ಜಿಲ್ಲೆಗಳು

ನಾಡಹಬ್ಬ ಯಶಸ್ಸುಗೊಳಿಸಿದ್ದಕ್ಕೆ ಜಿಲ್ಲಾಡಳಿತ, ಜನಪ್ರತಿನಿಧಿಗಳು, ಉಪ ಸಮಿತಿ ಸದಸ್ಯರಿಗೆ ಔತಣಕೂಟ

ಮೈಸೂರು: ಮೈಸೂರಿನ ಮಹಾಜನತೆ, ಜಿಲ್ಲಾಡಳಿತ, ಪಾಲಿಕೆ ಸದಸ್ಯರು, ಜನಪ್ರತಿನಿಧಿಗಳ ಸಹಕಾರದಿಂದ ಬಹಳ ಯಶಸ್ವಿಯಾಗಿ ದಸರಾ ನಡೆಸಿದ್ದೇವೆ. ೪೭ ಸ್ತಬ್ಧಚಿತ್ರ, ೬೬ ಕಲಾತಂಡಗಳು ಪಾಲ್ಗೊಂಡು ೨ ಗಂಟೆ ಮೆರವಣಿಗೆ ಸಾಗಿದೆ. ನಾಡಹಬ್ಬದಲ್ಲಿ ಅಳಿಲು ಸೇವೆ ಸಲ್ಲಿಸಲು ಅವಕಾಶ ನೀಡಿದ ಹಿಂದಿನ ಸಿಎಂ ಬಿ.ಎಸ್.ಯಡಿಯೂರಪ್ಪ, ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ಭದ್ರತೆಗೆ ೬ ಸಾವಿರ ಪೊಲೀಸರನ್ನು ನಿಯೋಜಿಸಲಾಗಿತ್ತು. ಯಾವುದೇ ಲೋಪವಾಗದಂತೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಪ್ರದೀಪ್ ಗುಂಟಿ ಅವರು ಜವಾಬ್ದಾರಿ ನಿರ್ವಹಿಸಿದ್ದಾರೆ. ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಕೋಪ ಮಾಡಿಕೊಳ್ಳದೇ, ಅಸಮಾಧಾನ ವ್ಯಕ್ತಪಡಿಸಿದೇ ಸಹಕಾರ ನೀಡಿದ್ದಾರೆ. ಎಸ್‌ಪಿ ಆರ್.ಚೇತನ್ ಯುವ ಸಂಭ್ರಮ, ಯುವ ದಸರಾ ಯಶಸ್ವಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಂಬಾರಿ ಕಟ್ಟುವುದು ತಡವಾಗಿದ್ದರಿಂದ ಪುಷ್ಪಾರ್ಚನೆ ಸಮಯ ಮುಂದಕ್ಕೆ ಹೋಯಿತು. ಇದರಿಂದ ಯಾವುದೇ ಲೋಪವಾಗಿಲ್ಲ. ಪುರೋಹಿತರು ೬ ಗಂಟೆಯವರೆಗೆ ಪುಷ್ಪಾರ್ಚನೆ ಮಾಡಬಹುದು ಎಂದು ಹೇಳಿದ್ದರು. ಅಂಬಾರಿ ಕಟ್ಟುವ ನಟ್ಟು ಬೋಲ್ಟು ಸರಿಯಾಗಿ ಇರಲಿಲ್ಲ. ಹಾಗಾಗಿ ತಡವಾಯಿತು ಎಂದು ಸಮರ್ಥಿಸಿಕೊಂಡರು.

ಕ್ಷಮೆ ಕೇಳಿದ ಸಚಿವ: ಜಂಬೂಸವಾರಿ ಮತ್ತು ಪಂಜಿನ ಕವಾಯತು ವೀಕ್ಷಿಸಲು ನಿರೀಕ್ಷೆಗೂ ಮೀರಿ ಜನರು ಬಂದಿದ್ದಾರೆ. ಲಕ್ಷಾಂತರ ಜನರು ಪಾಲ್ಗೊಂಡ ವೇಳೆ ಸಣ್ಣಪುಟ್ಟ ತಪ್ಪುಗಳಾಗುತ್ತವೆ. ಜನ ಸಾಮಾನ್ಯರಿಗೆ ಅನಾನುಕೂಲವಾಗಿದ್ದರೆ ಕ್ಷಮೆ ಕೋರುತ್ತೇನೆ. ದಸರಾ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಸಣ್ಣಪುಟ್ಟ ಲೋಪಗಳನ್ನು ದೊಡ್ಡದು ಮಾಡಿ ಕಳಂಕ ಅಂಟಿಸುವುದು ಬೇಡ ಎಂದು ಮನವಿ ಮಾಡಿದರು.

ಶಾಸಕ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ, ಮಹಾಪೌರ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್‌ಪಿ ಆರ್.ಚೇತನ್, ಡಿಸಿಪಿ ಪ್ರದೀಪ್ ಗುಂಟಿ, ಜಿಪಂ ಸಿಇಒ ಬಿ.ಆರ್.ಪೂರ್ಣಿಮಾ, ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಎಡಿಸಿ ಡಾ.ಬಿ.ಎಸ್.ಮಂಜುನಾಥಸ್ವಾಮಿ, ಮುಡಾ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್, ಕಾರ್ಯದರ್ಶಿ ಎನ್.ಸಿ.ವೆಂಕಟರಾಜು, ನಿಗಮಮಂಡಳಿ ಅಧ್ಯಕ್ಷರಾದ ಕೋಟೆ ಎಂ.ಶಿವಣ್ಣ, ಎಸ್.ಮಹದೇವಯ್ಯ, ಮಿರ್ಲೆ ಶ್ರೀನಿವಾಸಗೌಡ, ಬಿಜೆಪಿ ನಗರ ಅಧ್ಯಕ್ಷ ಟಿ.ಎಸ್.ಶ್ರೀವತ್ಸ, ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಮುಂತಾದವರು ಹಾಜರಿದ್ದರು.

ಯಶ್ವಂತಪುರದವರು ದಸರಾ ವೀಕ್ಷಿಸಬಾರದೇ?: ಎಸ್‌ಟಿಎಸ್

ಈ ಬಾರಿಯ ದಸರಾ ಮಹೋತ್ಸವದಲ್ಲಿ ಪಾಸ್ ಹಂಚಿಕೆಯಲ್ಲಿ ಯಶವಂತಪುರ ಕ್ಷೇತ್ರದವರಿಗೆ ಆದ್ಯತೆ ನೀಡಲಾಗಿತ್ತೇ ಎಂಬ ಪತ್ರಕರ್ತರ ಪ್ರಶ್ನೆಗೆ ಗರಂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಯಶ್ವಂತಪುರದವರು ದಸರಾ ನೋಡಬಾರದೇ ಎಂದು ಪ್ರಶ್ನಿಸಿದರಲ್ಲದೆ, ಪಾಸ್ ಮಾಹಿತಿ ಬೇಕಾದರೆ ಆರ್‌ಟಿಐಗೆ ಅರ್ಜಿ ಸಲ್ಲಿಸಿ ಮಾಹಿತಿ ಪಡೆಯಿರಿ ಎಂದು ಖಾರವಾಗಿ ಹೇಳಿದರು.

andolana

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

17 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

17 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

17 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

17 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

17 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

17 hours ago