ಹನೂರು: ತಾಲೂಕಿನ ಹುತ್ತೂರು ಗ್ರಾಮದ ಶ್ರೀ ಮಲೆ ಮಹದೇಶ್ವರ ಮಠದ ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪೂಜಿ ಸಲ್ಲಿಸಿದರು.
ಈ ವೇಳೆ ಮಂಜುನಾಥ್ ಅವರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಸಾಲೂರು ಬೃಹನ್ ಮಠ ಹೊರತುಪಡಿಸಿದರೆ ರಾಗಿ ಬೀಸುವ ಕಲ್ಲು ಪ್ರತಿಷ್ಠಾಪನೆ ಇರುವ ದೇವಾಲಯ ಎಂಬ ಪ್ರತೀತಿ ಮತ್ತು ನಂಬಿಕೆಗೆ ಪಾತ್ರವಾಗಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿ ಹುತ್ತೂರು ಮಠದಲ್ಲಿ ಬಸವನ ಬಾಗಿಲು ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೂತನವಾಗಿ ಜರುಗುತ್ತಿರುವುದು ಸಂತಸದಾಯಕ ವಿಚಾರವಾಗಿದೆ. ಗ್ರಾಮದ ಜನತೆ ಶ್ರದ್ಧಾ ಭಕ್ತಿಯಿಂದ ದೇವಾಲಯ ಹಾಗೂ ಆವರಣವನ್ನು ನಿರ್ಮಾಣ ಮಾಡಿರುವುದು ಮೆಚ್ಚುಗೆಯ ಸಂಗತಿ. ಇದೇ ರೀತಿ ಮುಂದಿನ ದಿನಗಳಲ್ಲಿ ಕೂಡ ಜನತೆ ಶಾಂತಿ ಸೌಹಾರ್ದತೆಯಿಂದ ಜೀವನ ನಡೆಸಲಿ ಎಂದು ಆಶಿಸಿದ ಅವರು ನಮ್ಮನ್ನು ಧಾರ್ಮಿಕ ಕಾರ್ಯಕ್ಕೆ ಆಹ್ವಾನಿಸಿರುವುದಕ್ಕೆ ಗ್ರಾಮದ ಯೋಜನೆಗೆ ಆಭಾರಿಯಾಗಿದ್ದಾನೆ ಎಂದರು.
ಕಾರ್ಯಕ್ರಮದಲ್ಲಿ ದೇವಾಲಯಕ್ಕೆ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿದ್ದ ಎಂ.ಆರ್. ಮಂಜುನಾಥ್ ಅವರನ್ನು ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಮೂರ್ತಿ. ಮಂಜೇಶ್ ಮಾದೇವಣ್ಣ ನಂಜಪ್ಪನಾಯಕ ಪರಶಿವ ನಾಗಣ್ಣ ಶಾಂತಮೂರ್ತಿ ಗೋಪಾಲನಾಯಕ ವೆಂಕಟಮಾದನಾಯಕ ನಿಂಗಶೆಟ್ರು ಇನ್ನು ಅನೇಕ ಜೆ ಡಿ ಎಸ್ ಮುಖಂಡರು ಹಾಜರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…