ಜಿಲ್ಲೆಗಳು

ನಾಡಹಬ್ಬ ಯಶಸ್ಸುಗೊಳಿಸಿದ್ದಕ್ಕೆ ಜಿಲ್ಲಾಡಳಿತ, ಜನಪ್ರತಿನಿಧಿಗಳು, ಉಪ ಸಮಿತಿ ಸದಸ್ಯರಿಗೆ ಔತಣಕೂಟ

ಮೈಸೂರು: ಮೈಸೂರಿನ ಮಹಾಜನತೆ, ಜಿಲ್ಲಾಡಳಿತ, ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳ ಸಹಕಾರದಿಂದ ಬಹಳ ಯಶಸ್ವಿಯಾಗಿ ದಸರಾ ನಡೆಸಿದ್ದೇವೆ. ೪೭ ಸ್ತಬ್ಧಚಿತ್ರ, ೬೬ ಕಲಾತಂಡಗಳು ಪಾಲ್ಗೊಂಡು ೨ ಗಂಟೆ ಮೆರವಣಿಗೆ ಸಾಗಿದೆ. ನಾಡಹಬ್ಬದಲ್ಲಿ ಅಳಿಲು ಸೇವೆ ಸಲ್ಲಿಸಲು ಅವಕಾಶ ನೀಡಿದ ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ, ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಭದ್ರತೆಗೆ ೬ ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಯಾವುದೇ ಲೋಪವಾಗದಂತೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಪ್ರದೀಪ್ ಗುಂಟಿ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕೋಪ ಮಾಡಿಕೊಳ್ಳದೇ, ಅಸಮಾಧಾನ ವ್ಯಕ್ತಪಡಿಸಿದೇ ಸಹಕಾರ ನೀಡಿದ್ದಾರೆ. ಎಸ್‌ಪಿ ಆರ್.ಚೇತನ್ ಯುವ ಸಂಭ್ರಮ, ಯುವ ದಸರಾ ಯಶಸ್ವಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಬಾರಿ ಕಟ್ಟುವುದು ತಡವಾಗಿದ್ದರಿಂದ ಪುಷ್ಪಾರ್ಚನೆ ಸಮಯ ಮುಂದಕ್ಕೆ ಹೋಯಿತು. ಇದರಿಂದ ಯಾವುದೇ ಲೋಪವಾಗಿಲ್ಲ. ಪುರೋಹಿತರು ೬ ಗಂಟೆಯವರೆಗೆ ಪುಷ್ಪಾರ್ಚನೆ ಮಾಡಬಹುದು ಎಂದು ಹೇಳಿದ್ದರು. ಅಂಬಾರಿ ಕಟ್ಟುವ ನಟ್ಟು ಬೋಲ್ಟು ಸರಿಯಾಗಿ ಇರಲಿಲ್ಲ. ಹಾಗಾಗಿ ತಡವಾಯಿತು ಎಂದು ಸಮರ್ಥಿಸಿಕೊಂಡರು.

ಕ್ಷಮೆ ಕೇಳಿದ ಸಚಿವ: ಜಂಬೂಸವಾರಿ ಮತ್ತು ಪಂಜಿನ ಕವಾಯತು ವೀಕ್ಷಿಸಲು ನಿರೀಕ್ಷೆಗೂ ಮೀರಿ ಜನರು ಬಂದಿದ್ದಾರೆ. ಲಕ್ಷಾಂತರ ಜನರು ಪಾಲ್ಗೊಂಡ ವೇಳೆ ಸಣ್ಣಪುಟ್ಟ ತಪ್ಪುಗಳಾಗುತ್ತವೆ. ಜನ ಸಾಮಾನ್ಯರಿಗೆ ಅನಾನುಕೂಲವಾಗಿದ್ದರೆ ಕ್ಷಮೆ ಕೋರುತ್ತೇನೆ. ದಸರಾ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಸಣ್ಣಪುಟ್ಟ ಲೋಪಗಳನ್ನು ದೊಡ್ಡದು ಮಾಡಿ ಕಳಂಕ ಅಂಟಿಸುವುದು ಬೇಡ ಎಂದು ಮನವಿ ಮಾಡಿದರು.

ಶಾಸಕ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮಹಾಪೌರ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್‌ಪಿ ಆರ್.ಚೇತನ್, ಡಿಸಿಪಿ ಪ್ರದೀಪ್ ಗುಂಟಿ, ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಎಡಿಸಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಮುಡಾ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್, ಕಾರ್ಯದರ್ಶಿ ಎನ್.ಸಿ.ವೆಂಕಟರಾಜು, ನಿಗಮಮಂಡಳಿ ಅಧ್ಯಕ್ಷರಾದ ಕೋಟೆ ಎಂ.ಶಿವಣ್ಣ, ಎಸ್.ಮಹದೇವಯ್ಯ, ಮಿರ್ಲೆ ಶ್ರೀನಿವಾಸಗೌಡ, ಬಿಜೆಪಿ ನಗರ ಅಧ್ಯಕ್ಷ ಟಿ.ಎಸ್.ಶ್ರೀವತ್ಸ, ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಮುಂತಾದವರು ಹಾಜರಿದ್ದರು.

ಯಶ್ವಂತಪುರದವರು ದಸರಾ ವೀಕ್ಷಿಸಬಾರದೇ?: ಎಸ್‌ಟಿಎಸ್

ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಸ್ ಹಂಚಿಕೆಯಲ್ಲಿ ಯಶವಂತಪುರ ಕ್ಷೇತ್ರದವರಿಗೆ ಆದ್ಯತೆ ನೀಡಲಾಗಿತ್ತೇ ಎಂಬ ಪತ್ರಕರ್ತರ ಪ್ರಶ್ನೆಗೆ ಗರಂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಯಶ್ವಂತಪುರದವರು ದಸರಾ ನೋಡಬಾರದೇ ಎಂದು ಪ್ರಶ್ನಿಸಿದರಲ್ಲದೆ, ಪಾಸ್ ಮಾಹಿತಿ ಬೇಕಾದರೆ ಆರ್‌ಟಿಐಗೆ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಿರಿ ಎಂದು ಖಾರವಾಗಿ ಹೇಳಿದರು.

andolana

Recent Posts

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

10 mins ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

1 hour ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

2 hours ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

2 hours ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

2 hours ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

2 hours ago