ಜಿಲ್ಲೆಗಳು

ನಾಡಹಬ್ಬ ಯಶಸ್ಸುಗೊಳಿಸಿದ್ದಕ್ಕೆ ಜಿಲ್ಲಾಡಳಿತ, ಜನಪ್ರತಿನಿಧಿಗಳು, ಉಪ ಸಮಿತಿ ಸದಸ್ಯರಿಗೆ ಔತಣಕೂಟ

ಮೈಸೂರು: ಮೈಸೂರಿನ ಮಹಾಜನತೆ, ಜಿಲ್ಲಾಡಳಿತ, ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳ ಸಹಕಾರದಿಂದ ಬಹಳ ಯಶಸ್ವಿಯಾಗಿ ದಸರಾ ನಡೆಸಿದ್ದೇವೆ. ೪೭ ಸ್ತಬ್ಧಚಿತ್ರ, ೬೬ ಕಲಾತಂಡಗಳು ಪಾಲ್ಗೊಂಡು ೨ ಗಂಟೆ ಮೆರವಣಿಗೆ ಸಾಗಿದೆ. ನಾಡಹಬ್ಬದಲ್ಲಿ ಅಳಿಲು ಸೇವೆ ಸಲ್ಲಿಸಲು ಅವಕಾಶ ನೀಡಿದ ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ, ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಭದ್ರತೆಗೆ ೬ ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಯಾವುದೇ ಲೋಪವಾಗದಂತೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಪ್ರದೀಪ್ ಗುಂಟಿ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕೋಪ ಮಾಡಿಕೊಳ್ಳದೇ, ಅಸಮಾಧಾನ ವ್ಯಕ್ತಪಡಿಸಿದೇ ಸಹಕಾರ ನೀಡಿದ್ದಾರೆ. ಎಸ್‌ಪಿ ಆರ್.ಚೇತನ್ ಯುವ ಸಂಭ್ರಮ, ಯುವ ದಸರಾ ಯಶಸ್ವಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಬಾರಿ ಕಟ್ಟುವುದು ತಡವಾಗಿದ್ದರಿಂದ ಪುಷ್ಪಾರ್ಚನೆ ಸಮಯ ಮುಂದಕ್ಕೆ ಹೋಯಿತು. ಇದರಿಂದ ಯಾವುದೇ ಲೋಪವಾಗಿಲ್ಲ. ಪುರೋಹಿತರು ೬ ಗಂಟೆಯವರೆಗೆ ಪುಷ್ಪಾರ್ಚನೆ ಮಾಡಬಹುದು ಎಂದು ಹೇಳಿದ್ದರು. ಅಂಬಾರಿ ಕಟ್ಟುವ ನಟ್ಟು ಬೋಲ್ಟು ಸರಿಯಾಗಿ ಇರಲಿಲ್ಲ. ಹಾಗಾಗಿ ತಡವಾಯಿತು ಎಂದು ಸಮರ್ಥಿಸಿಕೊಂಡರು.

ಕ್ಷಮೆ ಕೇಳಿದ ಸಚಿವ: ಜಂಬೂಸವಾರಿ ಮತ್ತು ಪಂಜಿನ ಕವಾಯತು ವೀಕ್ಷಿಸಲು ನಿರೀಕ್ಷೆಗೂ ಮೀರಿ ಜನರು ಬಂದಿದ್ದಾರೆ. ಲಕ್ಷಾಂತರ ಜನರು ಪಾಲ್ಗೊಂಡ ವೇಳೆ ಸಣ್ಣಪುಟ್ಟ ತಪ್ಪುಗಳಾಗುತ್ತವೆ. ಜನ ಸಾಮಾನ್ಯರಿಗೆ ಅನಾನುಕೂಲವಾಗಿದ್ದರೆ ಕ್ಷಮೆ ಕೋರುತ್ತೇನೆ. ದಸರಾ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಸಣ್ಣಪುಟ್ಟ ಲೋಪಗಳನ್ನು ದೊಡ್ಡದು ಮಾಡಿ ಕಳಂಕ ಅಂಟಿಸುವುದು ಬೇಡ ಎಂದು ಮನವಿ ಮಾಡಿದರು.

ಶಾಸಕ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮಹಾಪೌರ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್‌ಪಿ ಆರ್.ಚೇತನ್, ಡಿಸಿಪಿ ಪ್ರದೀಪ್ ಗುಂಟಿ, ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಎಡಿಸಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಮುಡಾ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್, ಕಾರ್ಯದರ್ಶಿ ಎನ್.ಸಿ.ವೆಂಕಟರಾಜು, ನಿಗಮಮಂಡಳಿ ಅಧ್ಯಕ್ಷರಾದ ಕೋಟೆ ಎಂ.ಶಿವಣ್ಣ, ಎಸ್.ಮಹದೇವಯ್ಯ, ಮಿರ್ಲೆ ಶ್ರೀನಿವಾಸಗೌಡ, ಬಿಜೆಪಿ ನಗರ ಅಧ್ಯಕ್ಷ ಟಿ.ಎಸ್.ಶ್ರೀವತ್ಸ, ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಮುಂತಾದವರು ಹಾಜರಿದ್ದರು.

ಯಶ್ವಂತಪುರದವರು ದಸರಾ ವೀಕ್ಷಿಸಬಾರದೇ?: ಎಸ್‌ಟಿಎಸ್

ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಸ್ ಹಂಚಿಕೆಯಲ್ಲಿ ಯಶವಂತಪುರ ಕ್ಷೇತ್ರದವರಿಗೆ ಆದ್ಯತೆ ನೀಡಲಾಗಿತ್ತೇ ಎಂಬ ಪತ್ರಕರ್ತರ ಪ್ರಶ್ನೆಗೆ ಗರಂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಯಶ್ವಂತಪುರದವರು ದಸರಾ ನೋಡಬಾರದೇ ಎಂದು ಪ್ರಶ್ನಿಸಿದರಲ್ಲದೆ, ಪಾಸ್ ಮಾಹಿತಿ ಬೇಕಾದರೆ ಆರ್‌ಟಿಐಗೆ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಿರಿ ಎಂದು ಖಾರವಾಗಿ ಹೇಳಿದರು.

andolana

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

10 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

10 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

10 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

10 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

10 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

11 hours ago