ಜಿಲ್ಲೆಗಳು

ನನ್ನ ಹೋರಾಟದ ಹಿಂದೆ ನೂರಾರು ಕೈಗಳು, ಕಣ್ಣುಗಳು, ಹೃದಯಗಳ ಬೆಂಬಲವಿದೆ- ಪದ್ಮಶ್ರೀ ಸೋಮಣ್ಣ

ಮೈಸೂರು : ನನ್ನ ಹೋರಾಟದ ಹಿಂದೆ ನೂರಾರು ಕೈಗಳು, ಕಣ್ಣುಗಳು ಹಾಗೂ ಹೃದಯಗಳ ಬೆಂಬಲವಿದೆ ಎಂದು ಈ ಬಾರಿಯ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಆದಿವಾಸಿ ನಾಯಕ ಎಚ್.ಡಿ. ಕೋಟೆ ತಾಲೂಕು ಮೊತ್ತ ಹಾಡಿಯ ಸೋಮಣ್ಣ ಹೇಳಿದರು.

ಕುವೆಂಪುನಗರದ ಕೆ ಬ್ಲಾಕಿನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಕಲ್ಪತರು ಚಾರಿಟಬಲ್ ಟ್ರಸ್ಟಿನಿಂದ ಭಾನುವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಆಗಷ್ಟೇ ಜೀತದಿಂದ ವಿಮುಕ್ತನಾಗಿದ್ದ ನಾನು ಮೊದಲಿಗೆ ನನ್ನ ಹೋರಾಟ ದಲಿತ ಸಂಘರ್ಷ ಸಮಿತಿಯ ಮೂಲಕ ಆರಂಭವಾಯಿತು. ಚಾ. ನಂಜುಂಡಮೂರ್ತಿ, ಬೆಟ್ಟಯ್ಯ ಕೋಟೆ ಅವರೊಂದಿಗೆ ಸೇರಿ ಹೋರಾಟಕ್ಕಿಳಿದೆ.

ನಂತರ ಕ್ಷೀರಸಾಗರ ಜೊತೆಯಾದರು. ಈ ಹೋರಾಟದಲ್ಲಿ ನೂರಾರು ಕೈಗಳು, ಕಣ್ಣುಗಳು, ಹೃದಯಗಳು ಬೆಂಬಲಿಸಿದ್ದರಿಂದ ಇಲ್ಲಿಯವರೆಗೆ ಬರಲು ಸಾಧ್ಯವಾಯಿತು ಎಂದರು.

ಕಳೆದ ಐದು ದಶಕಗಳಿಂದ ಆದಿವಾಸಿಗಳ ಹಕ್ಕಗಳಿಗಾಗಿ ಹೋರಾಟ ಮಾಡುತ್ತಾ ಬಂದರೂ ಇನ್ನೂ ಹಲವಾರು ಸಮಸ್ಯೆಗಳು ಹಾಗೆಯೇ ಉಳಿದಿವೆ. ಅರಣ್ಯ ಹಕ್ಕು ಕಾಯ್ದೆ ಸಮರ್ಪಕವಾಗಿ ಜಾರಿಯಾಗಬೇಕು.

ಆದಿವಾಸಿಗಳಿಗೆ ಒಳ ಮೀಸಲಾತಿ ನೀಡಬೇಕು. ಆದಿವಾಸಿಗಳ ಮಕ್ಕಳ ಕಲಿಕೆಗೆ ಪ್ರತ್ಯೇಕ ವಿವಿ ಸ್ಥಾಪಿಸಬೇಕು. ಈ ಮಕ್ಕಳು ಕೂಡ ಪಿಎಚ್.ಡಿ. ಪಡೆಯುವ ವಾತಾವರಣ ನಿರ್ಮಾಣವಾಗಬೇಕು ಎಂದು ಅವರು ಆಶಿಸಿದರು.

ಇದೇ ಸಂದರ್ಭದಲ್ಲಿ ಸೋಮಣ್ಣ ಅವರು ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಟ್ರಸ್ಟಿನ ಅಧ್ಯಕ್ಷ ಡಾ. ಅಮ್ಮಸಂದ್ರ ಸುರೇಶ್, ಕಾರ್ಯದರ್ಶಿ ಜಗದೀಶ್ ಆರ್. ತುಂಗಾ, ಉಪಾದ್ಯಕ್ಷ ಪಿ. ಕುಮಾರ್, ಖಜಾಂಚಿ ಪುರುಷೋತ್ತಮ, ಟ್ರಸ್ಟಿ ಲಕ್ಷ್ಮೀಕಾಂತ, ಮಹದೇವ ಮೊದಲಾದವರು ಸೋಮಣ್ಣ  ಅವರನ್ನು ಸನ್ಮಾನಿಸಿದರು.

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

6 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

7 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

7 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

7 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

9 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

9 hours ago