸ್ವಾಮಿ ಅವರು ಕಂಚಿನ ಕಂಠದ ಮೂಲಕ ಮಂಟೇಸ್ವಾಮಿ ಕಾವ್ಯದ ಕಲ್ಯಾಣ ಪಟ್ಟಣದ ಸಾಲನ್ನು ಹಾಡುತ್ತಿದ್ದಂತೆ ಕಿಕ್ಕಿರಿದು ತುಂಬಿದ್ದ ಕಲಾರಸಿಕರು ತಲೆದೂಗಿದರು. ದಮ್ಮಡಿ, ಕರ್ಮಚಿ ಮತ್ತು ತಾಳದಲ್ಲಿ ಮಂಟೇಸ್ವಾಮಿ ಅವರು ಕಲ್ಯಾಣ ಪಟ್ಟಣದಲ್ಲಿ ಬಸವಣ್ಣ ಮತ್ತು ನೀಲಾಂಬಿಕೆಗೆ ದರ್ಶನ ನೀಡಿ ಕೂಡಲ ಸಂಗಮದಲ್ಲಿ ಐಕ್ಯವಾಗುವ ಹಿನ್ನೆಲೆ ಮತ್ತು ಮುಂದಿನ ಕಲಿಯ ಬಗ್ಗೆ ಎಚ್ಚರಿಸಿದ್ದ ಕಥೆಯನ್ನು ತಮ್ಮ ಕಂಚಿನ ಕಂಠದ ಮೂಲಕ ಪ್ರಸ್ತುತಪಡಿಸಿದರು.
ಕಲ್ಯಾಣದಲ್ಲಿ ಬಸವಣ್ಣನವರನ್ನು ಭೇಟಿ ಮಾಡಲು ಆಗಮಿಸುವ ಮಂಟೇಸ್ವಾಮಿ ಸೇವಕನಿಂದ ಅಪಮಾನಕ್ಕೆ ಒಳಗಾಗುತ್ತಾರೆ. ಕೋಪಗೊಂಡು ಶಿವಭಕ್ತ ಹರಳಯ್ಯನ ಮನೆ ಮುಂದೆ ಕೂರುವ ಮಂಟೇಸ್ವಾಮಿ ಅವರನ್ನು ಬಸವಣ್ಣ ಸಮಾಧಾನಪಡಿಸುವ ಪ್ರಸಂಗವನ್ನು ಮನಮುಟ್ಟುವಂತೆ ಹಾಡಿದರು.

ಕಲಿಗಾಲದ ಬಗ್ಗೆ ಮಂಟೇಸ್ವಾಮಿ ನುಡಿಯನ್ನು ಹಾಡುವಾಗ ಸಭಿಕರು ಹೌದೆಂದು ತಲೆಯಾಡಿಸಿದರು. ಒಂದು ಗಂಟೆಗಳ ಕಾಲ ಮಂಟೇಸ್ವಾಮಿ ಮಹತ್ವವನ್ನು ಕೇಳುಗರ ಎದೆಗೆ ಮುಟ್ಟಿಸಿದರು. ಮಂಗಳವಾರ ಮಳೆ ಬಿಡುವು ನೀಡಿದ್ದರಿಂದ ಜನರು ಕಿಕ್ಕಿರಿದು ನೆರೆದು ಗಾಯನ ಆಲಿಸಿದರು.
ದಮ್ಮಡಿಯಲ್ಲಿ ಮಹೇಶ್ ಮತ್ತು ಮಂಜು, ಕರ್ಮಚಿಯನ್ನು ಕೊಳತ್ತೂರು ನಂಜುಂಡಸ್ವಾಮಿ, ತಗ್ಗಳ್ಳಿ ಮಹಾದೇವ್, ತಾಳದಲ್ಲಿ ಮಹದೇವಸ್ವಾಮಿ ಅವರು ಸಹಕಾರ ನೀಡಿದರು.ಇದಕ್ಕೂ ಮುನ್ನ ದಕ್ಷಿಣ ಕನ್ನಡದ ಮಂಜುನಾಥ ಮತ್ತು ತಂಡ ಪ್ರಸ್ತುತಪಡಿಸಿದ ಜನಪದೋತ್ಸವದ ಕಂಗೀಲು ನೃತ್ಯ ಹೊಸ ರಂಗು ಮೂಡಿಸಿತು. ಕಂಗೀಲು ಪಾತ್ರಧಾರಿಗಳು ತೆಂಗಿನ ತಿಲಂಗ ಧರಿಸಿ ಕುಣಿುುಂತ್ತಿದ್ದುದ್ದು ನೋಡುಗರನ್ನು ಒಂದುಕ್ಷಣ ಅವಕ್ಕಾಗಿಸಿತು. ಕಂಗೀಲು ಒಂದು ಜಾನಪದ ಕುಣಿತವೂ ಹೌದು. ಆಚರಣೆುೂಂ ಹೌದು. ಈ ಜನಪದ ಕುಣಿತ ತುಳುನಾಡಿನ ಪ್ರಮುಖ ಪ್ರದರ್ಶನ ಕಲೆ ಆಗಿದ್ದು, ಸಾಂಸ್ಕೃತಿಕ ನಗರಿುಂ ರಂಗಾಸಕ್ತರು ಈ ಕಲೆುಂ ಸವಿ ಸವಿದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

23 mins ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

10 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

15 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

15 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

15 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

20 hours ago