ಜಿಲ್ಲೆಗಳು

ಭಾರತ್ ಜೋಡೊ ಯಾತ್ರೆ ಸಂಬಂಧ ಬಂದೋಬಸ್ತ್ ಪರಿಶೀಲನೆ

ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ  ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆ ಸಂಬಂಧವಾಗಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚೇತನ್ ಅವರು ಬಂದೋಬಸ್ತ್  ಅನ್ನು ಪರಿಶೀಲನೆ ನಡೆಸಿದರು.

ನಾಳೆ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧೀ ಜಯಂತಿಯನ್ನು ಆಚರಣೆ ಮಾಡಲಿದ್ದು. ಬಳಿಕ ಮಧ್ಯಾಹ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರೆಯಲಿದ್ದು ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನ ಆವರಣದಲ್ಲಿ ತಂಗಲಿದೆ.

ಅಕ್ಟೋಬರ್ 3ರಂದು ಅಂದರೆ ನಾಲ್ಕನೇ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಈ ದಿನಗಳಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯೂ ಕೆನಲು ಗ್ರಾಮದ ವನಜ ಸುಂದರ ಸಭಾಂಗಣದಲ್ಲಿ ಉಪಹಾರ ಸೇವಿಸಿ ಟಿ ಎಸ್ ಛತ್ರ ಗ್ರಾಮವನ್ನು ಪ್ರವೇಶಿಸಲಿದೆ ರಾತ್ರಿ ಅಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.

 

 

 

ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ. ನಾಗಮಂಗಲದ ಚೌಡೇನಹಳ್ಳಿ ಗೇಟ್‍ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್‍ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನ ಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್‍ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.

 

andolanait

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

7 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

15 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago