ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಯಾತ್ರೆ ಸಂಬಂಧವಾಗಿ ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಚೇತನ್ ಅವರು ಬಂದೋಬಸ್ತ್ ಅನ್ನು ಪರಿಶೀಲನೆ ನಡೆಸಿದರು.
ನಾಳೆ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರದಲ್ಲಿ ರಾಹುಲ್ ಗಾಂಧಿ ಅವರು ಗಾಂಧೀ ಜಯಂತಿಯನ್ನು ಆಚರಣೆ ಮಾಡಲಿದ್ದು. ಬಳಿಕ ಮಧ್ಯಾಹ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರೆಯಲಿದ್ದು ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನ ಆವರಣದಲ್ಲಿ ತಂಗಲಿದೆ.
ಅಕ್ಟೋಬರ್ 3ರಂದು ಅಂದರೆ ನಾಲ್ಕನೇ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಈ ದಿನಗಳಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯೂ ಕೆನಲು ಗ್ರಾಮದ ವನಜ ಸುಂದರ ಸಭಾಂಗಣದಲ್ಲಿ ಉಪಹಾರ ಸೇವಿಸಿ ಟಿ ಎಸ್ ಛತ್ರ ಗ್ರಾಮವನ್ನು ಪ್ರವೇಶಿಸಲಿದೆ ರಾತ್ರಿ ಅಲ್ಲಿನ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.
ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ. ನಾಗಮಂಗಲದ ಚೌಡೇನಹಳ್ಳಿ ಗೇಟ್ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನ ಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…