ಜಿಲ್ಲೆಗಳು

ಭೀಮಾ ಕೊರೆಗಾಂವ್ ವಿಜಯೋತ್ಸವ ಪ್ರಯುಕ್ತ ಭೀಮ ಸಂದೇಶ ಯಾತ್ರೆ

 ಭೀಮಾ ಕೊರೆಗಾಂವ್ ವಿಜಯೋತ್ಸವ ಪ್ರಯುಕ್ತ

ಚಾಮರಾಜನಗರ: ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ಜಿಲ್ಲಾ ಘಟಕ ವತಿಯಿಂದ ಊರೂರಿಗೆ ಭೀಮಸಂದೇಶ ಯಾತ್ರೆಯನ್ನು ಡಿ.೨೩ ರಿಂದ ಜ.೧ ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಬಿವಿಎಫ್ ಜಿಲ್ಲಾಧ್ಯಕ್ಷ ಎಸ್.ಬಿ.ಚಂದ್ರಕಾಂತ್ ತಿಳಿಸಿದರು.
ಡಿ.೨೩ ಶುಕ್ರವಾರ ರಂದು ಬೆಳಿಗ್ಗೆ ೮ ಗಂಟೆಗೆ ನಗರದ ರಾಮಸಮುದ್ರ ಬಡಾವಣೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗಣ್ಯರು ಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮಹಾರಾಷ್ಟ್ರದ ಚೈತ್ಯ ಭೂಮಿಯಿಂದ ಅಂಬೇಡ್ಕರ್ ಜ್ಯೋತಿ ಆಗಮಿಸಲಿದೆ. ತಾಲ್ಲೂಕಿನ ೧೦ ಗ್ರಾಮಗಳಲ್ಲಿ ಸಂಚರಿಸುವ ಯಾತ್ರೆಗೆ ಆಯಾಯ ಗ್ರಾಮಗಳ ಬಹುಜನರು ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಳ್ಳುವ ಮೂಲಕ ಯಾತ್ರೆಯನ್ನು ಯಶ್ವಸಿಗೊಳಿಸಬೇಕು ಎಂದು ಮನವಿ ಮಾಡಿದರು.
ಮಹಾರಾಷ್ಟçದ ಶೋಷಿತ ಸಮುದಾಯದ ಮಹರ್ ಸೈನಿಕರು ಪೇಶ್ವೆಗಳ ವಿರುದ್ದ ಹೋರಾಟ ಮಾಡಿ ಗೆದ್ದು ಬೀಗಿದ ಸಾಹಸಗಾಥೆಯನ್ನು ಮತು ಡಾ.ಬಿ.ಆರ್.ಅಂಬೇಡ್ಕರ್ ಅವರು ಬದುಕಿರುವ ತನಕ ಪ್ರತಿ ವರ್ಷ ಕೋರೆಗಾಂವ್ ಸ್ಥಳಕ್ಕೆ ತೆರಳಿ ವಿಜಯೋತ್ಸವ ಆಚರಿಸುತ್ತಿದ್ದ ಕುರಿತ ವಿಚಾರವನ್ನು ಪ್ರತಿ ಗ್ರಾಮದಲ್ಲಿ ೩೦ ನಿಮಿಷಗಳು ತಿಳಿಸಲಾಗುವುದು ಎಂದರು.
ಸಮಾರೋಪ ಸಮಾರಂಭ : ಡಿ.೩೦ ರಂದು ನಗರದ ಪ್ರಮುಖ ಬೀದಿಗಳಲ್ಲಿ ಯಾತ್ರೆ ಸಂಚರಿಸಲಿದ್ದು, ಜ.೧ ರಂದು ಭಾನುವಾರ ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲಾವರಣದಲ್ಲಿ ಊರೂರಿಗೆ ಭೀಮ ಸಂದೇಶ ಯಾತ್ರೆಯ ಸಮಾರೋಪ ಸಮಾರಂಭವು ಸಂಜೆ ೪ ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು.
ಗೋಷ್ಠಿಯಲ್ಲಿ ಜಿಲ್ಲಾ ಸಂಯೋಜಕರಾದ ರವಿಮೌರ್ಯ, ಆಶ್ರೀತ್, ತಾಲೂಕು ಅಧ್ಯಕ್ಷ ಮನೋಜ್ ನಾಗಬೌದ್ದ, ಸದಸ್ಯರಾದ ರಾಜು, ಸಿದ್ದರಾಜು ಹೊಸಳ್ಳಿ, ಅಭಿ ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago