ಜಿಲ್ಲೆಗಳು

ಬೆಟ್ಟದಪುರ : ನಿಷೇಧವಿದ್ದರೂ ಜಾನುವಾರು ತಂದ ರೈತರು

ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್‌ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ ಅಂಗವಾಗಿ ದನಗಳ ಜಾತ್ರೆ ಆರಂಭವಾಗಿದೆ.

ಪಿರಿಯಾಪಟ್ಟಣ ಸುತ್ತಮುತ್ತಲಿನ ರೈತರು ದನಗಳನ್ನು ತಂದು ಜಾತ್ರೆಯಲ್ಲಿ ಕಟ್ಟುತ್ತಿದ್ದಾರೆ. ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ಜಾನುವಾರು ಸಂತೆ ಮತ್ತು ಸಾಗಣೆ ಮಾಡುವುದನ್ನು ನಿಷೇಧಿಸಿದೆ. ಆದರೂ ಜಾನುವಾರುಗಳನ್ನು ತರುತ್ತಿರುವುದು ಆತಂಕ ಮೂಡಿಸಿದೆ.

ಈ ಕುರಿತು ರೈತ ಹರದೂರು ಗಿರೀಶ್ ಮಾತನಾಡಿ, ನಾವು ತಾತನ ಕಾಲದಿಂದಲೂ ದನಗಳ ಜಾತ್ರೆಗಳಲ್ಲಿ ದನಗಳನ್ನು ಕಟ್ಟುತ್ತಿದ್ದೇವೆ. ಇದು ನಮ್ಮ ಸಂಪ್ರದಾಯ. ನಾವು ಗೋವುಗಳನ್ನು ಅಲಂಕಾರ ಮಾಡಿ ಸಂತೋಷಕ್ಕಾಗಿ ಕಟ್ಟುತ್ತೇವೆ. ಜಿಲ್ಲಾಡಳಿತ ನಮಗೆ ಕುಡಿಯುವ ನೀರು, ವಿದ್ಯುತ್ ಯಾವುದೇ ಸೌಕರ್ಯಗಳು ಒದಗಿಸಿ ಕೊಟ್ಟಿಲ್ಲ. ಮಾರಾಟ ಮಾಡದಿದ್ದರೂ ತೊಂದರೆ ಇಲ್ಲ, 4 ದಿವಸ ಇದ್ದು ಹೋಗುತ್ತೇವೆ ಎಂದರು.

ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸೋಮಯ್ಯ ಪತ್ರಿಕೆಯೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಚರ್ಮ ಗಂಟು ರೋಗ ಇರುವುದರಿಂದ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದೇವೆ. ತಾಲ್ಲೂಕಿನಲ್ಲಿ 200 ಜಾನುವಾರುಗಳಿಗೆ ಚರ್ಮಗಂಟು ರೋಗ ಕಂಡುಬಂದಿದ್ದು , ಲಸಿಕೆ ನೀಡಿದ್ದೇವೆ. ಇದೊಂದು ಸಾಂಕ್ರಾಮಿಕ ರೋಗವಾಗಿರುವುದರಿಂದ ದನಗಳ ಜಾತ್ರೆಗಳಲ್ಲಿ ದನಗಳಿಗೆ ಹರಡುವ ಸಾಧ್ಯತೆಯಿದೆ. ಆದ್ದರಿಂದ ಡಿಸಿ ಅವರು ದನಗಳ ಜಾತ್ರೆ ನಿಷೇಧ ಮಾಡಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ಮುಖಾಂತರ ಜಾನುವಾರುಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

andolanait

Recent Posts

ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…

29 mins ago

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

3 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

3 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

3 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

3 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

3 hours ago