ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭತ್ತದ ಬೆಳೆಯ ಬೆಂಕಿ ರೋಗದ ನಿಯಂತ್ರಣಕ್ಕಾಗಿ ಟ್ರೈಸೈಕ್ಲೋಜೋಲ್ ೬ ಗ್ರಾಂ ಅನ್ನು 10 ಲೀಟರ್ ನೀರಿನಲ್ಲಿ ಬೆರೆಸಿ 1 ಎಕರೆಗೆ 120ರಿಂದ 150 ಗ್ರಾಂ ವರೆಗೆ ಅಥವಾ ಕಾರ್ಬನ್ ಡೈಜಿಂ ಔಷಧವನ್ನು ಪ್ರತಿ ಲೀಟರಿಗೆ 1 ಗ್ರಾಂ ನಂತೆ ಬೆರೆಸಿ ಸಿಂಪಡಿಸಬೇಕು . ಸಿಂಪಡಿಸುವಾಗ ಗದ್ದೆಯಲ್ಲಿನ ನೀರನ್ನು ಖಾಲಿ ಮಾಡಿ ಸಿಂಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.
ಫಸಲ್ ಬಿಮಾ ಯೋಜನೆಗೆ ಒಳಪಡಲು ಸಲಹೆ
ನಂಜನಗೂಡು: 2020-21 ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯಲ್ಲಿ ದಾಖಲಾತಿಗಳನ್ನು ಸಮರ್ಪಕವಾಗಿ ನೀಡಲಾಗದೇ ತಿರಸ್ಕೃತಗೊಂಡವರ ಪಟ್ಟಿಯನ್ನು ಪ್ರಕಟಿಸಲಾಗಿದ್ದು , ಅಂಥವರು ಇನ್ನು 15 ದಿನಗಳ ಒಳಗಾಗಿ ತಾವು ಬೆಳೆದಿರುವ ಬೆಳೆಗಳ ಕುರಿತಾದ ಸಮಗ್ರ ಮಾಹಿತಿಯನ್ನು ತಾಲ್ಲೂಕು ಕೃಷಿ ಇಲಾಖೆಗೆ ಸಲ್ಲಿಸಿ ಫಸಲ್ ಬೀಮಾ ಯೋಜನೆಯ ಫಲಾನುಭವಿಗಳಾಗುವಂತೆ ಅವರು ಮನವಿ ಮಾಡಿದ್ದಾರೆ.
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…
ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…