ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯದ ನಿರ್ಬಂಧಿತ ಪ್ರದೇಶದ ಸೂಕ್ಷ್ಮ ಅರಣ್ಯ ಪರಿಸರ ವ್ಯಾಪ್ತಿಗೆ ಒಳಪಡುವ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನಲ್ಲಿರುವ ಹಿರೀಕೆರೆಯಲ್ಲಿ ಯುವಕರು ಕುಡಿದು ಮೋಜು-ಮಸ್ತಿಯಲ್ಲಿ ತೊಡಗಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಹಿರೀಕೆರೆಯು ಅಭಯಾರಣ್ಯ ವ್ಯಾಪ್ತಿಗೆ ಒಳಪಡುವ ಕಾರಣ ಈ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರಾಕರಿಸಲಾಗಿದೆ. ಆದರೆ ಕೆರೆ ವೀಕ್ಷಣೆ ಮಾಡುವ ನೆಪದಲ್ಲಿ ಕೋಡಿ ಸ್ಥಳದಲ್ಲಿ ಕುಳಿತು ಮದ್ಯ ಸೇವಿಸಿದ್ದಾರೆ.
ನಿರ್ಬಂಧಿತ ಪ್ರದೇಶ: ಗೋಪಾಲಸ್ವಾಮಿ ಬೆಟ್ಟ ವಲಯ ವ್ಯಾಪ್ತಿಗೆ ಬರುವ ಹಿರೀಕೆರೆ ಸೂಕ್ಷ್ಮ ಪರಿಸರ ಪ್ರದೇಶವಾಗಿರುವ ಹಿನ್ನೆಲೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಲಾಗಿದೆ. ಸ್ಥಳೀಯರು ಮತ್ತು ಕೆರೆ ವೀಕ್ಷಣೆಗೆ ಇತರೆಡೆಯಿಂದ ಬರುವ ಪ್ರವಾಸಿಗರು ಕೆರೆಗೆ ನೋಡಲು ತೆರಳಿದ ವೇಳೆ ಅರಣ್ಯ ಸಿಬ್ಬಂದಿ ಒಳಗೆ ಬಿಡುವುದಿಲ್ಲ. ಹೀಗಿದ್ದರೂ ಮೋಜು ಮಸ್ತಿ ಮಾಡಲು ಅನುಮತಿ ನೀಡಿದವರು ಯಾರು? ಎಂಬ ಪ್ರಶ್ನೆ ಎದ್ದಿದೆ.
ಬಂಡೀಪುರ ಅಭಯಾರಣ್ಯದ ವಾಹನಗಳನ್ನು ಹೊರತುಪಡಿಸಿದ ಹಿರೀಕೆರೆ ಸೂಕ್ಷ್ಮ ಪರಿಸರ ವಲಯದಲ್ಲಿ ಖಾಸಗಿ ವ್ಯಕ್ತಿಗಳ ಬೈಕ್, ಕಾರು ಸೇರಿದಂತೆ ಇನ್ನಿತರ ವಾಹನಗಳು ತೆರಳಲು ಅವಕಾಶವಿಲ್ಲ. ಆದರೆ ಅಧಿಕಾರಿಗಳ ಕೃಪಕಟಾಕ್ಷದಿಂದ ಕೆಲವು ಮಂದಿ ತಮ್ಮ ವಾಹನದ ಸಮೇತ ಬೀಡುಬಿಟ್ಟು ಮಸ್ತಿಯಲ್ಲಿ ತೊಡಗುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅರಣ್ಯಾಧಿಕಾರಿಗಳ ಈ ನಿರ್ಲಕ್ಷ್ಯವನ್ನು ಕಂಡು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…