ಜಿಲ್ಲೆಗಳು

ಭೀಮಾ ಕೊರೆಗಾಂವ್ ವಿಜಯೋತ್ಸವ ಪ್ರಯುಕ್ತ ಭೀಮ ಸಂದೇಶ ಯಾತ್ರೆ

 ಭೀಮಾ ಕೊರೆಗಾಂವ್ ವಿಜಯೋತ್ಸವ ಪ್ರಯುಕ್ತ

ಚಾಮರಾಜನಗರ: ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಘಟಕ ವತಿಯಿಂದ ಊರೂರಿಗೆ ಭೀಮಸಂದೇಶ ಯಾತ್ರೆಯನ್ನು ಡಿ.೨೩ ರಿಂದ ಜ.೧ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿವಿಎಫ್ ಜಿಲ್ಲಾಧ್ಯಕ್ಷ ಎಸ್.ಬಿ.ಚಂದ್ರಕಾಂತ್ ತಿಳಿಸಿದರು.
ಡಿ.೨೩ ಶುಕ್ರವಾರ ರಂದು ಬೆಳಿಗ್ಗೆ ೮ ಗಂಟೆಗೆ ನಗರದ ರಾಮಸಮುದ್ರ ಬಡಾವಣೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗಣ್ಯರು ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಹಾರಾಷ್ಟ್ರದ ಚೈತ್ಯ ಭೂಮಿಯಿಂದ ಅಂಬೇಡ್ಕರ್ ಜ್ಯೋತಿ ಆಗಮಿಸಲಿದೆ. ತಾಲ್ಲೂಕಿನ ೧೦ ಗ್ರಾಮಗಳಲ್ಲಿ ಸಂಚರಿಸುವ ಯಾತ್ರೆಗೆ ಆಯಾಯ ಗ್ರಾಮಗಳ ಬಹುಜನರು ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಳ್ಳುವ ಮೂಲಕ ಯಾತ್ರೆಯನ್ನು ಯಶ್ವಸಿಗೊಳಿಸಬೇಕು ಎಂದು ಮನವಿ ಮಾಡಿದರು.
ಮಹಾರಾಷ್ಟçದ ಶೋಷಿತ ಸಮುದಾಯದ ಮಹರ್ ಸೈನಿಕರು ಪೇಶ್ವೆಗಳ ವಿರುದ್ದ ಹೋರಾಟ ಮಾಡಿ ಗೆದ್ದು ಬೀಗಿದ ಸಾಹಸಗಾಥೆಯನ್ನು ಮತು ಡಾ.ಬಿ.ಆರ್.ಅಂಬೇಡ್ಕರ್ ಅವರು ಬದುಕಿರುವ ತನಕ ಪ್ರತಿ ವರ್ಷ ಕೋರೆಗಾಂವ್ ಸ್ಥಳಕ್ಕೆ ತೆರಳಿ ವಿಜಯೋತ್ಸವ ಆಚರಿಸುತ್ತಿದ್ದ ಕುರಿತ ವಿಚಾರವನ್ನು ಪ್ರತಿ ಗ್ರಾಮದಲ್ಲಿ ೩೦ ನಿಮಿಷಗಳು ತಿಳಿಸಲಾಗುವುದು ಎಂದರು.
ಸಮಾರೋಪ ಸಮಾರಂಭ : ಡಿ.೩೦ ರಂದು ನಗರದ ಪ್ರಮುಖ ಬೀದಿಗಳಲ್ಲಿ ಯಾತ್ರೆ ಸಂಚರಿಸಲಿದ್ದು, ಜ.೧ ರಂದು ಭಾನುವಾರ ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲಾವರಣದಲ್ಲಿ ಊರೂರಿಗೆ ಭೀಮ ಸಂದೇಶ ಯಾತ್ರೆಯ ಸಮಾರೋಪ ಸಮಾರಂಭವು ಸಂಜೆ ೪ ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಗೋಷ್ಠಿಯಲ್ಲಿ ಜಿಲ್ಲಾ ಸಂಯೋಜಕರಾದ ರವಿಮೌರ್ಯ, ಆಶ್ರೀತ್, ತಾಲೂಕು ಅಧ್ಯಕ್ಷ ಮನೋಜ್ ನಾಗಬೌದ್ದ, ಸದಸ್ಯರಾದ ರಾಜು, ಸಿದ್ದರಾಜು ಹೊಸಳ್ಳಿ, ಅಭಿ ಹಾಜರಿದ್ದರು.

andolanait

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

2 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

5 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

5 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

5 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

5 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

5 hours ago