ಮೈಸೂರು: ‘ಭಾರತೀಯತೆ’ಶೀರ್ಷಿಕೆಯಡಿ ರಂಗಾಯಣದ ಆವರಣದಲ್ಲಿ ಒಂಬತ್ತು ದಿನಗಳ ಕಾಲ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಗುರುವಾರ ಸಂಜೆ ಸಂಭ್ರಮದ ತೆರೆ ಬಿದ್ದಿದೆ.
ಬಹುರೂಪಿಯನ್ನು ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮತ್ತು ರಂಗಾಯಣದ ಕಲಾವಿದರ ತಂಡ ಹಾಗೂ ರಂಗಾಸಕ್ತರು ರಂಗಾಯಣದ ಆವರಣದಲ್ಲಿರುವ ಬಿ.ವಿ.ಕಾರಂತರ ಪುತ್ಥಳಿ ಎದುರು ಕಲಾವಿದರು ತಾಯಿ ಭಾರತೀಯ ಪಾದ ಪದ್ಮಗಳಿಗೆ ನಮಿಸೋಣ ಬನ್ನಿ… ಗೀತೆಯನ್ನು ಹಾಡುವುದರೊಂದಿಗೆ ಬಹುರೂಪಿಗೆ ತೆರೆ ಎಳೆಯಲಾಯಿತು.
ಬಳಿಕ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಕೊಡವ ನೃತ್ಯಗಾರರೊಂದಿಗೆ ಹೆಜ್ಜೆ ಹಾಕಿದರು. ನೆರೆದಿದ್ದವರು ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದರು. ಮೂರು ನಾಟಕಗಳ ಪ್ರದರ್ಶನಗೊಂದಿಗೆ ಬಹುರೂಪಿ ಮುಕ್ತಾಯಗೊಂಡಿತು.
ಭಾರತದ ಸಾಂಸ್ಕೃತಿಕ ವೈವಿಧ್ಯತೆಯ ಅನಾವರಣಗೊಳಿಸಿದ ಈ ಬಾರಿಯ ಬಹುರೂಪಿಯಲ್ಲಿ ಒಂಬತ್ತು ದಿನಗಳ ಕಾಲ ಕನ್ನಡ, ಮಲಯಾಳಂ, ಬಂಗಾಳಿ, ತೆಲುಗು, ತಮಿಳು ಸೇರಿದಂತೆ ವಿವಿಧ ಭಾಷೆಯ ನಾಟಕಗಳು, ನೃತ್ಯ ರೂಪಕಗಳನ್ನು ಪ್ರದರ್ಶಿಸಲಾಯಿತು. ಇಷ್ಟೇ ಅಲ್ಲದೆ ಕರಕುಶಲ ಪ್ರದರ್ಶನ, ಪುಸ್ತಕ ಪ್ರದರ್ಶನ, ಚಲನಚಿತ್ರೋತ್ಸವ, ವರ್ಣಚಿತ್ರ ಪ್ರದರ್ಶನ, ರಾಷ್ಟ್ರೀಯ ವಿಚಾರಗೋಷ್ಠಿಗಳು ಗಮನ ಸೆಳೆದವು.
ಮೂರು ರಂಗಮಂದಿರಗಳಲ್ಲಿ ಏಳು ರಾಜ್ಯಗಳ ಏಳು ವಿವಿಧ ಭಾಷೆಗಳ ನಾಟಕಗಳು, ಕನ್ನಡದ 12 ನಾಟಕಗಳು ಮತ್ತು ತುಳು ನಾಟಕವು ಸೇರಿ ಒಟ್ಟು 20 ನಾಟಕಗಳು ಪ್ರದರ್ಶನಗೊಂಡವು.
ಮ್ಯಾಂಡಸ್ ಚಂಡಮಾರುತದ ಪರಿಣಾಮ ನಾಲ್ಕು ದಿನಗಳು ಬಹುರೂಪಿ ರಂಗೋತ್ಸವ ಜನರಿಲ್ಲದೇ ಭಣಗುಟ್ಟಿತು. ಕೊನೆಯ ಎರಡು ದಿನಗಳು ಮಳೆ ಬಿಡುವು ನೀಡಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರಂಗಾಸಕ್ತರು ಆಗಮಿಸಿದರು.
ಕೊನೆಯ ದಿನ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ದಿವಾಕರ ಹೆಗಡೆ ತಂಡದವರು ತಾಳಮದ್ದಳೆಯಲ್ಲಿ ಸ್ವಾಮಿ ವಿವೇಕಾನಂದರು ಚಿಗಾಗೋ ಸರ್ವಧರ್ಮ ಸಮ್ಮೇಳನಕ್ಕೆ ಹೋಗುವ ಮುನ್ನ ಕನ್ಯಾಕುಮಾರಿ ಭೂಶಿರದಲ್ಲಿ ನಿಂತು ಸಂಕಲ್ಪ ಮಾಡಿದ ಸಂದರ್ಭವನ್ನು ಪ್ರಸ್ತುತಪಡಿಸಿದರು.
ವನರಂಗದಲ್ಲಿ ನಡೆದ ಮೈಸೂರಿನ ಕೆ.ಎನ್.ಮಹೇಶ್ ತಂಡದವರು ವೀರಗಾಸೆ ನೃತ್ಯ ಪ್ರದರ್ಶಿಸಿದರು. ತಮಟೆ ಸದ್ದಿಗೆ ಸುತ್ತಾಕಾರದಲ್ಲಿ ಕತ್ತಿ ಹಿಡಿದು ಬೀಸುತ್ತಾ ನರ್ತಿಸುತ್ತಾ ಸಭಿಕರಿಂದ ಪ್ರಶಂಸೆ ಪಡೆದರು.
ತದನಂತರ ಕೊಡಗಿನ ಸೂರಜ್ ತಂಡದವರು ಬೊಳಕಾಟ್ ನೃತ್ಯ ಪ್ರದರ್ಶಿಸಿದರು. ಕೊಡಗಿನಲ್ಲಿ ಆಚರಿಸುವ ಉತ್ತರಿ ಹಬ್ಬದ ಸಂದರ್ಭದಲ್ಲಿ ನರ್ತಿಸುವ ಉತ್ತರಿ ಕೋಲಾಟಕ್ಕೆ ರಂಗಾಸಕ್ತರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…