ಜಿಲ್ಲೆಗಳು

ಭಕ್ತ ಶ್ರೇಷ್ಠ ಕನಕದಾಸರ ತತ್ವ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಅನುಕರಣಿಯ : ಶಾಸಕ ಆರ್ ನರೇಂದ್ರ

ಹನೂರು: ಸಮಾಜದಲ್ಲಿನ ಶ್ರೇಣಿಕೃತ ಜಾತಿ ವ್ಯವಸ್ಥೆಯನ್ನು ಕಟುವಾಗಿ ತಮ್ಮ ಕೀರ್ತನೆಗಳ ಮೂಲಕ ಖಂಡಿಸಿದ ಭಕ್ತ ಶ್ರೇಷ್ಠ ಕನಕದಾಸರ ತತ್ವ ಆದರ್ಶಗಳು ಪ್ರಸ್ತುತ ಸಮಾಜಕ್ಕೆ ಅನುಕರಣಿಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು .

ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಕುಲ ಕುಲ ಕುಲವೆಂದು ಹೊಡೆದಾಡಾದಿರಿ ನಿಮ್ಮ ಕುಲದ ನೆಲೆಯನ್ನು ಬಲ್ಲಿರಾ ಎನ್ನುವ ಮೂಲಕ 15-16ನೇ ಶತಮಾನದಲ್ಲೇ ಸಮಾಜದ ಅಂಕುಡೊಂಕುಗಳನ್ನು ತಮ್ಮ ಕೀರ್ತನೆಗಳ ಮೂಲಕ ಹೊರಹಾಕಿದ್ದರು. ಕನಕದಾಸರು ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಲ್ಲ ಎಂದು ತಿಳಿಸಿದರು.

ನಿರಂತರ ಮಳೆ ನಡುವೆ ಮೆರವಣಿಗೆ : ಶುಕ್ರವಾರ ಬೆಳಿಗ್ಗೆ ಪ್ರಾರಂಭವಾದ ಜಿಟಿಜಿಟಿ ಮಳೆಯ ನಡುವೆಯೂ ಕಲಾತಂಡಗಳು, ವಾದ್ಯ ಮೇಳಗಳೊಂದಿಗೆ ಸಾಗಿತು. ಈ ವೇಳೆ ಶಾಸಕ ಆರ್. ನರೇಂದ್ರ, ತಹಸಿಲ್ದಾರ್ ಆನಂದಯ್ಯ, ಅವರು ಸೇರಿದಂತೆ ವಿವಿಧ ಮುಖಂಡರುಗಳು ಮೆರವಣಿಗೆಯಲ್ಲಿ ಸಾಗಿದರು. ನಿರಂತರ ಮಳೆಯಲ್ಲೂ ವೀರಗಾಸೆಯವರು ತಾಳಮೇಳಗಳ ಸದ್ದಿಗೆ ಕುಣಿದು ಕುಪ್ಪಳಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಆನಂದಯ್ಯ, ತಾ. ಪಂ. ಕಾರ್ಯನಿರ್ವಾಧಿಕಾರಿ ಶ್ರೀನಿವಾಸ್,ಮುಖ್ಯಾಧಿಕಾರಿ ಮೂರ್ತಿ, ಶಿರಸ್ತೇದಾರ್ ಶ್ರೀನಿವಾಸ್, ಕಂದಾಯ ನಿರೀಕ್ಷಕ ಮಹದೇವಸ್ವಾಮಿ, ಗ್ರಾಮ ಲೆಕ್ಕಿಗ ಶೇಷಣ್ಣ, ಎಂಸಿಡಿಸಿಸಿ ವ್ಯವಸ್ಥಾಪಕ ಪ್ರವೀಣ್, ಅಧಿಕಾರಿಗಳು, ಜಿಪಂ ಮಾಜಿ ಉಪಾಧ್ಯಕ್ಷ ರಾಮಪುರ ಬಸವರಾಜು, ವಿವಿಧ ಇಲಾಖೆಯ ಸಿಬ್ಬಂದಿ ವರ್ಗದವರು, ಮುಖಂಡರುಗಳಾದ ಅಜ್ಜೀಪುರ ನಾಗರಾಜು, ಮುರುಡೇಶ್ವರ ಸ್ವಾಮಿ, ಮಹಾದೇವ,ಕಣ್ಣೂರು ಮಹದೇವಸ್ವಾಮಿ,ಬಸಪ್ಪನದೊಡ್ಡಿ ಚಂದ್ರು ,ಪಾಂಡುರಂಗ ನಾಯ್ಡು, ರವೀಂದ್ರ, ರಮೇಶ್ ನಾಯ್ಡು,ನಗರಸಭೆ ಮಾಜಿ ಸದಸ್ಯ ಹರ್ಷ,ಮಂಗಲ ಪುಟ್ಟರಾಜು, ಕೊಪ್ಪಾಳಿ ಮಹದೇವನಾಯ್ಕ ಸೇರಿದಂತೆ ವಿವಿಧ ಗ್ರಾಮಗಳ ಕುರುಬ ಸಮುದಾಯದ ಯಜಮಾನರುಗಳು, ಮುಖಂಡರುಗಳು, ಸಾರ್ವಜನಿಕರು ಇದ್ದರು.

andolana

Recent Posts

ಓದುಗರ ಪತ್ರ: ರೈತರಿಗೆ ವಿಮಾ ಕಂಪೆನಿಗಳಿಂದಾಗುವ ವಂಚನೆ ತಪ್ಪಿಸಿ

ವಿಮಾ ಕಂಪೆನಿಗಳು ರೈತರ ಬೆಳೆನಷ್ಟ ಪರಿಹಾರದಲ್ಲಿ ವಂಚನೆ ಮಾಡುತ್ತಿವೆ. ಶೇ.೮೦ರಷ್ಟು ರೈತರು ವಿಮೆಯ ಕಂತು ಪಾವತಿಸಿದರೂ, ಬೆಳೆ ನಷ್ಟಕ್ಕೆ ಒಳಗಾದ…

36 mins ago

ಓದುಗರ ಪತ್ರ: ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿ

ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ.…

36 mins ago

ಓದುಗರ ಪತ್ರ: ಶಾಲೆಯಲ್ಲಿ ಪತ್ರಿಕೆ ಓದುವುದು ಕಡ್ಡಾಯ: ಸ್ವಾಗತಾರ್ಹ

ರಾಜ್ಯ ಸರ್ಕಾರವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ಪ್ರತಿದಿನ ಬೆಳಿಗ್ಗೆ ಪ್ರಾರ್ಥನೆಯ ನಂತರ ವಿದ್ಯಾರ್ಥಿಗಳು ಕನ್ನಡ ದಿನಪತ್ರಿಕೆಗಳನ್ನು…

37 mins ago

ಓದುಗರ ಪತ್ರ: ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಿ

ಬೆಂಗಳೂರಿನ ಯಶವಂತಪುರ, ಎಸ್‌ಎಂವಿಟಿ, ಕೆ.ಆರ್.ಪುರಂ, ರೈಲ್ವೆ ನಿಲ್ದಾಣಗಳಿಂದ ಚಾಮರಾಜನಗರ, ಮೈಸೂರು, ಶಿವಮೊಗ್ಗ, ಕಡೂರು, ತಾಳಗುಪ್ಪ , ಹಾಸನ , ಉಡುಪಿ,…

38 mins ago

ಮಂತ್ರಾಲಯಕ್ಕೆ ಹೋಗುವವರಿಗೆ ಗುಡ್‌ ನ್ಯೂಸ್: ಮೈಸೂರಿನಿಂದ ಹೊರಡಲಿದೆ ವಿಶೇಷ ರೈಲು

ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್‌ಪ್ರೆಸ್‌ಗೆ ಅನುಮೋದನೆ…

39 mins ago

ಸರ್ಕಾರಿ ಶಾಲೆ ಉಳಿಸಲು1295 ಕಿ.ಮೀ. ಪಾದಯಾತ್ರೆ

ಹೇಮಂತ್‌ಕುಮಾರ್ ರೈತ ಸಂಘ-ಕೆಆರ್‌ಎಸ್ ಪಕ್ಷ, ಎಸ್‌ಡಿಎಂಸಿ ಸಹಯೋಗದಲ್ಲಿ ಜಾಗೃತಿ ಮಂಡ್ಯ: ಸರ್ಕಾರಿ ಶಾಲೆ ಉಳಿಸಿ ಎಂಬ ಘೋಷವಾಕ್ಯದೊಂದಿಗೆ ಮಂಡ್ಯ ಜಿಲ್ಲಾ…

4 hours ago