ಜಿಲ್ಲೆಗಳು

ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜಾ. ದಳ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ಭೇಟಿ

ಹನೂರು: ತಾಲೂಕಿನ ಹುತ್ತೂರು ಗ್ರಾಮದ ಶ್ರೀ ಮಲೆ ಮಹದೇಶ್ವರ ಮಠದ ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪೂಜಿ ಸಲ್ಲಿಸಿದರು.

ಈ ವೇಳೆ ಮಂಜುನಾಥ್ ಅವರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಸಾಲೂರು ಬೃಹನ್ ಮಠ ಹೊರತುಪಡಿಸಿದರೆ ರಾಗಿ ಬೀಸುವ ಕಲ್ಲು ಪ್ರತಿಷ್ಠಾಪನೆ ಇರುವ ದೇವಾಲಯ ಎಂಬ ಪ್ರತೀತಿ ಮತ್ತು ನಂಬಿಕೆಗೆ ಪಾತ್ರವಾಗಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿ ಹುತ್ತೂರು ಮಠದಲ್ಲಿ ಬಸವನ ಬಾಗಿಲು ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೂತನವಾಗಿ ಜರುಗುತ್ತಿರುವುದು ಸಂತಸದಾಯಕ ವಿಚಾರವಾಗಿದೆ. ಗ್ರಾಮದ ಜನತೆ ಶ್ರದ್ಧಾ ಭಕ್ತಿಯಿಂದ ದೇವಾಲಯ ಹಾಗೂ ಆವರಣವನ್ನು ನಿರ್ಮಾಣ ಮಾಡಿರುವುದು ಮೆಚ್ಚುಗೆಯ ಸಂಗತಿ. ಇದೇ ರೀತಿ ಮುಂದಿನ ದಿನಗಳಲ್ಲಿ ಕೂಡ ಜನತೆ ಶಾಂತಿ ಸೌಹಾರ್ದತೆಯಿಂದ ಜೀವನ ನಡೆಸಲಿ ಎಂದು ಆಶಿಸಿದ ಅವರು ನಮ್ಮನ್ನು ಧಾರ್ಮಿಕ ಕಾರ್ಯಕ್ಕೆ ಆಹ್ವಾನಿಸಿರುವುದಕ್ಕೆ ಗ್ರಾಮದ ಯೋಜನೆಗೆ ಆಭಾರಿಯಾಗಿದ್ದಾನೆ ಎಂದರು.

ಕಾರ್ಯಕ್ರಮದಲ್ಲಿ ದೇವಾಲಯಕ್ಕೆ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿದ್ದ ಎಂ.ಆರ್. ಮಂಜುನಾಥ್ ಅವರನ್ನು ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಿವಮೂರ್ತಿ. ಮಂಜೇಶ್ ಮಾದೇವಣ್ಣ ನಂಜಪ್ಪನಾಯಕ ಪರಶಿವ ನಾಗಣ್ಣ ಶಾಂತಮೂರ್ತಿ ಗೋಪಾಲನಾಯಕ ವೆಂಕಟಮಾದನಾಯಕ ನಿಂಗಶೆಟ್ರು ಇನ್ನು ಅನೇಕ ಜೆ ಡಿ ಎಸ್ ಮುಖಂಡರು ಹಾಜರಿದ್ದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago