ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆ ಸಂಬಂಧವಾಗಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚೇತನ್ ಅವರು ಬಂದೋಬಸ್ತ್ ಅನ್ನು ಪರಿಶೀಲನೆ ನಡೆಸಿದರು.
ನಾಳೆ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧೀ ಜಯಂತಿಯನ್ನು ಆಚರಣೆ ಮಾಡಲಿದ್ದು. ಬಳಿಕ ಮಧ್ಯಾಹ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರೆಯಲಿದ್ದು ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನ ಆವರಣದಲ್ಲಿ ತಂಗಲಿದೆ.
ಅಕ್ಟೋಬರ್ 3ರಂದು ಅಂದರೆ ನಾಲ್ಕನೇ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಈ ದಿನಗಳಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯೂ ಕೆನಲು ಗ್ರಾಮದ ವನಜ ಸುಂದರ ಸಭಾಂಗಣದಲ್ಲಿ ಉಪಹಾರ ಸೇವಿಸಿ ಟಿ ಎಸ್ ಛತ್ರ ಗ್ರಾಮವನ್ನು ಪ್ರವೇಶಿಸಲಿದೆ ರಾತ್ರಿ ಅಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.
ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ. ನಾಗಮಂಗಲದ ಚೌಡೇನಹಳ್ಳಿ ಗೇಟ್ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನ ಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.
ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…
ಮುಂಬೈ : ಸಾಲು ಸಾಲು ಸೋಲುಗಳಿಂದ ನೆಲಕಚ್ಚಿದ್ದ ಬಾಲಿವುಡ್ ಇಂಡಸ್ಟ್ರಿಯ ಭವಿಷ್ಯವನ್ನೇ ದುರಂದರ ಸಿನಿಮಾ ಬದಲಿಸಿದೆ. ರಣವೀರ್ ಸಿಂಗ್ ನಟನೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಅರಣ್ಯ ಇಲಾಖೆಯ ಮರಳಳ್ಳ ಕ್ಯಾಂಪ್ ಬಳಿ ಕರ್ತವ್ಯ ನಿರ್ವಹಿಸುತಿದ್ದ ಸಣ್ಣಹೈದ( ೫೫) ಹುಲಿ ದಾಳಿಗೆ…
ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…
ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…
ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…