ಜಿಲ್ಲೆಗಳು

ಬೆನಕನ ಅಮಾವಾಸ್ಯೆ : ಬೆಟ್ಟದಲ್ಲಿ ಮಾದಪ್ಪನಿಗೆ ಕುಂಭಾಭಿಷೇಕ

ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆ ಹಾಗೂ ಬೆನಕನ ಅಮಾವಾಸ್ಯೆ ಪ್ರಯುಕ್ತ ಶನಿವಾರ ಸಾಲೂರು ಬೃಹಾನ್ಮಠದ ಅಧ್ಯಕ್ಷ ವಿದ್ವಾನ್ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಸ್ವಾಮಿಗೆ ಕುಂಭಾಭಿಷೇಕವನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.

ಬೆನಕನ ಅಮಾವಾಸ್ಯೆ ಹಿನ್ನೆಲೆ ದೇಗುಲ ಗರ್ಭಗುಡಿ ಸೇರಿದಂತೆ ದೇವಸ್ಥಾನದ ಹೊರಾಂಗಣ ಬಸವ, ರುದ್ರಾಕ್ಷಿ ಹಾಗೂ ಹುಲಿವಾಹನದ ಉತ್ಸವ ವಾಹನಗಳನ್ನು ವಿವಿಧ ಪುಷ್ಪ ಹಾಗೂ ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ಸಾಂಪ್ರದಾಯದಂತೆ ಬೇಡಗಂಪಣ ಅರ್ಚಕರಿಂದ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಹಾಗೂ ಕುಂಭಾಭಿಷೇಕವನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.

ಎಣ್ಣೆ ಮಜ್ಜನ ಸೇವೆ: ಬೆನಕನ ಅಮಾವಾಸ್ಯೆಯಿಂದಲೇ ಶುಕ್ರವಾರ ರಾತ್ರಿ ಮಾದಪ್ಪನ ಸನ್ನಿಧಿಯಲ್ಲಿ ಸ್ವಾಮಿಗೆ ಬೇಡಗಂಪಣ ಅರ್ಚಕ ವೃಂದದವರಿಂದ ಎಣ್ಣೆ ಮಜ್ಜನ ಸೇವೆಯನ್ನು ನೆರವೇರಿಸಲಾಯಿತು. ಶನಿವಾರ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮುಂಜಾನೆ 3.30 6ರವರೆಗೆ ವಿಶೇಷ ಪೂಜೆಯನ್ನು ಸಲ್ಲಿಸುವುದರ ಮೂಲಕ 108 ಬೇಡಗಂಪಣ ಅರ್ಚಕರಿಂದ ಮಾದಪ್ಪನಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕ ಕುಂಭಾಭಿಷೇಕವನ್ನು ನೆರವೇರಿಸಲಾಯಿತು.

ಶನಿವಾರ ಬೆಳಗ್ಗೆ 9:30 ರಲ್ಲಿ ಬೇಡಗಂಪಣ ಸಮುದಾಯದ 108 ಅರ್ಚಕರು ಮಂಗಳವಾದ್ಯ ಸತ್ತಿಗೆ ಸೂರಪಾನಿ, ಛತ್ರಿ ಚಾಮರದೊಂದಿಗೆ ದೇಗುಲದ ಸಮೀಪವಿರುವ ಮಜ್ಜನ ಬಾವಿಗೆ ತೆರಳಿ ಧಾರ್ಮಿಕ ವಿಧಿ ವಿಧಾನದ ಮೂಲಕ ಶಿವ ಪಾರ್ವತಿ ವಿಗ್ರಹ ಮೂರ್ತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಕಳಸಗಳಿಗೆ ನೀರು ತುಂಬಿ ಪೂಜೆಯನ್ನು ಸಲ್ಲಿಸಿದ್ದ 108 ಕುಂಭ ಕಳಸವನ್ನು ಹೊತ್ತ ಅರ್ಚಕರು ಮೆರವಣಿಯ ಮೂಲಕ ದೇಗುಲಕ್ಕೆ ಆಗಮಿಸಿ ಪ್ರದಕ್ಷಿಣೆ ಹಾಕಿದರು. ನಂತರ ಕುಂಭ ಕಳಸವನ್ನು ಗರ್ಭಗುಡಿಗೆ ತಂದು ವಿಶೇಷ ಪೂಜೆಯನ್ನು ಸಲ್ಲಿಸಿ ಸ್ವಾಮಿಗೆ ಅಭಿಷೇಕವನ್ನು ನೆರವೇರಿಸಿ ಮಹಾ ಮಂಗಳಾರತಿ ಬೆಳಗಿಸುವುದರ ಮೂಲಕ ಕುಂಭಾಭಿಷೇಕವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ಪ್ರಧಾನ ಆಗಮಿಕ ಕರವೀರ ಸ್ವಾಮಿ, ಲೆಕ್ಕಾಧಿಕ್ಷಕ ಪ್ರವೀಣ್ ಪಾಟೀಲ್, ದ್ವಿತೀಯ ದರ್ಜೆ ಸಹಾಯಕ ಮಹಾದೇವಸ್ವಾಮಿ ಪ್ರಾಧಿಕಾರದ ನೌಕರರು ದೇಗುಲದ ಸಿಬ್ಬಂದಿಗಳು ಹಾಜರಿದ್ದರು.

andolanait

Recent Posts

ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಸಾಂಸ್ಕೃತಿಕ ನಗರಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ದಸರಾ ಕೆಲಸಗಳು ಭರದಿಂದ ಸಾಗುತ್ತಿವೆ. ನಾಡಹಬ್ಬ…

14 mins ago

ಕಾಶ್ಮೀರದಲ್ಲಿ ಮತ್ತೆ 370ನೇ ವಿಧಿ ಮರುಸ್ಥಾಪಿಸಲು ಕಾಂಗ್ರೆಸ್ ಯತ್ನಿಸುತ್ತಿದೆ: ಅಮಿತ್‌ ಶಾ ಗಂಭೀರ ಆರೋಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ಸ್ಥಾಪಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌…

31 mins ago

ಏತ ನೀರಾವರಿ ಪುನಶ್ಚೇತನ ಕಾಮಗಾರಿಗೆ ಪರೀಕ್ಷಾರ್ಥ ಚಾಲನೆ ನೀಡಿದ ಡಿ.ಕೆ.ಶಿವಕುಮಾರ್‌

ರಾಮನಗರ: ಕನಕಪುರ ತಾಲ್ಲೂಕಿನ ಮೂಲೆಗುಂದಿ ಗ್ರಾಮದಲ್ಲಿ ಅರ್ಕಾವತಿ ಬಲದಂಡೆಯ ಏತ ನೀರಾವರಿ ಯೋಜನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಪರೀಕ್ಷಾರ್ಥ ಚಾಲನೆ…

44 mins ago

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

9 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

9 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

10 hours ago