ಜಿಲ್ಲೆಗಳು

ಕರಡಿ ದಾಳಿಗೆ ಪುಣಜನೂರು ವ್ಯಕ್ತಿ ಬಲಿ

ಫೈರ್ ಮಾಡಿದ ಮೃತದೇಹ ಬಿಟ್ಟ ಕರಡಿ!

ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ, ಕಾಡಾನೆಗಳ ಉಪಟಳ ಹೆಚ್ಚಾಗುತ್ತಿರುವ ಮಧ್ಯೆಯೇ ಇದೀಗ ಕರಡಿ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನುಭೀಕರವಾಗಿ ಬಲಿತೆಗೆದುಕೊಂಡಿರುವ ಘಟನೆ ತಾಲ್ಲೂಕಿನ ಪುಣಜನೂರು ಬಳಿ ಶನಿವಾರ ನಡೆದಿದೆ.
ಪುಣಜನೂರು ರಾಜು(50) ಬಿನ್.ಭದ್ರಪ್ಪ ಮೃತಪಟ್ಟವರು.ಇವರೊಂದಿಗೆ ಇದ್ದ ಸಂಬಂಧಿಯೊಬ್ಬರು ಕರಡಿ ದಾಳಿಯಿಂದ ಬಚಾವಾಗಿದ್ದಾರೆ.
ವಿಷಯ ತಿಳಿದು ಗ್ರಾಮಸ್ಥರು ಘಟನಾ ಸ್ಥಳದಲ್ಲಿ
ಏನೆಲ್ಲಾ ಕೂಗಾಟ ಮಾಡಿದರೂ ರಾಜು ಅವರ ದೇಹವನ್ನು ಬಿಡದೆ ಸುಮಾರು 1ಕಿಮೀದೂರ ಎಳೆದು -ಎತ್ತಿಕೊಂಡು ಓಡಾಡಿದೆ. ಮಾಂಸ ಖಂಡಗಳನ್ನು ಕಿತ್ತು ತಿಂದು ಸಿಕ್ಕಸಿಕ್ಕ ಜಾಗಗಳೆಲ್ಲಾ ಕಚ್ಚಿ ದೇಹವನ್ನು ಗುರುತಿಸಲಾಗದ ಮಟ್ಟಿಗೆ ಮಾಡಿದೆ.
ಅರಣ್ಯ ಸಿಬ್ಬಂದಿ ಮೇಲಿಂದ ಮೇಲೆ ಏರ್ ಫೈರ್ ಮಾಡಿ ಕರಡಿಯನ್ನು ಓಡಿಸುವ ವೇಳೆಗೆ ಮೃತದೇಹವನ್ನು ಒದರಿ ಬಿಸಾಡಿತ್ತು.
ಬಿ ಆರ್ ಟಿ ಗೆ ಸೇರಿದ ಪುಣಜನೂರು ವಲಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕರಡಿ ದಾಳಿಯಿಂದ ಮೃತ ಪಟ್ಟ ವರದಿಯಾಗಿರಲಿಲ್ಲ.ಈಘಟನೆ ಪುಣಜನೂರು ಸುತ್ತಮುತ್ತಲಿನ ಕಾಡಂಚಿನ ಜನರಲ್ಲಿ ಆತಂಕ ಉಂಟು ಮಾಡಿದೆ.
ಮಧ್ಯಾಹ್ನ 3.30ರಲ್ಲಿ ಘಟನೆ ನಡೆದಿದ್ದು ಮೃತರು ದನ ಮೇಯಿಸಲು ಹೋಗಿದ್ದರೇ? ಅಥವಾ ಆ ಮಾರ್ಗದಲ್ಲಿ ಬೇರೆ ಎಲ್ಲಾದರೂ ಹೋಗಿದ್ದರೇ ಎಂಬುದನ್ನು ವಿಚಾರ ಮಾಡಲಾಗುತ್ತಿದೆ.
ಮೃತರಿಗೆ ಪತ್ನಿ, ಪುತ್ರ ಇದ್ದು ದನಕರು ಮತ್ತು ಕುರಿ ಸಾಕಾಣಿಕೆ ಯಿಂದ ಜೀವನ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.ಘಟನಾ ಸ್ಥಳದ ಬಳಿಯಲ್ಲೇ ಸಂಜೆ 7ಘಂಟೆಯಲ್ಲಿಮರಣೋತ್ತರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ವನ್ಯ
ಜೀವಿ ದಾಳಿಯಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಸರ್ಕಾರದಿಂದ 15ಲಕ್ಷರೂ.ಪರಿಹಾರ ನೀಡಲು ಅವಕಾಶವಿದೆ.ಕರಡಿ ಏನಾದರೂ ಮತ್ತೆ ಪ್ರತ್ಯಕ್ಷವಾದರೆ ಅದಕ್ಕೆ ಅರಿವಳಿಕೆ ನೀಡಿ ಬೇರೆಡೆ ಬಿಡಲು ಘಟನಾ ಸ್ಥಳದ ಸುತ್ತಮುತ್ತ ಹೆಚ್ಚಿನ ಅರಣ್ಯ ಸಿಬ್ಬಂದಿಹಾಕುವುದಾಗಿ ಅಧಿಕಾರಿಯೊಬ್ಬರು ತಿಳಿಸಿದರು.
ಪುಣಜನೂರು ವಲಯದ ಹುಚ್ಚನಕೆಂಬಾರೆ ಎಂಬ ಅರಣ್ಯದ ಒಳಗಡೆಕರಡಿದಾಳಿ ನಡೆದಿರುವುದಾಗಿ ಬಿ ಆರ್ ಟಿ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸಿಎಫ್ ಸುರೇಶ್, ಆರ್ ಎಫ್ ಒ ನಸೀರ್ ಅಹಮ್ಮದ್ ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು.

andolanait

Recent Posts

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

5 mins ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

10 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

13 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

13 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

13 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

13 hours ago