ಜಿಲ್ಲೆಗಳು

ಕರಡಿ ದಾಳಿಗೆ ಪುಣಜನೂರು ವ್ಯಕ್ತಿ ಬಲಿ

ಫೈರ್ ಮಾಡಿದ ಮೃತದೇಹ ಬಿಟ್ಟ ಕರಡಿ!

ಚಾಮರಾಜನಗರ: ಕಾಡು ಪ್ರಾಣಿಗಳಾದ ಹುಲಿ, ಚಿರತೆ, ಕಾಡಾನೆಗಳ ಉಪಟಳ ಹೆಚ್ಚಾಗುತ್ತಿರುವ ಮಧ್ಯೆಯೇ ಇದೀಗ ಕರಡಿ ದಾಳಿ ಮಾಡಿ ವ್ಯಕ್ತಿಯೊಬ್ಬರನ್ನುಭೀಕರವಾಗಿ ಬಲಿತೆಗೆದುಕೊಂಡಿರುವ ಘಟನೆ ತಾಲ್ಲೂಕಿನ ಪುಣಜನೂರು ಬಳಿ ಶನಿವಾರ ನಡೆದಿದೆ.
ಪುಣಜನೂರು ರಾಜು(50) ಬಿನ್.ಭದ್ರಪ್ಪ ಮೃತಪಟ್ಟವರು.ಇವರೊಂದಿಗೆ ಇದ್ದ ಸಂಬಂಧಿಯೊಬ್ಬರು ಕರಡಿ ದಾಳಿಯಿಂದ ಬಚಾವಾಗಿದ್ದಾರೆ.
ವಿಷಯ ತಿಳಿದು ಗ್ರಾಮಸ್ಥರು ಘಟನಾ ಸ್ಥಳದಲ್ಲಿ
ಏನೆಲ್ಲಾ ಕೂಗಾಟ ಮಾಡಿದರೂ ರಾಜು ಅವರ ದೇಹವನ್ನು ಬಿಡದೆ ಸುಮಾರು 1ಕಿಮೀದೂರ ಎಳೆದು -ಎತ್ತಿಕೊಂಡು ಓಡಾಡಿದೆ. ಮಾಂಸ ಖಂಡಗಳನ್ನು ಕಿತ್ತು ತಿಂದು ಸಿಕ್ಕಸಿಕ್ಕ ಜಾಗಗಳೆಲ್ಲಾ ಕಚ್ಚಿ ದೇಹವನ್ನು ಗುರುತಿಸಲಾಗದ ಮಟ್ಟಿಗೆ ಮಾಡಿದೆ.
ಅರಣ್ಯ ಸಿಬ್ಬಂದಿ ಮೇಲಿಂದ ಮೇಲೆ ಏರ್ ಫೈರ್ ಮಾಡಿ ಕರಡಿಯನ್ನು ಓಡಿಸುವ ವೇಳೆಗೆ ಮೃತದೇಹವನ್ನು ಒದರಿ ಬಿಸಾಡಿತ್ತು.
ಬಿ ಆರ್ ಟಿ ಗೆ ಸೇರಿದ ಪುಣಜನೂರು ವಲಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕರಡಿ ದಾಳಿಯಿಂದ ಮೃತ ಪಟ್ಟ ವರದಿಯಾಗಿರಲಿಲ್ಲ.ಈಘಟನೆ ಪುಣಜನೂರು ಸುತ್ತಮುತ್ತಲಿನ ಕಾಡಂಚಿನ ಜನರಲ್ಲಿ ಆತಂಕ ಉಂಟು ಮಾಡಿದೆ.
ಮಧ್ಯಾಹ್ನ 3.30ರಲ್ಲಿ ಘಟನೆ ನಡೆದಿದ್ದು ಮೃತರು ದನ ಮೇಯಿಸಲು ಹೋಗಿದ್ದರೇ? ಅಥವಾ ಆ ಮಾರ್ಗದಲ್ಲಿ ಬೇರೆ ಎಲ್ಲಾದರೂ ಹೋಗಿದ್ದರೇ ಎಂಬುದನ್ನು ವಿಚಾರ ಮಾಡಲಾಗುತ್ತಿದೆ.
ಮೃತರಿಗೆ ಪತ್ನಿ, ಪುತ್ರ ಇದ್ದು ದನಕರು ಮತ್ತು ಕುರಿ ಸಾಕಾಣಿಕೆ ಯಿಂದ ಜೀವನ ಸಾಗಿಸುತ್ತಿದ್ದರು ಎಂದು ತಿಳಿದು ಬಂದಿದೆ.ಘಟನಾ ಸ್ಥಳದ ಬಳಿಯಲ್ಲೇ ಸಂಜೆ 7ಘಂಟೆಯಲ್ಲಿಮರಣೋತ್ತರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ವನ್ಯ
ಜೀವಿ ದಾಳಿಯಿಂದ ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ ಸರ್ಕಾರದಿಂದ 15ಲಕ್ಷರೂ.ಪರಿಹಾರ ನೀಡಲು ಅವಕಾಶವಿದೆ.ಕರಡಿ ಏನಾದರೂ ಮತ್ತೆ ಪ್ರತ್ಯಕ್ಷವಾದರೆ ಅದಕ್ಕೆ ಅರಿವಳಿಕೆ ನೀಡಿ ಬೇರೆಡೆ ಬಿಡಲು ಘಟನಾ ಸ್ಥಳದ ಸುತ್ತಮುತ್ತ ಹೆಚ್ಚಿನ ಅರಣ್ಯ ಸಿಬ್ಬಂದಿಹಾಕುವುದಾಗಿ ಅಧಿಕಾರಿಯೊಬ್ಬರು ತಿಳಿಸಿದರು.
ಪುಣಜನೂರು ವಲಯದ ಹುಚ್ಚನಕೆಂಬಾರೆ ಎಂಬ ಅರಣ್ಯದ ಒಳಗಡೆಕರಡಿದಾಳಿ ನಡೆದಿರುವುದಾಗಿ ಬಿ ಆರ್ ಟಿ ನಿರ್ದೇಶಕಿ ದೀಪ್ ಜೆ.ಕಂಟ್ರಾಕ್ಟರ್ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಎಸಿಎಫ್ ಸುರೇಶ್, ಆರ್ ಎಫ್ ಒ ನಸೀರ್ ಅಹಮ್ಮದ್ ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago