ನಂಜನಗೂಡು: ತಾಲ್ಲೂಕಿನ ಅನೇಕ ಕಡೆ ಭತ್ತದ ಬೆಳೆಗೆ ಬೆಂಕಿ ರೋಗ ರೋಗ ಕಾಣಿಸಿಕೊಂಡಿದ್ದು, ರೋಗ ತಡೆಗೆ ಕೃಷಿ ಇಲಾಖೆ ಸೂಚಿಸಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲ್ಲೂಕು ಕೃಷಿ ಇಲಾಖೆಯ ಅಧಿಕಾರಿ ದೀಪಕ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭತ್ತದ ಬೆಳೆಯ ಬೆಂಕಿ ರೋಗದ ನಿಯಂತ್ರಣಕ್ಕಾಗಿ ಟ್ರೈಸೈಕ್ಲೋಜೋಲ್ ೬ ಗ್ರಾಂ ಅನ್ನು 10 ಲೀಟರ್ ನೀರಿನಲ್ಲಿ ಬೆರೆಸಿ 1 ಎಕರೆಗೆ 120ರಿಂದ 150 ಗ್ರಾಂ ವರೆಗೆ ಅಥವಾ ಕಾರ್ಬನ್ ಡೈಜಿಂ ಔಷಧವನ್ನು ಪ್ರತಿ ಲೀಟರಿಗೆ 1 ಗ್ರಾಂ ನಂತೆ ಬೆರೆಸಿ ಸಿಂಪಡಿಸಬೇಕು . ಸಿಂಪಡಿಸುವಾಗ ಗದ್ದೆಯಲ್ಲಿನ ನೀರನ್ನು ಖಾಲಿ ಮಾಡಿ ಸಿಂಪಡಿಸಬೇಕು ಎಂದು ಅವರು ತಿಳಿಸಿದ್ದಾರೆ.
ಫಸಲ್ ಬಿಮಾ ಯೋಜನೆಗೆ ಒಳಪಡಲು ಸಲಹೆ
ನಂಜನಗೂಡು: 2020-21 ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯಲ್ಲಿ ದಾಖಲಾತಿಗಳನ್ನು ಸಮರ್ಪಕವಾಗಿ ನೀಡಲಾಗದೇ ತಿರಸ್ಕೃತಗೊಂಡವರ ಪಟ್ಟಿಯನ್ನು ಪ್ರಕಟಿಸಲಾಗಿದ್ದು , ಅಂಥವರು ಇನ್ನು 15 ದಿನಗಳ ಒಳಗಾಗಿ ತಾವು ಬೆಳೆದಿರುವ ಬೆಳೆಗಳ ಕುರಿತಾದ ಸಮಗ್ರ ಮಾಹಿತಿಯನ್ನು ತಾಲ್ಲೂಕು ಕೃಷಿ ಇಲಾಖೆಗೆ ಸಲ್ಲಿಸಿ ಫಸಲ್ ಬೀಮಾ ಯೋಜನೆಯ ಫಲಾನುಭವಿಗಳಾಗುವಂತೆ ಅವರು ಮನವಿ ಮಾಡಿದ್ದಾರೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…