ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭತ್ತದ ಬೆಳೆಯ ಬೆಂಕಿ ರೋಗದ ನಿಯಂತ್ರಣಕ್ಕಾಗಿ ಟ್ರೈಸೈಕ್ಲೋಜೋಲ್ ೬ ಗ್ರಾಂ ಅನ್ನು 10 ಲೀಟರ್ ನೀರಿನಲ್ಲಿ ಬೆರೆಸಿ 1 ಎಕರೆಗೆ 120ರಿಂದ 150 ಗ್ರಾಂ ವರೆಗೆ ಅಥವಾ ಕಾರ್ಬನ್ ಡೈಜಿಂ ಔಷಧವನ್ನು ಪ್ರತಿ ಲೀಟರಿಗೆ 1 ಗ್ರಾಂ ನಂತೆ ಬೆರೆಸಿ ಸಿಂಪಡಿಸಬೇಕು . ಸಿಂಪಡಿಸುವಾಗ ಗದ್ದೆಯಲ್ಲಿನ ನೀರನ್ನು ಖಾಲಿ ಮಾಡಿ ಸಿಂಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.
ಫಸಲ್ ಬಿಮಾ ಯೋಜನೆಗೆ ಒಳಪಡಲು ಸಲಹೆ
ನಂಜನಗೂಡು: 2020-21 ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯಲ್ಲಿ ದಾಖಲಾತಿಗಳನ್ನು ಸಮರ್ಪಕವಾಗಿ ನೀಡಲಾಗದೇ ತಿರಸ್ಕೃತಗೊಂಡವರ ಪಟ್ಟಿಯನ್ನು ಪ್ರಕಟಿಸಲಾಗಿದ್ದು , ಅಂಥವರು ಇನ್ನು 15 ದಿನಗಳ ಒಳಗಾಗಿ ತಾವು ಬೆಳೆದಿರುವ ಬೆಳೆಗಳ ಕುರಿತಾದ ಸಮಗ್ರ ಮಾಹಿತಿಯನ್ನು ತಾಲ್ಲೂಕು ಕೃಷಿ ಇಲಾಖೆಗೆ ಸಲ್ಲಿಸಿ ಫಸಲ್ ಬೀಮಾ ಯೋಜನೆಯ ಫಲಾನುಭವಿಗಳಾಗುವಂತೆ ಅವರು ಮನವಿ ಮಾಡಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…