ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭತ್ತದ ಬೆಳೆಯ ಬೆಂಕಿ ರೋಗದ ನಿಯಂತ್ರಣಕ್ಕಾಗಿ ಟ್ರೈಸೈಕ್ಲೋಜೋಲ್ ೬ ಗ್ರಾಂ ಅನ್ನು 10 ಲೀಟರ್ ನೀರಿನಲ್ಲಿ ಬೆರೆಸಿ 1 ಎಕರೆಗೆ 120ರಿಂದ 150 ಗ್ರಾಂ ವರೆಗೆ ಅಥವಾ ಕಾರ್ಬನ್ ಡೈಜಿಂ ಔಷಧವನ್ನು ಪ್ರತಿ ಲೀಟರಿಗೆ 1 ಗ್ರಾಂ ನಂತೆ ಬೆರೆಸಿ ಸಿಂಪಡಿಸಬೇಕು . ಸಿಂಪಡಿಸುವಾಗ ಗದ್ದೆಯಲ್ಲಿನ ನೀರನ್ನು ಖಾಲಿ ಮಾಡಿ ಸಿಂಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.
ಫಸಲ್ ಬಿಮಾ ಯೋಜನೆಗೆ ಒಳಪಡಲು ಸಲಹೆ
ನಂಜನಗೂಡು: 2020-21 ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯಲ್ಲಿ ದಾಖಲಾತಿಗಳನ್ನು ಸಮರ್ಪಕವಾಗಿ ನೀಡಲಾಗದೇ ತಿರಸ್ಕೃತಗೊಂಡವರ ಪಟ್ಟಿಯನ್ನು ಪ್ರಕಟಿಸಲಾಗಿದ್ದು , ಅಂಥವರು ಇನ್ನು 15 ದಿನಗಳ ಒಳಗಾಗಿ ತಾವು ಬೆಳೆದಿರುವ ಬೆಳೆಗಳ ಕುರಿತಾದ ಸಮಗ್ರ ಮಾಹಿತಿಯನ್ನು ತಾಲ್ಲೂಕು ಕೃಷಿ ಇಲಾಖೆಗೆ ಸಲ್ಲಿಸಿ ಫಸಲ್ ಬೀಮಾ ಯೋಜನೆಯ ಫಲಾನುಭವಿಗಳಾಗುವಂತೆ ಅವರು ಮನವಿ ಮಾಡಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…