ಜಿಲ್ಲೆಗಳು

ಕರಡಿ ದಾಳಿಗೆ ಪುಣಜನೂರು ವ್ಯಕ್ತಿ ಬಲಿ

ಫೈರ್ ಮಾಡಿದ ಮೃತದೇಹ ಬಿಟ್ಟ ಕರಡಿ!

ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ, ಕಾಡಾನೆಗಳ ಉಪಟಳ ಹೆಚ್ಚಾಗುತ್ತಿರುವ ಮಧ್ಯೆಯೇ ಇದೀಗ ಕರಡಿ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನುಭೀಕರವಾಗಿ ಬಲಿತೆಗೆದುಕೊಂಡಿರುವ ಘಟನೆ ತಾಲ್ಲೂಕಿನ ಪುಣಜನೂರು ಬಳಿ ಶನಿವಾರ ನಡೆದಿದೆ.
ಪುಣಜನೂರು ರಾಜು(50) ಬಿನ್.ಭದ್ರಪ್ಪ ಮೃತಪಟ್ಟವರು.ಇವರೊಂದಿಗೆ ಇದ್ದ ಸಂಬಂಧಿಯೊಬ್ಬರು ಕರಡಿ ದಾಳಿಯಿಂದ ಬಚಾವಾಗಿದ್ದಾರೆ.
ವಿಷಯ ತಿಳಿದು ಗ್ರಾಮಸ್ಥರು ಘಟನಾ ಸ್ಥಳದಲ್ಲಿ
ಏನೆಲ್ಲಾ ಕೂಗಾಟ ಮಾಡಿದರೂ ರಾಜು ಅವರ ದೇಹವನ್ನು ಬಿಡದೆ ಸುಮಾರು 1ಕಿಮೀದೂರ ಎಳೆದು -ಎತ್ತಿಕೊಂಡು ಓಡಾಡಿದೆ. ಮಾಂಸ ಖಂಡಗಳನ್ನು ಕಿತ್ತು ತಿಂದು ಸಿಕ್ಕಸಿಕ್ಕ ಜಾಗಗಳೆಲ್ಲಾ ಕಚ್ಚಿ ದೇಹವನ್ನು ಗುರುತಿಸಲಾಗದ ಮಟ್ಟಿಗೆ ಮಾಡಿದೆ.
ಅರಣ್ಯ ಸಿಬ್ಬಂದಿ ಮೇಲಿಂದ ಮೇಲೆ ಏರ್ ಫೈರ್ ಮಾಡಿ ಕರಡಿಯನ್ನು ಓಡಿಸುವ ವೇಳೆಗೆ ಮೃತದೇಹವನ್ನು ಒದರಿ ಬಿಸಾಡಿತ್ತು.
ಬಿ ಆರ್ ಟಿ ಗೆ ಸೇರಿದ ಪುಣಜನೂರು ವಲಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕರಡಿ ದಾಳಿಯಿಂದ ಮೃತ ಪಟ್ಟ ವರದಿಯಾಗಿರಲಿಲ್ಲ.ಈಘಟನೆ ಪುಣಜನೂರು ಸುತ್ತಮುತ್ತಲಿನ ಕಾಡಂಚಿನ ಜನರಲ್ಲಿ ಆತಂಕ ಉಂಟು ಮಾಡಿದೆ.
ಮಧ್ಯಾಹ್ನ 3.30ರಲ್ಲಿ ಘಟನೆ ನಡೆದಿದ್ದು ಮೃತರು ದನ ಮೇಯಿಸಲು ಹೋಗಿದ್ದರೇ? ಅಥವಾ ಆ ಮಾರ್ಗದಲ್ಲಿ ಬೇರೆ ಎಲ್ಲಾದರೂ ಹೋಗಿದ್ದರೇ ಎಂಬುದನ್ನು ವಿಚಾರ ಮಾಡಲಾಗುತ್ತಿದೆ.
ಮೃತರಿಗೆ ಪತ್ನಿ, ಪುತ್ರ ಇದ್ದು ದನಕರು ಮತ್ತು ಕುರಿ ಸಾಕಾಣಿಕೆ ಯಿಂದ ಜೀವನ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.ಘಟನಾ ಸ್ಥಳದ ಬಳಿಯಲ್ಲೇ ಸಂಜೆ 7ಘಂಟೆಯಲ್ಲಿಮರಣೋತ್ತರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ವನ್ಯ
ಜೀವಿ ದಾಳಿಯಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಸರ್ಕಾರದಿಂದ 15ಲಕ್ಷರೂ.ಪರಿಹಾರ ನೀಡಲು ಅವಕಾಶವಿದೆ.ಕರಡಿ ಏನಾದರೂ ಮತ್ತೆ ಪ್ರತ್ಯಕ್ಷವಾದರೆ ಅದಕ್ಕೆ ಅರಿವಳಿಕೆ ನೀಡಿ ಬೇರೆಡೆ ಬಿಡಲು ಘಟನಾ ಸ್ಥಳದ ಸುತ್ತಮುತ್ತ ಹೆಚ್ಚಿನ ಅರಣ್ಯ ಸಿಬ್ಬಂದಿಹಾಕುವುದಾಗಿ ಅಧಿಕಾರಿಯೊಬ್ಬರು ತಿಳಿಸಿದರು.
ಪುಣಜನೂರು ವಲಯದ ಹುಚ್ಚನಕೆಂಬಾರೆ ಎಂಬ ಅರಣ್ಯದ ಒಳಗಡೆಕರಡಿದಾಳಿ ನಡೆದಿರುವುದಾಗಿ ಬಿ ಆರ್ ಟಿ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸಿಎಫ್ ಸುರೇಶ್, ಆರ್ ಎಫ್ ಒ ನಸೀರ್ ಅಹಮ್ಮದ್ ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು.

andolanait

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

15 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

24 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

24 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

24 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

24 hours ago