ಜಿಲ್ಲೆಗಳು

ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ವರ್ಣರಂಜಿತ ತೆರೆ

ಮೈಸೂರು: ‘ಭಾರತೀಯತೆ’ಶೀರ್ಷಿಕೆಯಡಿ ರಂಗಾಯಣದ ಆವರಣದಲ್ಲಿ ಒಂಬತ್ತು ದಿನಗಳ ಕಾಲ ನಡೆದ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಗುರುವಾರ ಸಂಜೆ ಸಂಭ್ರಮದ ತೆರೆ ಬಿದ್ದಿದೆ.
ಬಹುರೂಪಿಯನ್ನು ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಮತ್ತು ರಂಗಾಯಣದ ಕಲಾವಿದರ ತಂಡ ಹಾಗೂ ರಂಗಾಸಕ್ತರು ರಂಗಾಯಣದ ಆವರಣದಲ್ಲಿರುವ ಬಿ.ವಿ.ಕಾರಂತರ ಪುತ್ಥಳಿ ಎದುರು ಕಲಾವಿದರು ತಾಯಿ ಭಾರತೀಯ ಪಾದ ಪದ್ಮಗಳಿಗೆ ನಮಿಸೋಣ ಬನ್ನಿ… ಗೀತೆಯನ್ನು ಹಾಡುವುದರೊಂದಿಗೆ ಬಹುರೂಪಿಗೆ ತೆರೆ ಎಳೆಯಲಾಯಿತು.
ಬಳಿಕ ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರು ಕೊಡವ ನೃತ್ಯಗಾರರೊಂದಿಗೆ ಹೆಜ್ಜೆ ಹಾಕಿದರು. ನೆರೆದಿದ್ದವರು ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದರು. ಮೂರು ನಾಟಕಗಳ ಪ್ರದರ್ಶನಗೊಂದಿಗೆ ಬಹುರೂಪಿ ಮುಕ್ತಾಯಗೊಂಡಿತು.
ಭಾರತದ ಸಾಂಸ್ಕೃತಿಕ ವೈವಿಧ್ಯತೆಯ ಅನಾವರಣಗೊಳಿಸಿದ ಈ ಬಾರಿಯ ಬಹುರೂಪಿಯಲ್ಲಿ ಒಂಬತ್ತು ದಿನಗಳ ಕಾಲ ಕನ್ನಡ, ಮಲಯಾಳಂ, ಬಂಗಾಳಿ, ತೆಲುಗು, ತಮಿಳು ಸೇರಿದಂತೆ ವಿವಿಧ ಭಾಷೆಯ ನಾಟಕಗಳು, ನೃತ್ಯ ರೂಪಕಗಳನ್ನು ಪ್ರದರ್ಶಿಸಲಾಯಿತು. ಇಷ್ಟೇ ಅಲ್ಲದೆ ಕರಕುಶಲ ಪ್ರದರ್ಶನ, ಪುಸ್ತಕ ಪ್ರದರ್ಶನ, ಚಲನಚಿತ್ರೋತ್ಸವ, ವರ್ಣಚಿತ್ರ ಪ್ರದರ್ಶನ, ರಾಷ್ಟ್ರೀಯ ವಿಚಾರಗೋಷ್ಠಿಗಳು ಗಮನ ಸೆಳೆದವು.
ಮೂರು ರಂಗಮಂದಿರಗಳಲ್ಲಿ ಏಳು ರಾಜ್ಯಗಳ ಏಳು ವಿವಿಧ ಭಾಷೆಗಳ ನಾಟಕಗಳು, ಕನ್ನಡದ 12 ನಾಟಕಗಳು ಮತ್ತು ತುಳು ನಾಟಕವು ಸೇರಿ ಒಟ್ಟು 20 ನಾಟಕಗಳು ಪ್ರದರ್ಶನಗೊಂಡವು.
ಮ್ಯಾಂಡಸ್ ಚಂಡಮಾರುತದ ಪರಿಣಾಮ ನಾಲ್ಕು ದಿನಗಳು ಬಹುರೂಪಿ ರಂಗೋತ್ಸವ ಜನರಿಲ್ಲದೇ ಭಣಗುಟ್ಟಿತು. ಕೊನೆಯ ಎರಡು ದಿನಗಳು ಮಳೆ ಬಿಡುವು ನೀಡಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರಂಗಾಸಕ್ತರು ಆಗಮಿಸಿದರು.
ಕೊನೆಯ ದಿನ ಬಿ.ವಿ.ಕಾರಂತ ರಂಗಚಾವಡಿಯಲ್ಲಿ ದಿವಾಕರ ಹೆಗಡೆ ತಂಡದವರು ತಾಳಮದ್ದಳೆಯಲ್ಲಿ ಸ್ವಾಮಿ ವಿವೇಕಾನಂದರು ಚಿಗಾಗೋ ಸರ್ವಧರ್ಮ ಸಮ್ಮೇಳನಕ್ಕೆ ಹೋಗುವ ಮುನ್ನ ಕನ್ಯಾಕುಮಾರಿ ಭೂಶಿರದಲ್ಲಿ ನಿಂತು ಸಂಕಲ್ಪ ಮಾಡಿದ ಸಂದರ್ಭವನ್ನು ಪ್ರಸ್ತುತಪಡಿಸಿದರು.

ವನರಂಗದಲ್ಲಿ ನಡೆದ ಮೈಸೂರಿನ ಕೆ.ಎನ್.ಮಹೇಶ್ ತಂಡದವರು ವೀರಗಾಸೆ ನೃತ್ಯ ಪ್ರದರ್ಶಿಸಿದರು. ತಮಟೆ ಸದ್ದಿಗೆ ಸುತ್ತಾಕಾರದಲ್ಲಿ ಕತ್ತಿ ಹಿಡಿದು ಬೀಸುತ್ತಾ ನರ್ತಿಸುತ್ತಾ ಸಭಿಕರಿಂದ ಪ್ರಶಂಸೆ ಪಡೆದರು.
ತದನಂತರ ಕೊಡಗಿನ ಸೂರಜ್ ತಂಡದವರು ಬೊಳಕಾಟ್ ನೃತ್ಯ ಪ್ರದರ್ಶಿಸಿದರು. ಕೊಡಗಿನಲ್ಲಿ ಆಚರಿಸುವ ಉತ್ತರಿ ಹಬ್ಬದ ಸಂದರ್ಭದಲ್ಲಿ ನರ್ತಿಸುವ ಉತ್ತರಿ ಕೋಲಾಟಕ್ಕೆ ರಂಗಾಸಕ್ತರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.

andolanait

Recent Posts

ಮಂಡ್ಯದಲ್ಲಿ ಸಿಇಟಿ ಗದ್ದಲ: ವಿದ್ಯಾರ್ಥಿನಿಯರ ಓಲೆ ಬಿಚ್ಚಿಸಿದ ಪರಿವೀಕ್ಷಕರು

ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…

9 mins ago

ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಬೆಂಕಿ: ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲು

ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…

31 mins ago

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ | ನಾಳೆ ವಿಶೇಷ ಸಂಪುಟ ಸಭೆ

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…

45 mins ago

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಕುಟ್ಟ ಖಾಸಗಿ ಹೋಂಸ್ಟೇ ಪರವಾನಗಿ ರದ್ದು

ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…

57 mins ago

ಮಗು ಸಾವಿಗೆ ಇರುವೆ ಕಚ್ಚಿರುವುದು ಕಾರಣವಲ್ಲ: ಚಲುವಾಂಬ ಆಸ್ಪತ್ರೆ ವೈದ್ಯರಿಂದ ಸ್ಪಷ್ಟನೆ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್…

1 hour ago

ಮೆದಗನಾಣೆ ಗ್ರಾಮಸ್ಥರ ಬವಣೆಗೆ ಕೊನೆ ಎಂದು?

ಸಮರ್ಪಕ ರಸ್ತೆ ಇಲ್ಲ, ವಾಹನ ಸೌಲಭ್ಯವಿಲ್ಲ, ಶುದ್ಧ ನೀರಿಗೂ ತತ್ವಾರ; ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ ಮಹಾದೇಶ್ ಎಂ.ಗೌಡ ಹನೂರು:…

1 hour ago