ಜಿಲ್ಲೆಗಳು

ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ವರ್ಣರಂಜಿತ ತೆರೆ

ಮೈಸೂರು: ‘ಭಾರತೀಯತೆ’ಶೀರ್ಷಿಕೆಯಡಿ ರಂಗಾಯಣದ ಆವರಣದಲ್ಲಿ ಒಂಬತ್ತು ದಿನಗಳ ಕಾಲ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಗುರುವಾರ ಸಂಜೆ ಸಂಭ್ರಮದ ತೆರೆ ಬಿದ್ದಿದೆ.
ಬಹುರೂಪಿಯನ್ನು ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮತ್ತು ರಂಗಾಯಣದ ಕಲಾವಿದರ ತಂಡ ಹಾಗೂ ರಂಗಾಸಕ್ತರು ರಂಗಾಯಣದ ಆವರಣದಲ್ಲಿರುವ ಬಿ.ವಿ.ಕಾರಂತರ ಪುತ್ಥಳಿ ಎದುರು ಕಲಾವಿದರು ತಾಯಿ ಭಾರತೀಯ ಪಾದ ಪದ್ಮಗಳಿಗೆ ನಮಿಸೋಣ ಬನ್ನಿ… ಗೀತೆಯನ್ನು ಹಾಡುವುದರೊಂದಿಗೆ ಬಹುರೂಪಿಗೆ ತೆರೆ ಎಳೆಯಲಾಯಿತು.
ಬಳಿಕ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಕೊಡವ ನೃತ್ಯಗಾರರೊಂದಿಗೆ ಹೆಜ್ಜೆ ಹಾಕಿದರು. ನೆರೆದಿದ್ದವರು ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದರು. ಮೂರು ನಾಟಕಗಳ ಪ್ರದರ್ಶನಗೊಂದಿಗೆ ಬಹುರೂಪಿ ಮುಕ್ತಾಯಗೊಂಡಿತು.
ಭಾರತದ ಸಾಂಸ್ಕೃತಿಕ ವೈವಿಧ್ಯತೆಯ ಅನಾವರಣಗೊಳಿಸಿದ ಈ ಬಾರಿಯ ಬಹುರೂಪಿಯಲ್ಲಿ ಒಂಬತ್ತು ದಿನಗಳ ಕಾಲ ಕನ್ನಡ, ಮಲಯಾಳಂ, ಬಂಗಾಳಿ, ತೆಲುಗು, ತಮಿಳು ಸೇರಿದಂತೆ ವಿವಿಧ ಭಾಷೆಯ ನಾಟಕಗಳು, ನೃತ್ಯ ರೂಪಕಗಳನ್ನು ಪ್ರದರ್ಶಿಸಲಾಯಿತು. ಇಷ್ಟೇ ಅಲ್ಲದೆ ಕರಕುಶಲ ಪ್ರದರ್ಶನ, ಪುಸ್ತಕ ಪ್ರದರ್ಶನ, ಚಲನಚಿತ್ರೋತ್ಸವ, ವರ್ಣಚಿತ್ರ ಪ್ರದರ್ಶನ, ರಾಷ್ಟ್ರೀಯ ವಿಚಾರಗೋಷ್ಠಿಗಳು ಗಮನ ಸೆಳೆದವು.
ಮೂರು ರಂಗಮಂದಿರಗಳಲ್ಲಿ ಏಳು ರಾಜ್ಯಗಳ ಏಳು ವಿವಿಧ ಭಾಷೆಗಳ ನಾಟಕಗಳು, ಕನ್ನಡದ 12 ನಾಟಕಗಳು ಮತ್ತು ತುಳು ನಾಟಕವು ಸೇರಿ ಒಟ್ಟು 20 ನಾಟಕಗಳು ಪ್ರದರ್ಶನಗೊಂಡವು.
ಮ್ಯಾಂಡಸ್ ಚಂಡಮಾರುತದ ಪರಿಣಾಮ ನಾಲ್ಕು ದಿನಗಳು ಬಹುರೂಪಿ ರಂಗೋತ್ಸವ ಜನರಿಲ್ಲದೇ ಭಣಗುಟ್ಟಿತು. ಕೊನೆಯ ಎರಡು ದಿನಗಳು ಮಳೆ ಬಿಡುವು ನೀಡಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರಂಗಾಸಕ್ತರು ಆಗಮಿಸಿದರು.
ಕೊನೆಯ ದಿನ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ದಿವಾಕರ ಹೆಗಡೆ ತಂಡದವರು ತಾಳಮದ್ದಳೆಯಲ್ಲಿ ಸ್ವಾಮಿ ವಿವೇಕಾನಂದರು ಚಿಗಾಗೋ ಸರ್ವಧರ್ಮ ಸಮ್ಮೇಳನಕ್ಕೆ ಹೋಗುವ ಮುನ್ನ ಕನ್ಯಾಕುಮಾರಿ ಭೂಶಿರದಲ್ಲಿ ನಿಂತು ಸಂಕಲ್ಪ ಮಾಡಿದ ಸಂದರ್ಭವನ್ನು ಪ್ರಸ್ತುತಪಡಿಸಿದರು.

ವನರಂಗದಲ್ಲಿ ನಡೆದ ಮೈಸೂರಿನ ಕೆ.ಎನ್.ಮಹೇಶ್ ತಂಡದವರು ವೀರಗಾಸೆ ನೃತ್ಯ ಪ್ರದರ್ಶಿಸಿದರು. ತಮಟೆ ಸದ್ದಿಗೆ ಸುತ್ತಾಕಾರದಲ್ಲಿ ಕತ್ತಿ ಹಿಡಿದು ಬೀಸುತ್ತಾ ನರ್ತಿಸುತ್ತಾ ಸಭಿಕರಿಂದ ಪ್ರಶಂಸೆ ಪಡೆದರು.
ತದನಂತರ ಕೊಡಗಿನ ಸೂರಜ್ ತಂಡದವರು ಬೊಳಕಾಟ್ ನೃತ್ಯ ಪ್ರದರ್ಶಿಸಿದರು. ಕೊಡಗಿನಲ್ಲಿ ಆಚರಿಸುವ ಉತ್ತರಿ ಹಬ್ಬದ ಸಂದರ್ಭದಲ್ಲಿ ನರ್ತಿಸುವ ಉತ್ತರಿ ಕೋಲಾಟಕ್ಕೆ ರಂಗಾಸಕ್ತರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.

andolanait

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

6 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

6 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

7 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago