ಜಿಲ್ಲೆಗಳು

ಬೆನಕನ ಅಮಾವಾಸ್ಯೆ : ಬೆಟ್ಟದಲ್ಲಿ ಮಾದಪ್ಪನಿಗೆ ಕುಂಭಾಭಿಷೇಕ

ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆ ಹಾಗೂ ಬೆನಕನ ಅಮಾವಾಸ್ಯೆ ಪ್ರಯುಕ್ತ ಶನಿವಾರ ಸಾಲೂರು ಬೃಹಾನ್ಮಠದ ಅಧ್ಯಕ್ಷ ವಿದ್ವಾನ್ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಸ್ವಾಮಿಗೆ ಕುಂಭಾಭಿಷೇಕವನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.

ಬೆನಕನ ಅಮಾವಾಸ್ಯೆ ಹಿನ್ನೆಲೆ ದೇಗುಲ ಗರ್ಭಗುಡಿ ಸೇರಿದಂತೆ ದೇವಸ್ಥಾನದ ಹೊರಾಂಗಣ ಬಸವ, ರುದ್ರಾಕ್ಷಿ ಹಾಗೂ ಹುಲಿವಾಹನದ ಉತ್ಸವ ವಾಹನಗಳನ್ನು ವಿವಿಧ ಪುಷ್ಪ ಹಾಗೂ ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ಸಾಂಪ್ರದಾಯದಂತೆ ಬೇಡಗಂಪಣ ಅರ್ಚಕರಿಂದ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಹಾಗೂ ಕುಂಭಾಭಿಷೇಕವನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.

ಎಣ್ಣೆ ಮಜ್ಜನ ಸೇವೆ: ಬೆನಕನ ಅಮಾವಾಸ್ಯೆಯಿಂದಲೇ ಶುಕ್ರವಾರ ರಾತ್ರಿ ಮಾದಪ್ಪನ ಸನ್ನಿಧಿಯಲ್ಲಿ ಸ್ವಾಮಿಗೆ ಬೇಡಗಂಪಣ ಅರ್ಚಕ ವೃಂದದವರಿಂದ ಎಣ್ಣೆ ಮಜ್ಜನ ಸೇವೆಯನ್ನು ನೆರವೇರಿಸಲಾಯಿತು. ಶನಿವಾರ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮುಂಜಾನೆ 3.30 6ರವರೆಗೆ ವಿಶೇಷ ಪೂಜೆಯನ್ನು ಸಲ್ಲಿಸುವುದರ ಮೂಲಕ 108 ಬೇಡಗಂಪಣ ಅರ್ಚಕರಿಂದ ಮಾದಪ್ಪನಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕ ಕುಂಭಾಭಿಷೇಕವನ್ನು ನೆರವೇರಿಸಲಾಯಿತು.

ಶನಿವಾರ ಬೆಳಗ್ಗೆ 9:30 ರಲ್ಲಿ ಬೇಡಗಂಪಣ ಸಮುದಾಯದ 108 ಅರ್ಚಕರು ಮಂಗಳವಾದ್ಯ ಸತ್ತಿಗೆ ಸೂರಪಾನಿ, ಛತ್ರಿ ಚಾಮರದೊಂದಿಗೆ ದೇಗುಲದ ಸಮೀಪವಿರುವ ಮಜ್ಜನ ಬಾವಿಗೆ ತೆರಳಿ ಧಾರ್ಮಿಕ ವಿಧಿ ವಿಧಾನದ ಮೂಲಕ ಶಿವ ಪಾರ್ವತಿ ವಿಗ್ರಹ ಮೂರ್ತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಕಳಸಗಳಿಗೆ ನೀರು ತುಂಬಿ ಪೂಜೆಯನ್ನು ಸಲ್ಲಿಸಿದ್ದ 108 ಕುಂಭ ಕಳಸವನ್ನು ಹೊತ್ತ ಅರ್ಚಕರು ಮೆರವಣಿಯ ಮೂಲಕ ದೇಗುಲಕ್ಕೆ ಆಗಮಿಸಿ ಪ್ರದಕ್ಷಿಣೆ ಹಾಕಿದರು. ನಂತರ ಕುಂಭ ಕಳಸವನ್ನು ಗರ್ಭಗುಡಿಗೆ ತಂದು ವಿಶೇಷ ಪೂಜೆಯನ್ನು ಸಲ್ಲಿಸಿ ಸ್ವಾಮಿಗೆ ಅಭಿಷೇಕವನ್ನು ನೆರವೇರಿಸಿ ಮಹಾ ಮಂಗಳಾರತಿ ಬೆಳಗಿಸುವುದರ ಮೂಲಕ ಕುಂಭಾಭಿಷೇಕವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ಪ್ರಧಾನ ಆಗಮಿಕ ಕರವೀರ ಸ್ವಾಮಿ, ಲೆಕ್ಕಾಧಿಕ್ಷಕ ಪ್ರವೀಣ್ ಪಾಟೀಲ್, ದ್ವಿತೀಯ ದರ್ಜೆ ಸಹಾಯಕ ಮಹಾದೇವಸ್ವಾಮಿ ಪ್ರಾಧಿಕಾರದ ನೌಕರರು ದೇಗುಲದ ಸಿಬ್ಬಂದಿಗಳು ಹಾಜರಿದ್ದರು.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

6 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

6 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

7 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

7 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

8 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

9 hours ago