ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭತ್ತದ ಬೆಳೆಯ ಬೆಂಕಿ ರೋಗದ ನಿಯಂತ್ರಣಕ್ಕಾಗಿ ಟ್ರೈಸೈಕ್ಲೋಜೋಲ್ ೬ ಗ್ರಾಂ ಅನ್ನು 10 ಲೀಟರ್ ನೀರಿನಲ್ಲಿ ಬೆರೆಸಿ 1 ಎಕರೆಗೆ 120ರಿಂದ 150 ಗ್ರಾಂ ವರೆಗೆ ಅಥವಾ ಕಾರ್ಬನ್ ಡೈಜಿಂ ಔಷಧವನ್ನು ಪ್ರತಿ ಲೀಟರಿಗೆ 1 ಗ್ರಾಂ ನಂತೆ ಬೆರೆಸಿ ಸಿಂಪಡಿಸಬೇಕು . ಸಿಂಪಡಿಸುವಾಗ ಗದ್ದೆಯಲ್ಲಿನ ನೀರನ್ನು ಖಾಲಿ ಮಾಡಿ ಸಿಂಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.
ಫಸಲ್ ಬಿಮಾ ಯೋಜನೆಗೆ ಒಳಪಡಲು ಸಲಹೆ
ನಂಜನಗೂಡು: 2020-21 ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯಲ್ಲಿ ದಾಖಲಾತಿಗಳನ್ನು ಸಮರ್ಪಕವಾಗಿ ನೀಡಲಾಗದೇ ತಿರಸ್ಕೃತಗೊಂಡವರ ಪಟ್ಟಿಯನ್ನು ಪ್ರಕಟಿಸಲಾಗಿದ್ದು , ಅಂಥವರು ಇನ್ನು 15 ದಿನಗಳ ಒಳಗಾಗಿ ತಾವು ಬೆಳೆದಿರುವ ಬೆಳೆಗಳ ಕುರಿತಾದ ಸಮಗ್ರ ಮಾಹಿತಿಯನ್ನು ತಾಲ್ಲೂಕು ಕೃಷಿ ಇಲಾಖೆಗೆ ಸಲ್ಲಿಸಿ ಫಸಲ್ ಬೀಮಾ ಯೋಜನೆಯ ಫಲಾನುಭವಿಗಳಾಗುವಂತೆ ಅವರು ಮನವಿ ಮಾಡಿದ್ದಾರೆ.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…