ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ ಅಂಗವಾಗಿ ದನಗಳ ಜಾತ್ರೆ ಆರಂಭವಾಗಿದೆ.
ಪಿರಿಯಾಪಟ್ಟಣ ಸುತ್ತಮುತ್ತಲಿನ ರೈತರು ದನಗಳನ್ನು ತಂದು ಜಾತ್ರೆಯಲ್ಲಿ ಕಟ್ಟುತ್ತಿದ್ದಾರೆ. ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ಜಾನುವಾರು ಸಂತೆ ಮತ್ತು ಸಾಗಣೆ ಮಾಡುವುದನ್ನು ನಿಷೇಧಿಸಿದೆ. ಆದರೂ ಜಾನುವಾರುಗಳನ್ನು ತರುತ್ತಿರುವುದು ಆತಂಕ ಮೂಡಿಸಿದೆ.
ಈ ಕುರಿತು ರೈತ ಹರದೂರು ಗಿರೀಶ್ ಮಾತನಾಡಿ, ನಾವು ತಾತನ ಕಾಲದಿಂದಲೂ ದನಗಳ ಜಾತ್ರೆಗಳಲ್ಲಿ ದನಗಳನ್ನು ಕಟ್ಟುತ್ತಿದ್ದೇವೆ. ಇದು ನಮ್ಮ ಸಂಪ್ರದಾಯ. ನಾವು ಗೋವುಗಳನ್ನು ಅಲಂಕಾರ ಮಾಡಿ ಸಂತೋಷಕ್ಕಾಗಿ ಕಟ್ಟುತ್ತೇವೆ. ಜಿಲ್ಲಾಡಳಿತ ನಮಗೆ ಕುಡಿಯುವ ನೀರು, ವಿದ್ಯುತ್ ಯಾವುದೇ ಸೌಕರ್ಯಗಳು ಒದಗಿಸಿ ಕೊಟ್ಟಿಲ್ಲ. ಮಾರಾಟ ಮಾಡದಿದ್ದರೂ ತೊಂದರೆ ಇಲ್ಲ, 4 ದಿವಸ ಇದ್ದು ಹೋಗುತ್ತೇವೆ ಎಂದರು.
ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸೋಮಯ್ಯ ಪತ್ರಿಕೆಯೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಚರ್ಮ ಗಂಟು ರೋಗ ಇರುವುದರಿಂದ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದೇವೆ. ತಾಲ್ಲೂಕಿನಲ್ಲಿ 200 ಜಾನುವಾರುಗಳಿಗೆ ಚರ್ಮಗಂಟು ರೋಗ ಕಂಡುಬಂದಿದ್ದು , ಲಸಿಕೆ ನೀಡಿದ್ದೇವೆ. ಇದೊಂದು ಸಾಂಕ್ರಾಮಿಕ ರೋಗವಾಗಿರುವುದರಿಂದ ದನಗಳ ಜಾತ್ರೆಗಳಲ್ಲಿ ದನಗಳಿಗೆ ಹರಡುವ ಸಾಧ್ಯತೆಯಿದೆ. ಆದ್ದರಿಂದ ಡಿಸಿ ಅವರು ದನಗಳ ಜಾತ್ರೆ ನಿಷೇಧ ಮಾಡಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ಮುಖಾಂತರ ಜಾನುವಾರುಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…