ಜಿಲ್ಲೆಗಳು

ಬೆನಕನ ಅಮಾವಾಸ್ಯೆ : ಬೆಟ್ಟದಲ್ಲಿ ಮಾದಪ್ಪನಿಗೆ ಕುಂಭಾಭಿಷೇಕ

ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆ ಹಾಗೂ ಬೆನಕನ ಅಮಾವಾಸ್ಯೆ ಪ್ರಯುಕ್ತ ಶನಿವಾರ ಸಾಲೂರು ಬೃಹಾನ್ಮಠದ ಅಧ್ಯಕ್ಷ ವಿದ್ವಾನ್ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಸ್ವಾಮಿಗೆ ಕುಂಭಾಭಿಷೇಕವನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.

ಬೆನಕನ ಅಮಾವಾಸ್ಯೆ ಹಿನ್ನೆಲೆ ದೇಗುಲ ಗರ್ಭಗುಡಿ ಸೇರಿದಂತೆ ದೇವಸ್ಥಾನದ ಹೊರಾಂಗಣ ಬಸವ, ರುದ್ರಾಕ್ಷಿ ಹಾಗೂ ಹುಲಿವಾಹನದ ಉತ್ಸವ ವಾಹನಗಳನ್ನು ವಿವಿಧ ಪುಷ್ಪ ಹಾಗೂ ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ಸಾಂಪ್ರದಾಯದಂತೆ ಬೇಡಗಂಪಣ ಅರ್ಚಕರಿಂದ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಹಾಗೂ ಕುಂಭಾಭಿಷೇಕವನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.

ಎಣ್ಣೆ ಮಜ್ಜನ ಸೇವೆ: ಬೆನಕನ ಅಮಾವಾಸ್ಯೆಯಿಂದಲೇ ಶುಕ್ರವಾರ ರಾತ್ರಿ ಮಾದಪ್ಪನ ಸನ್ನಿಧಿಯಲ್ಲಿ ಸ್ವಾಮಿಗೆ ಬೇಡಗಂಪಣ ಅರ್ಚಕ ವೃಂದದವರಿಂದ ಎಣ್ಣೆ ಮಜ್ಜನ ಸೇವೆಯನ್ನು ನೆರವೇರಿಸಲಾಯಿತು. ಶನಿವಾರ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮುಂಜಾನೆ 3.30 6ರವರೆಗೆ ವಿಶೇಷ ಪೂಜೆಯನ್ನು ಸಲ್ಲಿಸುವುದರ ಮೂಲಕ 108 ಬೇಡಗಂಪಣ ಅರ್ಚಕರಿಂದ ಮಾದಪ್ಪನಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕ ಕುಂಭಾಭಿಷೇಕವನ್ನು ನೆರವೇರಿಸಲಾಯಿತು.

ಶನಿವಾರ ಬೆಳಗ್ಗೆ 9:30 ರಲ್ಲಿ ಬೇಡಗಂಪಣ ಸಮುದಾಯದ 108 ಅರ್ಚಕರು ಮಂಗಳವಾದ್ಯ ಸತ್ತಿಗೆ ಸೂರಪಾನಿ, ಛತ್ರಿ ಚಾಮರದೊಂದಿಗೆ ದೇಗುಲದ ಸಮೀಪವಿರುವ ಮಜ್ಜನ ಬಾವಿಗೆ ತೆರಳಿ ಧಾರ್ಮಿಕ ವಿಧಿ ವಿಧಾನದ ಮೂಲಕ ಶಿವ ಪಾರ್ವತಿ ವಿಗ್ರಹ ಮೂರ್ತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಕಳಸಗಳಿಗೆ ನೀರು ತುಂಬಿ ಪೂಜೆಯನ್ನು ಸಲ್ಲಿಸಿದ್ದ 108 ಕುಂಭ ಕಳಸವನ್ನು ಹೊತ್ತ ಅರ್ಚಕರು ಮೆರವಣಿಯ ಮೂಲಕ ದೇಗುಲಕ್ಕೆ ಆಗಮಿಸಿ ಪ್ರದಕ್ಷಿಣೆ ಹಾಕಿದರು. ನಂತರ ಕುಂಭ ಕಳಸವನ್ನು ಗರ್ಭಗುಡಿಗೆ ತಂದು ವಿಶೇಷ ಪೂಜೆಯನ್ನು ಸಲ್ಲಿಸಿ ಸ್ವಾಮಿಗೆ ಅಭಿಷೇಕವನ್ನು ನೆರವೇರಿಸಿ ಮಹಾ ಮಂಗಳಾರತಿ ಬೆಳಗಿಸುವುದರ ಮೂಲಕ ಕುಂಭಾಭಿಷೇಕವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ಪ್ರಧಾನ ಆಗಮಿಕ ಕರವೀರ ಸ್ವಾಮಿ, ಲೆಕ್ಕಾಧಿಕ್ಷಕ ಪ್ರವೀಣ್ ಪಾಟೀಲ್, ದ್ವಿತೀಯ ದರ್ಜೆ ಸಹಾಯಕ ಮಹಾದೇವಸ್ವಾಮಿ ಪ್ರಾಧಿಕಾರದ ನೌಕರರು ದೇಗುಲದ ಸಿಬ್ಬಂದಿಗಳು ಹಾಜರಿದ್ದರು.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

6 hours ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

9 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

9 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

9 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತ ಮಹಿಳೆಯರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

9 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

9 hours ago