ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಿ.ನರಸೀಪುರ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ಆದಿ ದ್ರಾವಿಡ ಸಮುದಾಯದ ಸ್ಥಳೀಯ ಯುವ ಮುಖಂಡರಾದ ಬಾಲರಾಜ್ ಅವರಿಗೆ ಟಿಕೆಟ್ ನೀಡಬೇಕೆಂದು ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ಆದಿದ್ರಾವಿಡ (ಪೌರಕಾರ್ಮಿಕರ) ಯುವಕರ ಅಭಿವೃದ್ಧಿ ಮಹಾಸಂಘ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಸಿ.ಎಂ.ರಾಮಯ್ಯ, ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳಾದರೂ ಅದಿದ್ರಾವಿಡ ಮಾದಿಗ ಸಮುದಾಯ ವಿಧಾನಸೌಧದ ಮೆಟ್ಟಿಲು ಏರಿಲ್ಲ. ನಮ್ಮ ಹಕ್ಕುಗಳಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇವೆ. ನಮ್ಮ ಸಮುದಾಯದವರಿಗೆ ಎಂಎಲ್ಎ ಟಿಕೆಟ್ ಅನ್ನು ಇದುವರೆಗೂ ಯಾವ ಪಕ್ಷವೂ ನೀಡಿಲ್ಲ. ಪರಿಶಿಷ್ಟ ಜಾತಿಯಲ್ಲಿ ಎಡ -ಬಲವೆಂದು ವಿಂಗಡಣೆ ಆಗಿರುವುದರಿಂದಾಗಿ ನಮ್ಮ ಸಮುದಾಯವರಿಗೆ ಯಾರೂ ಟಿಕೆಟ್ ನೀಡಿಲ್ಲ. ಒಂದು ವೇಳೆ ಬಾಲರಾಜು ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರರಾಗಿ ಅವರು ಸ್ಪರ್ಧಿಸಲಿದ್ದಾರೆ ಎಂದು ಎಚ್ಚರಿಸಿದರು.
ಸಮುದಾಯದ ಮುಖಂಡರಾದ ಕೆ.ನಂಜಪ್ಪ ಬಸವನಗುಡಿ, ಮಾಚಯ್ಯ, ಜಿ.ಶ್ರೀನಿವಾಸ್ ಗಂಗೋತ್ರಿ, ಎಂ. ರಂಗಸ್ವಾಮಿ, ಜಿ.ಮುರುಗೇಶ್, ರಾಜಣ್ಣ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…