ಮೈಸೂರು : ಕಾಂಗ್ರೆಸ್ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಭಾರತ್ ಜೋಡೊ ಯಾತ್ರೆಯು ನಾಳೆ ರಾಜ್ಯಕ್ಕೆ ಪ್ರವೇಶ ಮಾಡಲಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಲನ್ನು ಮಾಡಿಕೊಳ್ಳಲಾಗಿದೆ.
ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ
ಭಾರತ್ ಜೋಡೋ ಪಾದ ಯಾತ್ರೆಯ ( ಅಕ್ಟೋಬರ್ 1 ಮತ್ತು 2ನೇ ತಾರೀಖು) 3ನೇ ದಿನ ಮೈಸೂರಿನ ಬದನವಾಳು ಖಾದಿ ಗ್ರಾಮೋದ್ಯಮ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ರಾಹುಲ್ಗಾಂಧಿ ಪೂಜೆ ಸಲ್ಲಿಸಲಿದ್ದಾರೆ.
ನಂತರ ಕಡಕೋಳ ಕೈಗಾರಿಕಾ ಪ್ರದೇಶದಿಂದ ಪಾದಯಾತ್ರೆ ಮುಂದುವರೆಯಲಿದ್ದು, ಮೈಸೂರು ನಗರದ ಅರಮನೆ ಮೈದಾನದ ಎದುರಿನ ವಸ್ತು ಪ್ರದರ್ಶನದ ಆವರಣದಲ್ಲಿ ತಂಗಲಿದೆ.
ಅ.3ರಂದು ಅಂದರೆ ನಾಲ್ಕನೆ ದಿನ ಮೈಸೂರಿನಿಂದ ಯಾತ್ರೆ ಆರಂಭಗೊಳ್ಳಲಿದೆ ಆ ದಿನಗಳಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭಗೊಂಡಿರುತ್ತದೆ. ಇಲ್ಲಿಂದ ಹೊರಟ ಯಾತ್ರೆಯು ಕೆನಲು ಗ್ರಾಮದ ವನಜಸುಂದರ ಸಭಾಂಗಣದಲ್ಲಿ ಉಪಾಹಾರ ಸೇವಿಸಿ ಟಿ.ಎಸ್.ಛತ್ರ ಗ್ರಾಮದಿಂದ ಮಂಡ್ಯ ಪ್ರವೇಶಿಸಲಿದೆ. ರಾತ್ರಿ ಅಲ್ಲಿನ ಶ್ರೀ ವೆಂಕಟರಮಣಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಉಳಿದುಕೊಳ್ಳಲಿದೆ.
ಅ.4 ಮತ್ತು 5ರಂದು ಪಾದಯಾತ್ರೆಗೆ ವಿಶ್ರಾಂತಿ ಇದ್ದು, ಏಳನೆ ದಿನ ಮಂಡ್ಯದ ಶ್ರೀ ಮಹದೇಶ್ವರ ದೇವಸ್ಥಾನದಿಂದ ಪುನರಾರಂಭಗೊಳ್ಳಲಿದೆ. ನಾಗಮಂಗಲದ ಚೌಡೇನಹಳ್ಳಿ ಗೇಟ್ನಿಂದ ನಡೆಯುವ ಪಾದಯಾತ್ರೆ ರಾತ್ರಿ ಎಂ.ಹೊಸೂರು ಗೇಟ್ನ ಬರಮದೇವರಹಳ್ಳಿಯಲ್ಲಿ ತಂಗಲಿದೆ. ಎಂಟನೆ ದಿನ ವಿಸ್ಡಂ ಶಾಲೆಯಿಂದ ಆರಂಭಗೊಂಡು ನಾಗಮಂಗಲದ ಅಂಚೆಚಿಟ್ಟನಹಳ್ಳಿಯಿಂದ ಮುಂದುವರೆದು ಆದಿಚುಂಚನಗಿರಿ ಮಠದ ಬೇಳ್ಳುರು ಟೌನ್ನಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…