ಮಳವಳ್ಳಿ ಮಹದೇವಸ್ವಾಮಿ ಅವರ ಕಂಠ ಸಿರಿಗೆ ತಲೆದೂಗಿದ ಪ್ರೇಕ್ಷಕರು
ಮೈಸೂರು: ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ಅಂಗವಾಗಿ ರಂಗಾಯಣದ ವನರಂಗದಲ್ಲಿ ಮಂಗಳವಾರ ಸಂಜೆ ನಡೆದ ಜನಪದೋತ್ಸವದಲ್ಲಿ ಖ್ಯಾತ ಗಾಯಕ ಡಾ.ಮಳವಳ್ಳಿ ಮಹಾದೇವಸ್ವಾಮಿ ಅವರು ಹರಿಸಿದ ಜನಪದ ಕಥನದ ಮೋಡಿ ಬಹುರೂಪಿಗೆ ಕಳೆ ತಂದಿತು.
ಮಳವಳ್ಳಿ ಮಹಾದೇವಸ್ವಾಮಿ ಅವರು ಕಂಚಿನ ಕಂಠದ ಮೂಲಕ ಮಂಟೇಸ್ವಾಮಿ ಕಾವ್ಯದ ಕಲ್ಯಾಣ ಪಟ್ಟಣದ ಸಾಲನ್ನು ಹಾಡುತ್ತಿದ್ದಂತೆ ಕಿಕ್ಕಿರಿದು ತುಂಬಿದ್ದ ಕಲಾರಸಿಕರು ತಲೆದೂಗಿದರು. ದಮ್ಮಡಿ, ಕರ್ಮಚಿ ಮತ್ತು ತಾಳದಲ್ಲಿ ಮಂಟೇಸ್ವಾಮಿ ಅವರು ಕಲ್ಯಾಣ ಪಟ್ಟಣದಲ್ಲಿ ಬಸವಣ್ಣ ಮತ್ತು ನೀಲಾಂಬಿಕೆಗೆ ದರ್ಶನ ನೀಡಿ ಕೂಡಲ ಸಂಗಮದಲ್ಲಿ ಐಕ್ಯವಾಗುವ ಹಿನ್ನೆಲೆ ಮತ್ತು ಮುಂದಿನ ಕಲಿಯ ಬಗ್ಗೆ ಎಚ್ಚರಿಸಿದ್ದ ಕಥೆಯನ್ನು ತಮ್ಮ ಕಂಚಿನ ಕಂಠದ ಮೂಲಕ ಪ್ರಸ್ತುತಪಡಿಸಿದರು.
ಕಲ್ಯಾಣದಲ್ಲಿ ಬಸವಣ್ಣನವರನ್ನು ಭೇಟಿ ಮಾಡಲು ಆಗಮಿಸುವ ಮಂಟೇಸ್ವಾಮಿ ಸೇವಕನಿಂದ ಅಪಮಾನಕ್ಕೆ ಒಳಗಾಗುತ್ತಾರೆ. ಕೋಪಗೊಂಡು ಶಿವಭಕ್ತ ಹರಳಯ್ಯನ ಮನೆ ಮುಂದೆ ಕೂರುವ ಮಂಟೇಸ್ವಾಮಿ ಅವರನ್ನು ಬಸವಣ್ಣ ಸಮಾಧಾನಪಡಿಸುವ ಪ್ರಸಂಗವನ್ನು ಮನಮುಟ್ಟುವಂತೆ ಹಾಡಿದರು.
ಕಲಿಗಾಲದ ಬಗ್ಗೆ ಮಂಟೇಸ್ವಾಮಿ ನುಡಿಯನ್ನು ಹಾಡುವಾಗ ಸಭಿಕರು ಹೌದೆಂದು ತಲೆಯಾಡಿಸಿದರು. ಒಂದು ಗಂಟೆಗಳ ಕಾಲ ಮಂಟೇಸ್ವಾಮಿ ಮಹತ್ವವನ್ನು ಕೇಳುಗರ ಎದೆಗೆ ಮುಟ್ಟಿಸಿದರು. ಮಂಗಳವಾರ ಮಳೆ ಬಿಡುವು ನೀಡಿದ್ದರಿಂದ ಜನರು ಕಿಕ್ಕಿರಿದು ನೆರೆದು ಗಾಯನ ಆಲಿಸಿದರು.
ದಮ್ಮಡಿಯಲ್ಲಿ ಮಹೇಶ್ ಮತ್ತು ಮಂಜು, ಕರ್ಮಚಿಯನ್ನು ಕೊಳತ್ತೂರು ನಂಜುಂಡಸ್ವಾಮಿ, ತಗ್ಗಳ್ಳಿ ಮಹಾದೇವ್, ತಾಳದಲ್ಲಿ ಮಹದೇವಸ್ವಾಮಿ ಅವರು ಸಹಕಾರ ನೀಡಿದರು.ಇದಕ್ಕೂ ಮುನ್ನ ದಕ್ಷಿಣ ಕನ್ನಡದ ಮಂಜುನಾಥ ಮತ್ತು ತಂಡ ಪ್ರಸ್ತುತಪಡಿಸಿದ ಜನಪದೋತ್ಸವದ ಕಂಗೀಲು ನೃತ್ಯ ಹೊಸ ರಂಗು ಮೂಡಿಸಿತು. ಕಂಗೀಲು ಪಾತ್ರಧಾರಿಗಳು ತೆಂಗಿನ ತಿಲಂಗ ಧರಿಸಿ ಕುಣಿುುಂತ್ತಿದ್ದುದ್ದು ನೋಡುಗರನ್ನು ಒಂದುಕ್ಷಣ ಅವಕ್ಕಾಗಿಸಿತು. ಕಂಗೀಲು ಒಂದು ಜಾನಪದ ಕುಣಿತವೂ ಹೌದು. ಆಚರಣೆುೂಂ ಹೌದು. ಈ ಜನಪದ ಕುಣಿತ ತುಳುನಾಡಿನ ಪ್ರಮುಖ ಪ್ರದರ್ಶನ ಕಲೆ ಆಗಿದ್ದು, ಸಾಂಸ್ಕೃತಿಕ ನಗರಿುಂ ರಂಗಾಸಕ್ತರು ಈ ಕಲೆುಂ ಸವಿ ಸವಿದರು.
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…