ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ ಅಂಗವಾಗಿ ದನಗಳ ಜಾತ್ರೆ ಆರಂಭವಾಗಿದೆ.
ಪಿರಿಯಾಪಟ್ಟಣ ಸುತ್ತಮುತ್ತಲಿನ ರೈತರು ದನಗಳನ್ನು ತಂದು ಜಾತ್ರೆಯಲ್ಲಿ ಕಟ್ಟುತ್ತಿದ್ದಾರೆ. ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ಜಾನುವಾರು ಸಂತೆ ಮತ್ತು ಸಾಗಣೆ ಮಾಡುವುದನ್ನು ನಿಷೇಧಿಸಿದೆ. ಆದರೂ ಜಾನುವಾರುಗಳನ್ನು ತರುತ್ತಿರುವುದು ಆತಂಕ ಮೂಡಿಸಿದೆ.
ಈ ಕುರಿತು ರೈತ ಹರದೂರು ಗಿರೀಶ್ ಮಾತನಾಡಿ, ನಾವು ತಾತನ ಕಾಲದಿಂದಲೂ ದನಗಳ ಜಾತ್ರೆಗಳಲ್ಲಿ ದನಗಳನ್ನು ಕಟ್ಟುತ್ತಿದ್ದೇವೆ. ಇದು ನಮ್ಮ ಸಂಪ್ರದಾಯ. ನಾವು ಗೋವುಗಳನ್ನು ಅಲಂಕಾರ ಮಾಡಿ ಸಂತೋಷಕ್ಕಾಗಿ ಕಟ್ಟುತ್ತೇವೆ. ಜಿಲ್ಲಾಡಳಿತ ನಮಗೆ ಕುಡಿಯುವ ನೀರು, ವಿದ್ಯುತ್ ಯಾವುದೇ ಸೌಕರ್ಯಗಳು ಒದಗಿಸಿ ಕೊಟ್ಟಿಲ್ಲ. ಮಾರಾಟ ಮಾಡದಿದ್ದರೂ ತೊಂದರೆ ಇಲ್ಲ, 4 ದಿವಸ ಇದ್ದು ಹೋಗುತ್ತೇವೆ ಎಂದರು.
ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸೋಮಯ್ಯ ಪತ್ರಿಕೆಯೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಚರ್ಮ ಗಂಟು ರೋಗ ಇರುವುದರಿಂದ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದೇವೆ. ತಾಲ್ಲೂಕಿನಲ್ಲಿ 200 ಜಾನುವಾರುಗಳಿಗೆ ಚರ್ಮಗಂಟು ರೋಗ ಕಂಡುಬಂದಿದ್ದು , ಲಸಿಕೆ ನೀಡಿದ್ದೇವೆ. ಇದೊಂದು ಸಾಂಕ್ರಾಮಿಕ ರೋಗವಾಗಿರುವುದರಿಂದ ದನಗಳ ಜಾತ್ರೆಗಳಲ್ಲಿ ದನಗಳಿಗೆ ಹರಡುವ ಸಾಧ್ಯತೆಯಿದೆ. ಆದ್ದರಿಂದ ಡಿಸಿ ಅವರು ದನಗಳ ಜಾತ್ರೆ ನಿಷೇಧ ಮಾಡಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ಮುಖಾಂತರ ಜಾನುವಾರುಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…