ಬೇಗೂರು (ಗುಂಡ್ಲುಪೇಟೆ) : ವಿದ್ಯುತ್ ತಂತಿ ಸ್ಪರ್ಶಿಸಿ ಹೆಣ್ಣು ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಸಮೀಪದ ಹೆಡಿಯಾಲ ವಲಯ ಚಿಕ್ಕಬರಗಿ ಗ್ರಾಮದ ಹುಲಿಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.
ಬೇಗೂರು ಸಮೀಪದ ಹೆಡಿಯಾಲ ವಲಯದ ಚಿಕ್ಕಬರಗಿ ಶಾಖೆಯ ಹೆಬ್ಬಳ್ಳ ಗಸ್ತಿನ ದೂಡ್ಡಬರಗಿ ಗ್ರಾಮದ ಗೋಪಾಲ ಬಿನ್ ಬಿಎಸ್ ರಾಮಸಂಜಿವನಾಯ್ಡು ಎಂಬುವರ ಸರ್ವೇ ನಂ 36/6 ರ ಜಮೀನಿನಲ್ಲಿ ಸುಮಾರು 25 ರಿಂದ 30ವರ್ಷ ವಯಸ್ಸಿನ ಹೆಣ್ಣುಕಾಡಾನೆಯೊಂದು ವಿದ್ಯುತ್ ಸ್ಪರ್ಶದಿಂದ ಮೃತಪ್ಪಟ್ಟಿದೆ.
ವಿಷಯ ತಿಳಿದ ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ಬೇಟಿ ನೀಡಿ ಸ್ಥಳ ಪರಿಶೀಲಿಸಿ ಮೇಲಾಧಿಕಾರಿಗಳ ಗಮನಕ್ಕೆ ತಂದ ನಂತರ ಡಾ. ವಾಸೀಂ ವೀರ್ಜಾ ಇಲಾಖಾ ಪಶುವೈಧ್ಯಾಧಿಕಾರಿಗಳು ಬಂಡೀಪುರ. ಇವರು ಮರಣೋತ್ತರ ಪರೀಕ್ಷೇ ನಡೆಸಿ ನಂತರ ಗುಂಡಿ ತೆಗೆದು ಊಳಲಾಯಿತು ಎರಡು ವರ್ಷಗಳ ಹಿಂದೆಯೂ ಕೂಡ ಸುಮಾರು 2018 ರಲ್ಲಿ ಇದೇ ವ್ಯಕ್ತಿಗಳು ಅಕ್ರಮ ವಿದ್ಯುತ್ ಹರಿಸಿ ಹೆಣ್ಣುಕಾಡಾನೆಯೊಂದು ಸಾವಿಗೀಡಾದ ಘಟನೆ ವಾಸುವ ಮುನ್ನವೆ ಮತ್ತೂಂದು ಘಟನೆ ನಡೆದಿದೆ.
ಡಾ.ರಮೇಶ್ ಕುಮಾರ್ ಪಿ. ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ನಿದೇರ್ಶಕರು ಬಂಡೀಪುರ ವಲಯ ಅರಣ್ಯಾಧಿಕಾರಿಗಳು ಹೆಡಿಯಾಲ ಹಾಗೂ ಸಿಬ್ಬಂದಿಗಳು ಚೆಸ್ಕಾಂ ಇಲಾಖಾಧಿಕಾರಿಗಳೂ ಹಾಜರಿದ್ದರು.
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…
ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…