ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆ ಸಂಬಂಧವಾಗಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚೇತನ್ ಅವರು ಬಂದೋಬಸ್ತ್ ಅನ್ನು ಪರಿಶೀಲನೆ ನಡೆಸಿದರು.
ನಾಳೆ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧೀ ಜಯಂತಿಯನ್ನು ಆಚರಣೆ ಮಾಡಲಿದ್ದು. ಬಳಿಕ ಮಧ್ಯಾಹ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರೆಯಲಿದ್ದು ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನ ಆವರಣದಲ್ಲಿ ತಂಗಲಿದೆ.
ಅಕ್ಟೋಬರ್ 3ರಂದು ಅಂದರೆ ನಾಲ್ಕನೇ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಈ ದಿನಗಳಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯೂ ಕೆನಲು ಗ್ರಾಮದ ವನಜ ಸುಂದರ ಸಭಾಂಗಣದಲ್ಲಿ ಉಪಹಾರ ಸೇವಿಸಿ ಟಿ ಎಸ್ ಛತ್ರ ಗ್ರಾಮವನ್ನು ಪ್ರವೇಶಿಸಲಿದೆ ರಾತ್ರಿ ಅಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.
ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ. ನಾಗಮಂಗಲದ ಚೌಡೇನಹಳ್ಳಿ ಗೇಟ್ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನ ಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…