ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೇರಳ ಹೆದ್ದಾರಿಯಲ್ಲಿ ಮಂಗಳವಾರ ರಾತ್ರಿ ಲಾರಿ ಡಿಕ್ಕಿ ಹೊಡೆದು ಹೆಣ್ಣಾನೆ ಮೃತಪಟ್ಟಿರುವ ಪ್ರಕರಣ ಸಂಬಂಧ ಲಾರಿ ಚಾಲಕ ಹಾಗೂ ಕ್ಲೀನರ್ ಅನ್ನು ಬಂಧಿಸಲಾಗಿದೆ.
ಬಂಧಿತ ಚಾಲಕನ ಹೆಸರು ಅಯ್ಯಸ್ವಾಮಿ ಹಾಗೂ ಕ್ಲೀನರ್ ಆನಂದ್ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8.30ಕ್ಕೆ ಮದ್ದೂರು ವಲಯದಲ್ಲಿ ಘಟನೆ ನಡೆದಿದೆ. ಕೇರಳದಿಂದ ಗುಂಡ್ಲುಪೇಟೆಯತ್ತ ಬರುತ್ತಿದ್ದ ತಮಿಳುನಾಡು ನೋಂದಣಿ ಲಾರಿಯು ಹೆಣ್ಣಾನೆಗೆ ಡಿಕ್ಕಿ ಹೊಡೆದಿದೆ. ಆನೆಗೆ 25ರಿಂದ 30 ವರ್ಷ ವಯಸ್ಸಾಗಿದೆ ಎಂದು ಅಂದಾಜಿಸಲಾಗಿದೆ.
ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಈ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧವಿದೆ. ಕೊಯಮತ್ತೂರು ಮೂಲದ ಲಾರಿಯು ರಾತ್ರಿ 8 ಗಂಟೆಗೆ ಮೂಲೆಹೊಳೆ ಚೆಕ್ ಪೋಸ್ಟ್ ದಾಟಿದೆ. ಚಾಲಕ ವೇಗವಾಗಿ ವಾಹನ ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…