ಬೆಟ್ಟದಪುರ : ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಜಾನುವಾರು ಸಂತೆಗಳನ್ನು ನಿಷೇಧಿಸಿದ್ದರೂ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಹರದೂರು ಗೇಟ್ನಲ್ಲಿ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರೋತ್ಸವದ ಅಂಗವಾಗಿ ದನಗಳ ಜಾತ್ರೆ ಆರಂಭವಾಗಿದೆ.
ಪಿರಿಯಾಪಟ್ಟಣ ಸುತ್ತಮುತ್ತಲಿನ ರೈತರು ದನಗಳನ್ನು ತಂದು ಜಾತ್ರೆಯಲ್ಲಿ ಕಟ್ಟುತ್ತಿದ್ದಾರೆ. ಜಿಲ್ಲಾಡಳಿತವು ಜಿಲ್ಲೆಯಾದ್ಯಂತ ಜಾನುವಾರು ಸಂತೆ ಮತ್ತು ಸಾಗಣೆ ಮಾಡುವುದನ್ನು ನಿಷೇಧಿಸಿದೆ. ಆದರೂ ಜಾನುವಾರುಗಳನ್ನು ತರುತ್ತಿರುವುದು ಆತಂಕ ಮೂಡಿಸಿದೆ.
ಈ ಕುರಿತು ರೈತ ಹರದೂರು ಗಿರೀಶ್ ಮಾತನಾಡಿ, ನಾವು ತಾತನ ಕಾಲದಿಂದಲೂ ದನಗಳ ಜಾತ್ರೆಗಳಲ್ಲಿ ದನಗಳನ್ನು ಕಟ್ಟುತ್ತಿದ್ದೇವೆ. ಇದು ನಮ್ಮ ಸಂಪ್ರದಾಯ. ನಾವು ಗೋವುಗಳನ್ನು ಅಲಂಕಾರ ಮಾಡಿ ಸಂತೋಷಕ್ಕಾಗಿ ಕಟ್ಟುತ್ತೇವೆ. ಜಿಲ್ಲಾಡಳಿತ ನಮಗೆ ಕುಡಿಯುವ ನೀರು, ವಿದ್ಯುತ್ ಯಾವುದೇ ಸೌಕರ್ಯಗಳು ಒದಗಿಸಿ ಕೊಟ್ಟಿಲ್ಲ. ಮಾರಾಟ ಮಾಡದಿದ್ದರೂ ತೊಂದರೆ ಇಲ್ಲ, 4 ದಿವಸ ಇದ್ದು ಹೋಗುತ್ತೇವೆ ಎಂದರು.
ಪಶು ಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಸೋಮಯ್ಯ ಪತ್ರಿಕೆಯೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಚರ್ಮ ಗಂಟು ರೋಗ ಇರುವುದರಿಂದ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದೇವೆ. ತಾಲ್ಲೂಕಿನಲ್ಲಿ 200 ಜಾನುವಾರುಗಳಿಗೆ ಚರ್ಮಗಂಟು ರೋಗ ಕಂಡುಬಂದಿದ್ದು , ಲಸಿಕೆ ನೀಡಿದ್ದೇವೆ. ಇದೊಂದು ಸಾಂಕ್ರಾಮಿಕ ರೋಗವಾಗಿರುವುದರಿಂದ ದನಗಳ ಜಾತ್ರೆಗಳಲ್ಲಿ ದನಗಳಿಗೆ ಹರಡುವ ಸಾಧ್ಯತೆಯಿದೆ. ಆದ್ದರಿಂದ ಡಿಸಿ ಅವರು ದನಗಳ ಜಾತ್ರೆ ನಿಷೇಧ ಮಾಡಿದ್ದಾರೆ. ಆದ್ದರಿಂದ ಪೊಲೀಸ್ ಇಲಾಖೆ ಮುಖಾಂತರ ಜಾನುವಾರುಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು.
ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…
ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…
ಆಧಾರ್ ಕಾರ್ಡ್ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…
ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…
ರಾಮನಗರ: ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಕೈಗೊಂಡಿರುವ ಕೈಗೊಂಡಿರುವ ಬೃಹತ್ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್ ಕುಮಾರಸ್ವಾಮಿ ಇದು ಕೇವಲ…