ಜಿಲ್ಲೆಗಳು

ಬಹುರೂಪಿ ಚಲನಚಿತ್ರೋತ್ಸವ : ನೀರಸ ಪ್ರತಿಕ್ರಿಯೆ

ಮೈಸೂರು : ಬಹುರೂಪಿ ಚಲನಚಿತ್ರೋತ್ಸವಕ್ಕೆ ಮೂರನೇ ದಿನವೂ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಶ್ರೀರಂಗ ರಂಗಮಂದಿರದಲ್ಲಿ ಭಾನುವಾರ ಪ್ರದರ್ಶನಗೊಂಡ ಮೂರು ಸಿನಿಮಾಗಳ ಪೈಕಿ ಮಧ್ಯಾಹ್ನ ೨ ರಿಂದ ೪.೩೦ರವೆರೆಗೆ ಪ್ರದರ್ಶನಗೊಂಡು ಮಲಯಾಳಂ ಭಾಷೆಯ ಮಹೇಶ್ ನಾರಾಯಣ್ ನಿರ್ದೇಶನದ ಟೇಕ್ ಆಫ್ ಸಿನಿಮಾಗೆ ಮಾಮೂಲಿಗಿಂತ ಸ್ವಲ್ಪ ಮಟ್ಟಿಗೆ ಹೆಚ್ಚಿನ ಜನರು ಕಂಡು ಬಂದರು. ಆದರೂ, ಆಸನಗಳು ಭರ್ತಿಯಾಗಿರಲಿಲ್ಲ.

ಬೆಳಿಗ್ಗೆ 10.30 ಕ್ಕೆ ಪ್ರದರ್ಶನಗೊಂಡ ಆದಿತ್ಯ ರಾನಡೆ ನಿರ್ದೇಶನದ ರಾಂಚಿ ಪಖಾರ್ ಎಂಬ 30  ನಿಮಿಷಗಳ ಹಿಂದಿ ಸಿನಿಮಾ ಮತ್ತು ಮಧ್ಯಾಹ್ನ ೧೨ಕ್ಕೆ ಪ್ರದರ್ಶನಗೊಂಡ ಡೆರಿಕ್ ಡೊನೆನ್ ನಿರ್ದೇಶನದ ದಿ ಪ್ರೈಸ್ ಆಫ್ ಫ್ರೀ ಸಿನಿಮಾ ವೀಕ್ಷಣೆಗೆ ಐದಾರು ಮಂದಿ ವೀಕ್ಷಕರಷ್ಟೆ ಇದ್ದರು. ಇನ್ನು ಸಿನಿಮಾ ಕುರಿತ ಚರ್ಚೆಗಳು ಕೂಡ ಕಾಣಲಿಲ್ಲ. ಭಾನುವಾರವಾದರೂ, ಮಳೆಯ ಕಾರಣದಿಂದ ಜನರು ಬರಲಿಲ್ಲ.

andolanait

Recent Posts

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

3 hours ago

ನೀಟ್-ಯುಜಿ ಪತ್ರಿಕೆ ಸೋರಿಕೆ ಪ್ರಕರಣ : ವೈದ್ಯ ಸೇರಿ ಇಬ್ಬರ ಬಂಧನ

ಹೊಸದಿಲ್ಲಿ : ನೀಟ್ ಯುಜಿ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಲಾತೂರ್ ಮೂಲದ ವೈದ್ಯರು ಮತ್ತು ಪುಣೆಯ ಕೋಚಿಂಗ್ ಸಂಸ್ಥೆಯ ಭೌತಶಾಸ್ತ್ರ…

3 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ!

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

4 hours ago

ಎಂ.ಬಿ.ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು

ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…

4 hours ago

ನಾಳೆ ಸಿಎಂ-ಡಿಸಿಎಂ ಉಪಹಾರ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…

5 hours ago

ಜೂನ್ 4ರಿಂದ ಚೀತಾಗಳು ಸಾರ್ವಜನಿಕ ವೀಕ್ಷಣೆಗೆ ಲಭ್ಯ : ಈಶ್ವರ ಖಂಡ್ರೆ

ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…

5 hours ago