ಜಿಲ್ಲೆಗಳು

ಬೆನಕನ ಅಮಾವಾಸ್ಯೆ : ಬೆಟ್ಟದಲ್ಲಿ ಮಾದಪ್ಪನಿಗೆ ಕುಂಭಾಭಿಷೇಕ

ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆ ಹಾಗೂ ಬೆನಕನ ಅಮಾವಾಸ್ಯೆ ಪ್ರಯುಕ್ತ ಶನಿವಾರ ಸಾಲೂರು ಬೃಹಾನ್ಮಠದ ಅಧ್ಯಕ್ಷ ವಿದ್ವಾನ್ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಸ್ವಾಮಿಗೆ ಕುಂಭಾಭಿಷೇಕವನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.

ಬೆನಕನ ಅಮಾವಾಸ್ಯೆ ಹಿನ್ನೆಲೆ ದೇಗುಲ ಗರ್ಭಗುಡಿ ಸೇರಿದಂತೆ ದೇವಸ್ಥಾನದ ಹೊರಾಂಗಣ ಬಸವ, ರುದ್ರಾಕ್ಷಿ ಹಾಗೂ ಹುಲಿವಾಹನದ ಉತ್ಸವ ವಾಹನಗಳನ್ನು ವಿವಿಧ ಪುಷ್ಪ ಹಾಗೂ ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ಸಾಂಪ್ರದಾಯದಂತೆ ಬೇಡಗಂಪಣ ಅರ್ಚಕರಿಂದ ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ ಹಾಗೂ ಕುಂಭಾಭಿಷೇಕವನ್ನು ಸಂಪ್ರದಾಯದಂತೆ ನೆರವೇರಿಸಲಾಯಿತು.

ಎಣ್ಣೆ ಮಜ್ಜನ ಸೇವೆ: ಬೆನಕನ ಅಮಾವಾಸ್ಯೆಯಿಂದಲೇ ಶುಕ್ರವಾರ ರಾತ್ರಿ ಮಾದಪ್ಪನ ಸನ್ನಿಧಿಯಲ್ಲಿ ಸ್ವಾಮಿಗೆ ಬೇಡಗಂಪಣ ಅರ್ಚಕ ವೃಂದದವರಿಂದ ಎಣ್ಣೆ ಮಜ್ಜನ ಸೇವೆಯನ್ನು ನೆರವೇರಿಸಲಾಯಿತು. ಶನಿವಾರ ಶ್ರಾವಣ ಮಾಸ ಮುಕ್ತಾಯವಾದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮುಂಜಾನೆ 3.30 6ರವರೆಗೆ ವಿಶೇಷ ಪೂಜೆಯನ್ನು ಸಲ್ಲಿಸುವುದರ ಮೂಲಕ 108 ಬೇಡಗಂಪಣ ಅರ್ಚಕರಿಂದ ಮಾದಪ್ಪನಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕ ಕುಂಭಾಭಿಷೇಕವನ್ನು ನೆರವೇರಿಸಲಾಯಿತು.

ಶನಿವಾರ ಬೆಳಗ್ಗೆ 9:30 ರಲ್ಲಿ ಬೇಡಗಂಪಣ ಸಮುದಾಯದ 108 ಅರ್ಚಕರು ಮಂಗಳವಾದ್ಯ ಸತ್ತಿಗೆ ಸೂರಪಾನಿ, ಛತ್ರಿ ಚಾಮರದೊಂದಿಗೆ ದೇಗುಲದ ಸಮೀಪವಿರುವ ಮಜ್ಜನ ಬಾವಿಗೆ ತೆರಳಿ ಧಾರ್ಮಿಕ ವಿಧಿ ವಿಧಾನದ ಮೂಲಕ ಶಿವ ಪಾರ್ವತಿ ವಿಗ್ರಹ ಮೂರ್ತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬಳಿಕ ಕಳಸಗಳಿಗೆ ನೀರು ತುಂಬಿ ಪೂಜೆಯನ್ನು ಸಲ್ಲಿಸಿದ್ದ 108 ಕುಂಭ ಕಳಸವನ್ನು ಹೊತ್ತ ಅರ್ಚಕರು ಮೆರವಣಿಯ ಮೂಲಕ ದೇಗುಲಕ್ಕೆ ಆಗಮಿಸಿ ಪ್ರದಕ್ಷಿಣೆ ಹಾಕಿದರು. ನಂತರ ಕುಂಭ ಕಳಸವನ್ನು ಗರ್ಭಗುಡಿಗೆ ತಂದು ವಿಶೇಷ ಪೂಜೆಯನ್ನು ಸಲ್ಲಿಸಿ ಸ್ವಾಮಿಗೆ ಅಭಿಷೇಕವನ್ನು ನೆರವೇರಿಸಿ ಮಹಾ ಮಂಗಳಾರತಿ ಬೆಳಗಿಸುವುದರ ಮೂಲಕ ಕುಂಭಾಭಿಷೇಕವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪ ಕಾರ್ಯದರ್ಶಿ ಬಸವರಾಜು, ಪ್ರಧಾನ ಆಗಮಿಕ ಕರವೀರ ಸ್ವಾಮಿ, ಲೆಕ್ಕಾಧಿಕ್ಷಕ ಪ್ರವೀಣ್ ಪಾಟೀಲ್, ದ್ವಿತೀಯ ದರ್ಜೆ ಸಹಾಯಕ ಮಹಾದೇವಸ್ವಾಮಿ ಪ್ರಾಧಿಕಾರದ ನೌಕರರು ದೇಗುಲದ ಸಿಬ್ಬಂದಿಗಳು ಹಾಜರಿದ್ದರು.

andolanait

Recent Posts

ಹುಣಸೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…

9 hours ago

ಹನೂರು| ಕೆಸರಿನಲ್ಲಿ ಸಿಲುಕಿ ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆ ಫಲಿಸದೇ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…

9 hours ago

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…

11 hours ago

24 ಗಂಟೆಯ ಒಳಗಡೆ ಉತ್ತರಿಸಿ: ಮಲ್ಲಿಕಾರ್ಜುನ ಖರ್ಗೆಗೆ ಆಯೋಗ ನೋಟಿಸ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಕ್ಕಾಗಿ ಚುನಾವಣಾ ಆಯೋಗವು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ…

11 hours ago

ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.…

12 hours ago

ಧಾರವಾಡ ಆಕಾಶವಾಣಿ ಕೇಂದ್ರ ಸ್ಥಳಾಂತರಿಸದಂತೆ ಅಶ್ವಿನಿ ವೈಷ್ಣವ್‌ ಆದೇಶ

ನವದೆಹಲಿ: ಧಾರವಾಡ ಆಕಾಶವಾಣಿ ಪ್ರಾದೇಶಿಕ ಕೇಂದ್ರ ಸ್ಥಳಾಂತರ ನಿರ್ಧಾರವನ್ನು ಪ್ರಸಾರ ಭಾರತಿ ಹಿಂತೆಗೆದುಕೊಂಡಿದೆ. ಉತ್ತರ ಕರ್ನಾಟಕ ಜನರ ಒತ್ತಾಸೆ, ಅಭಿಲಾಷೆಯಂತೆ…

13 hours ago