ಜಿಲ್ಲೆಗಳು

ಬನ್ನಹಳ್ಳಿ ಹುಂಡಿ ಸರ್ಕಾರಿ ಶಾಲೆ ಆವರಣದಲ್ಲಿ ಮಿನಿ ಕೆರೆ

ಶಾಲೆಯಲ್ಲಿ ಓದುತ್ತಿರುವ 133 ಮಕ್ಕಳಿಗೆ ಸಮಸ್ಯೆ; ಮಳೆ ನೀರು ಹರಿದುಹೋಗಲು ಸಮರ್ಪಕ ವ್ಯವಸ್ಥೆ ಮಾಡಲು ಆಗ್ರಹ

ಎಂ.ನಾರಾಯಣ

ತಿ.ನರಸೀಪುರ: ತಾಲ್ಲೂಕಿನ ಬನ್ನಹಳ್ಳಿ ಹುಂಡಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಳೆ ನೀರು ಕೆರೆಯಂತೆ ನಿಂತಿರುವುದರಿಂದ ಶಾಲಾ ಮಕ್ಕಳಿಗೆ ತೀವ್ರ ತೊಂದರೆ ಎದುರಾಗಿದೆ.

ತಾಲ್ಲೂಕಿನಿಂದ ಸುಮಾರು 4 ಕಿ.ಮೀ.ಹೊರಗಿರುವ ನಂಜನಗೂಡು ರಸ್ತೆಯಲ್ಲಿ ನಿರ್ಮಾಣವಾಗಿರುವ ಶಾಲೆಯಲ್ಲಿ 9 ಮತ್ತು 10 ನೇ ತರಗತಿಯ 133 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, 7 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ತಾಲ್ಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಶಾಲಾ ಆವರಣದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಕೆರೆಯಂತೆ ಶೇಖರಣೆಯಾಗಿ ಸಮಸ್ಯೆ ಉಂಟಾಗಿದೆ.


ಶಾಲೆಯು ರಸ್ತೆ ಮಟ್ಟಕ್ಕಿಂತ ಕೆಳ ಹಂತದಲ್ಲಿ ನಿರ್ಮಾಣವಾಗಿರುವುದರಿಂದ ಸಮಸ್ಯೆ ಎದುರಾಗಿದೆ. ಶಾಲೆಯು ಅನೇಕ ವರ್ಷಗಳ ಹಿಂದೆೆಯೇ ನಿರ್ಮಾಣವಾಗಿದ್ದರೂ, ಕೆಲ ವರ್ಷಗಳ ಹಿಂದೆ ರಸ್ತೆಯನ್ನು ಎತ್ತರಿಸಿ ಅಭಿವೃದ್ಧಿಪಡಿಸಿದ ಹಿನ್ನೆಲೆಯಲ್ಲಿ ಶಾಲೆ ಮತ್ತಷ್ಟು ಆಳಕ್ಕೆ ಇಳಿದಿದೆ. ಬಿದ್ದ ಮಳೆ ನೀರು ಹೋಗಲು ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಮಾಡದ ಹಿನ್ನೆಲೆಯಲ್ಲಿ ಮಳೆಯಿಂದ ಬಿದ್ದ ನೀರೆಲ್ಲಾ ಇಳಿಜಾರಿನಲ್ಲಿ ಇಳಿದು ಶಾಲಾ ಆವರಣದಲ್ಲಿ ಶೇಖರಣೆಯಾಗುತ್ತಿದೆ.
ಈ ಸಮಸ್ಯೆ ಹೊಸದೇನಲ್ಲ. ಕಳೆದ ಹಲವಾರು ವರ್ಷಗಳಿಂದಲೂ ಇದೇ ತೊಂದರೆ ಎದುರಾಗುತ್ತಿದ್ದರೂ ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸುವ ಗೋಜಿಗೆ ಹೋಗಿಲ್ಲದಿರುವುದು ಮಕ್ಕಳ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಾಲೆಯ ಮುಂಭಾಗದ ಆವರಣದಲ್ಲಿ 15 ಅಡಿ ಆಳದ ಜಾಗವೊಂದಿದ್ದು, ಮಳೆ ಬಿದ್ದ ವೇಳೆ ಆಳದಲ್ಲಿ ನೀರು ತುಂಬಿ ಹೆಚ್ಚುವರಿ ನೀರು ಶಾಲೆಯ ಮುಂಭಾಗದಲ್ಲಿ ಬಂದು ನಿಲ್ಲುತ್ತದೆ.ಹಳ್ಳದಿಂದ ನೀರು ಹೋಗಲು ಚರಂಡಿ ಇಲ್ಲದ ಕಾರಣ ತುಂಬಿದ ನೀರು ರೈತರ ಜಮೀನಿನ ಮೇಲೆ ಹರಿದು ಹೋಗುವುದರಿಂದ ರೈತರು ಇದಕ್ಕೆ ಅವಕಾಶ ನೀಡುತ್ತಿಲ್ಲ ಎಂಬುದು ಮತ್ತೊಂದು ಸಮಸ್ಯೆಯಾಗಿ ಪರಿಣಮಿಸಿದೆ.
ಶಾಲೆಯ ಆವರಣದಲ್ಲಿ ನೀರು ಕೆರೆಯಂತೆ ನಿಂತಿರುವುದರಿಂದ ಶಾಲಾ ಮಕ್ಕಳು ಓಡಾಡುವ ವೇಳೆ ಯಾವುದಾದರೂ ಅನಾಹುತ ಸಂಭವಿಸಬಹುದೆನ್ನುವ ಆತಂಕ ಪೋಷಕರು ಮತ್ತು ಶಾಲೆಯ ಶಿಕ್ಷಕರದ್ದಾಗಿದೆ. ಶಾಲೆಯ ಆಡಳಿತ ಮಂಡಳಿಯು ಸಮಸ್ಯೆ ಸರಿಪಡಿಸುವಂತೆ ಸಂಬಂಧಿಸಿದ ಇಲಾಖೆಗೆ ಮನವಿ ಮಾಡಿದ್ದರೂ ಪ್ರೋಂಜನವಾಗಿಲ್ಲ. ಶಾಲಾ ಆವರಣದಲ್ಲಿ ನಿಂತಿರುವ ನೀರು ಅಲ್ಲಿಂದ ಸುಲಲಿತವಾಗಿ ಹೊರಹೋಗಲು ಅನುಸರಿಸಬೇಕಾದ ಕ್ರಮದ ಬಗ್ಗೆ ಗಮನ ಹರಿಸಬೇಕಾದ ಅವಶ್ಯಕತೆ ಇದೆ ಅಥವಾ ನೀರು ನಿಲ್ಲುತ್ತಿರುವ ತಗ್ಗು ಪ್ರದೇಶಕ್ಕೆ ಮಣ್ಣು ತುಂಬಿ ಸ್ಥಳವನ್ನು ಎತ್ತರಿಸಬೇಕಾಗಿದೆ. ಇವೆರಡರ ಹೊರತು ಸಮಸ್ಯೆ ಬಗೆಹರಿಸಲು ಯಾವುದೇ ಅನ್ಯ ದಾರಿ ಇಲ್ಲದಂತಾಗಿದೆ.

ಕೊಠಡಿಗಳ ಸ್ಥಳಾಂತರ: ಮಳೆಯ ನೀರು ಶಾಲೆಯ ಕೊಠಡಿಯ ಮುಂಭಾಗದಲ್ಲೇ ಶೇಖರಣೆಯಾಗಿ ಕೆರೆಯಂತಾಗಿರುವುದನ್ನು ಗಮನಿಸಿದ ಬಿಇಓ ಮರಿಸ್ವಾಮಿ,ಮಳೆ ನೀರು ನಿಂತಿರುವ ಸ್ಥಳದಲ್ಲಿದ್ದ ಕೊಠಡಿಗಳಿಂದ ವಿದ್ಯಾರ್ಥಿಗಳನ್ನು ಬೇರೆ ಕೊಠಡಿಗೆ ಸ್ಥಳಾಂತರ ಮಾಡುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಬೇರೆ ಕೊಠಡಿಗೆ ಸ್ಥಲಾಂತರಿಸಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯ ಮಂಟೇಸ್ವಾಮಿ ಪತ್ರಿಕೆಗೆ ಮಾಹಿತಿ ನೀಡಿದರು.

ಇಓ, ಪಿಡಿಓ ಭೇಟಿ; ಭರವಸೆ
ಸಮಸ್ಯೆ ಬಗೆಹರಿಸುವ ಶಾಲೆಗೆ ಭೇಟಿ ನೀಡಿದ್ದ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕೃಷ್ಣ, ಕರೋಹಟ್ಟಿ ಗ್ರಾ.ಪಂ. ಪಿಡಿಓ ಲಿಂಗರಾಜು ಅವರಿಗೆ ನೀರನ್ನು ಹೊರಹಾಕಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.ಜಿ.ಪಂ.ಯಿಂದ ನೀರು ನಿಲ್ಲುವ ಸ್ಥಳಕ್ಕೆ ಮಣ್ಣು ತುಂಬಿಸಿ ಸಮತಟ್ಟು ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

andolanait

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

2 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

2 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

3 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

4 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

4 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

12 hours ago