ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಿ.ನರಸೀಪುರ ಮೀಸಲು ಕ್ಷೇತ್ರದಲ್ಲಿ ಸ್ಪರ್ಧಿಸಲು ಆದಿ ದ್ರಾವಿಡ ಸಮುದಾಯದ ಸ್ಥಳೀಯ ಯುವ ಮುಖಂಡರಾದ ಬಾಲರಾಜ್ ಅವರಿಗೆ ಟಿಕೆಟ್ ನೀಡಬೇಕೆಂದು ರಾಜ್ಯ ಡಾ.ಬಿ.ಆರ್.ಅಂಬೇಡ್ಕರ್ ಆದಿದ್ರಾವಿಡ (ಪೌರಕಾರ್ಮಿಕರ) ಯುವಕರ ಅಭಿವೃದ್ಧಿ ಮಹಾಸಂಘ ಆಗ್ರಹಿಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಸಿ.ಎಂ.ರಾಮಯ್ಯ, ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವು ವರ್ಷಗಳಾದರೂ ಅದಿದ್ರಾವಿಡ ಮಾದಿಗ ಸಮುದಾಯ ವಿಧಾನಸೌಧದ ಮೆಟ್ಟಿಲು ಏರಿಲ್ಲ. ನಮ್ಮ ಹಕ್ಕುಗಳಿಗಾಗಿ ಸಾಕಷ್ಟು ಹೋರಾಟ ಮಾಡಿದ್ದೇವೆ. ನಮ್ಮ ಸಮುದಾಯದವರಿಗೆ ಎಂಎಲ್ಎ ಟಿಕೆಟ್ ಅನ್ನು ಇದುವರೆಗೂ ಯಾವ ಪಕ್ಷವೂ ನೀಡಿಲ್ಲ. ಪರಿಶಿಷ್ಟ ಜಾತಿಯಲ್ಲಿ ಎಡ -ಬಲವೆಂದು ವಿಂಗಡಣೆ ಆಗಿರುವುದರಿಂದಾಗಿ ನಮ್ಮ ಸಮುದಾಯವರಿಗೆ ಯಾರೂ ಟಿಕೆಟ್ ನೀಡಿಲ್ಲ. ಒಂದು ವೇಳೆ ಬಾಲರಾಜು ಅವರಿಗೆ ಟಿಕೆಟ್ ನೀಡದಿದ್ದಲ್ಲಿ ಪಕ್ಷೇತರರಾಗಿ ಅವರು ಸ್ಪರ್ಧಿಸಲಿದ್ದಾರೆ ಎಂದು ಎಚ್ಚರಿಸಿದರು.
ಸಮುದಾಯದ ಮುಖಂಡರಾದ ಕೆ.ನಂಜಪ್ಪ ಬಸವನಗುಡಿ, ಮಾಚಯ್ಯ, ಜಿ.ಶ್ರೀನಿವಾಸ್ ಗಂಗೋತ್ರಿ, ಎಂ. ರಂಗಸ್ವಾಮಿ, ಜಿ.ಮುರುಗೇಶ್, ರಾಜಣ್ಣ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್…
ಮೈಸೂರು : ನಗರದ ಸಿದ್ದಾರ್ಥ ನಗರದಲ್ಲಿ ಚಿರತೆಯೊಂದು ಮನೆಯೊಳಗೆ ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಸುರೇಶ್ ಎಂಬುವವರ ಮನೆಯಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ…
ಇಸ್ಲಾಮಾಬಾದ್ : ಅಮೆರಿಕ ಮತ್ತು ಇರಾನ್ ನಡುವಿನ ಎರಡನೇ ಸುತ್ತಿನ ಶಾಂತಿ ಮಾತುಕತೆ ಪಾಕಿಸ್ತಾನದಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು…
ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ…
ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಶ್ರೀರಂಗಪಟ್ಟಣ ವಿಧಾನಸಭಾ…