ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಭಾರತ್ ಜೋಡೊ ಯಾತ್ರೆಯು ನಾಳೆ ರಾಜ್ಯಕ್ಕೆ ಪ್ರವೇಶ ಮಾಡಲಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಲನ್ನು ಮಾಡಿಕೊಳ್ಳಲಾಗಿದೆ.
ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ
ಭಾರತ್ ಜೋಡೋ ಪಾದ ಯಾತ್ರೆಯ ( ಅಕ್ಟೋಬರ್ 1 ಮತ್ತು 2ನೇ ತಾರೀಖು) 3ನೇ ದಿನ ಮೈಸೂರಿನ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ರಾಹುಲ್ಗಾಂಧಿ ಪೂಜೆ ಸಲ್ಲಿಸಲಿದ್ದಾರೆ.
ನಂತರ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರೆಯಲಿದ್ದು, ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನದ ಆವರಣದಲ್ಲಿ ತಂಗಲಿದೆ.
ಅ.3ರಂದು ಅಂದರೆ ನಾಲ್ಕನೆ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಆ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯು ಕೆನಲು ಗ್ರಾಮದ ವನಜಸುಂದರ ಸಭಾಂಗಣದಲ್ಲಿ ಉಪಾಹಾರ ಸೇವಿಸಿ ಟಿ.ಎಸ್.ಛತ್ರ ಗ್ರಾಮದಿಂದ ಮಂಡ್ಯ ಪ್ರವೇಶಿಸಲಿದೆ. ರಾತ್ರಿ ಅಲ್ಲಿನ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.
ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ. ನಾಗಮಂಗಲದ ಚೌಡೇನಹಳ್ಳಿ ಗೇಟ್ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…