ಜಿಲ್ಲೆಗಳು

ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜಾ. ದಳ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ಭೇಟಿ

ಹನೂರು: ತಾಲೂಕಿನ ಹುತ್ತೂರು ಗ್ರಾಮದ ಶ್ರೀ ಮಲೆ ಮಹದೇಶ್ವರ ಮಠದ ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪೂಜಿ ಸಲ್ಲಿಸಿದರು.

ಈ ವೇಳೆ ಮಂಜುನಾಥ್ ಅವರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಸಾಲೂರು ಬೃಹನ್ ಮಠ ಹೊರತುಪಡಿಸಿದರೆ ರಾಗಿ ಬೀಸುವ ಕಲ್ಲು ಪ್ರತಿಷ್ಠಾಪನೆ ಇರುವ ದೇವಾಲಯ ಎಂಬ ಪ್ರತೀತಿ ಮತ್ತು ನಂಬಿಕೆಗೆ ಪಾತ್ರವಾಗಿರುವ ಶ್ರೀ ಮಲೆ ಮಹದೇಶ್ವರ ಸ್ವಾಮಿ ಹುತ್ತೂರು ಮಠದಲ್ಲಿ ಬಸವನ ಬಾಗಿಲು ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೂತನವಾಗಿ ಜರುಗುತ್ತಿರುವುದು ಸಂತಸದಾಯಕ ವಿಚಾರವಾಗಿದೆ. ಗ್ರಾಮದ ಜನತೆ ಶ್ರದ್ಧಾ ಭಕ್ತಿಯಿಂದ ದೇವಾಲಯ ಹಾಗೂ ಆವರಣವನ್ನು ನಿರ್ಮಾಣ ಮಾಡಿರುವುದು ಮೆಚ್ಚುಗೆಯ ಸಂಗತಿ. ಇದೇ ರೀತಿ ಮುಂದಿನ ದಿನಗಳಲ್ಲಿ ಕೂಡ ಜನತೆ ಶಾಂತಿ ಸೌಹಾರ್ದತೆಯಿಂದ ಜೀವನ ನಡೆಸಲಿ ಎಂದು ಆಶಿಸಿದ ಅವರು ನಮ್ಮನ್ನು ಧಾರ್ಮಿಕ ಕಾರ್ಯಕ್ಕೆ ಆಹ್ವಾನಿಸಿರುವುದಕ್ಕೆ ಗ್ರಾಮದ ಯೋಜನೆಗೆ ಆಭಾರಿಯಾಗಿದ್ದಾನೆ ಎಂದರು.

ಕಾರ್ಯಕ್ರಮದಲ್ಲಿ ದೇವಾಲಯಕ್ಕೆ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿದ್ದ ಎಂ.ಆರ್. ಮಂಜುನಾಥ್ ಅವರನ್ನು ದೇವಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶಿವಮೂರ್ತಿ. ಮಂಜೇಶ್ ಮಾದೇವಣ್ಣ ನಂಜಪ್ಪನಾಯಕ ಪರಶಿವ ನಾಗಣ್ಣ ಶಾಂತಮೂರ್ತಿ ಗೋಪಾಲನಾಯಕ ವೆಂಕಟಮಾದನಾಯಕ ನಿಂಗಶೆಟ್ರು ಇನ್ನು ಅನೇಕ ಜೆ ಡಿ ಎಸ್ ಮುಖಂಡರು ಹಾಜರಿದ್ದರು.

andolanait

Recent Posts

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

2 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

2 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

2 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

2 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

2 hours ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

2 hours ago