ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಭಾರತ್ ಜೋಡೊ ಯಾತ್ರೆಯು ನಾಳೆ ರಾಜ್ಯಕ್ಕೆ ಪ್ರವೇಶ ಮಾಡಲಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಲನ್ನು ಮಾಡಿಕೊಳ್ಳಲಾಗಿದೆ.
ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ
ಭಾರತ್ ಜೋಡೋ ಪಾದ ಯಾತ್ರೆಯ ( ಅಕ್ಟೋಬರ್ 1 ಮತ್ತು 2ನೇ ತಾರೀಖು) 3ನೇ ದಿನ ಮೈಸೂರಿನ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ರಾಹುಲ್ಗಾಂಧಿ ಪೂಜೆ ಸಲ್ಲಿಸಲಿದ್ದಾರೆ.
ನಂತರ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರೆಯಲಿದ್ದು, ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನದ ಆವರಣದಲ್ಲಿ ತಂಗಲಿದೆ.
ಅ.3ರಂದು ಅಂದರೆ ನಾಲ್ಕನೆ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಆ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯು ಕೆನಲು ಗ್ರಾಮದ ವನಜಸುಂದರ ಸಭಾಂಗಣದಲ್ಲಿ ಉಪಾಹಾರ ಸೇವಿಸಿ ಟಿ.ಎಸ್.ಛತ್ರ ಗ್ರಾಮದಿಂದ ಮಂಡ್ಯ ಪ್ರವೇಶಿಸಲಿದೆ. ರಾತ್ರಿ ಅಲ್ಲಿನ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.
ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ. ನಾಗಮಂಗಲದ ಚೌಡೇನಹಳ್ಳಿ ಗೇಟ್ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…