ಜಿಲ್ಲೆಗಳು

ನನ್ನ ಹೋರಾಟದ ಹಿಂದೆ ನೂರಾರು ಕೈಗಳು, ಕಣ್ಣುಗಳು, ಹೃದಯಗಳ ಬೆಂಬಲವಿದೆ- ಪದ್ಮಶ್ರೀ ಸೋಮಣ್ಣ

ಮೈಸೂರು : ನನ್ನ ಹೋರಾಟದ ಹಿಂದೆ ನೂರಾರು ಕೈಗಳು, ಕಣ್ಣುಗಳು ಹಾಗೂ ಹೃದಯಗಳ ಬೆಂಬಲವಿದೆ ಎಂದು ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಆದಿವಾಸಿ ನಾಯಕ ಎಚ್.ಡಿ. ಕೋಟೆ ತಾಲೂಕು ಮೊತ್ತ ಹಾಡಿಯ ಸೋಮಣ್ಣ ಹೇಳಿದರು.

ಕುವೆಂಪುನಗರದ ಕೆ ಬ್ಲಾಕಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಕಲ್ಪತರು ಚಾರಿಟಬಲ್ ಟ್ರಸ್ಟಿನಿಂದ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಆಗಷ್ಟೇ ಜೀತದಿಂದ ವಿಮುಕ್ತನಾಗಿದ್ದ ನಾನು ಮೊದಲಿಗೆ ನನ್ನ ಹೋರಾಟ ದಲಿತ ಸಂಘರ್ಷ ಸಮಿತಿಯ ಮೂಲಕ ಆರಂಭವಾಯಿತು. ಚಾ. ನಂಜುಂಡಮೂರ್ತಿ, ಬೆಟ್ಟಯ್ಯ ಕೋಟೆ ಅವರೊಂದಿಗೆ ಸೇರಿ ಹೋರಾಟಕ್ಕಿಳಿದೆ.

ನಂತರ ಕ್ಷೀರಸಾಗರ ಜೊತೆಯಾದರು. ಈ ಹೋರಾಟದಲ್ಲಿ ನೂರಾರು ಕೈಗಳು, ಕಣ್ಣುಗಳು, ಹೃದಯಗಳು ಬೆಂಬಲಿಸಿದ್ದರಿಂದ ಇಲ್ಲಿಯವರೆಗೆ ಬರಲು ಸಾಧ್ಯವಾಯಿತು ಎಂದರು.

ಕಳೆದ ಐದು ದಶಕಗಳಿಂದ ಆದಿವಾಸಿಗಳ ಹಕ್ಕಗಳಿಗಾಗಿ ಹೋರಾಟ ಮಾಡುತ್ತಾ ಬಂದರೂ ಇನ್ನೂ ಹಲವಾರು ಸಮಸ್ಯೆಗಳು ಹಾಗೆಯೇ ಉಳಿದಿವೆ. ಅರಣ್ಯ ಹಕ್ಕು ಕಾಯ್ದೆ ಸಮರ್ಪಕವಾಗಿ ಜಾರಿಯಾಗಬೇಕು.

ಆದಿವಾಸಿಗಳಿಗೆ ಒಳ ಮೀಸಲಾತಿ ನೀಡಬೇಕು. ಆದಿವಾಸಿಗಳ ಮಕ್ಕಳ ಕಲಿಕೆಗೆ ಪ್ರತ್ಯೇಕ ವಿವಿ ಸ್ಥಾಪಿಸಬೇಕು. ಈ ಮಕ್ಕಳು ಕೂಡ ಪಿಎಚ್.ಡಿ. ಪಡೆಯುವ ವಾತಾವರಣ ನಿರ್ಮಾಣವಾಗಬೇಕು ಎಂದು ಅವರು ಆಶಿಸಿದರು.

ಇದೇ ಸಂದರ್ಭದಲ್ಲಿ ಸೋಮಣ್ಣ ಅವರು ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಟ್ರಸ್ಟಿನ ಅಧ್ಯಕ್ಷ ಡಾ. ಅಮ್ಮಸಂದ್ರ ಸುರೇಶ್, ಕಾರ್ಯದರ್ಶಿ ಜಗದೀಶ್ ಆರ್. ತುಂಗಾ, ಉಪಾದ್ಯಕ್ಷ ಪಿ. ಕುಮಾರ್, ಖಜಾಂಚಿ ಪುರುಷೋತ್ತಮ, ಟ್ರಸ್ಟಿ ಲಕ್ಷ್ಮೀಕಾಂತ, ಮಹದೇವ ಮೊದಲಾದವರು ಸೋಮಣ್ಣ  ಅವರನ್ನು ಸನ್ಮಾನಿಸಿದರು.

andolanait

Recent Posts

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

7 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

19 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

15 hours ago